ವಿಜಯಪುರ | ಲೋಕಸಭೆ ಚುನಾವಣೆ ಕಾಂಗ್ರೆಸ್ ಪರ ಹೆಜ್ಜೆ ಗುರುತಾಗಲಿದೆ: ಸಚಿವ ಎಂ.ಬಿ ಪಾಟೀಲ್

Date:

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು ಕಾಣಲಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಪರ ಬುಧವಾರ (ಮಾ.27) ನಗರದ ಕಿತ್ತೂರು ಚೆನ್ನಮ್ಮ ಭವನದಲ್ಲಿ ನಡೆದ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ್ದ ಬಹುತೇಕ ಭರವಸೆಯನ್ನು ಈಡೇರಿಸಿದ್ದಾರೆ. ಕಳೆದ ಬಿಜೆಪಿಯ ಯಡಿಯೂರಪ್ಪರ ಸರಕಾರ ನೀಡಿದ್ದ ಆರು ನೂರು ಭರವಸೆಯಲ್ಲಿ ಐದು ನೂರಕ್ಕೂ ಹೆಚ್ಚು ಭರವಸೆಗಳು ಹಾಗೇ ಉಳಿದಿವೆ. ಇದಲ್ಲದೇ ದೇಶದಲ್ಲಿ ಸಾಮಾನ್ಯರ ಜೀವನ ಸ್ಥಿತಿ ಚಿಂತಾಜನಕವಾಗಿದ್ದು, ಇದೆಲ್ಲ ಮರೆ ಮಾಚಲು ಬರೀ ಭಾವನಾತ್ಮಕ ವಿಚಾರಗಳನ್ನು ಅವರು ಎತ್ತುತ್ತಿದ್ದಾರೆ. ಜನರಿಗೆ ಇವರ ಆಟ ಆರ್ಥವಾಗಿದೆ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜು ಆಲಗೂರ ಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಇದರಲ್ಲಿ ಯಾವ ಸಂಶಯವೂ ಇಲ್ಲ. ಇವರ ಬೆನ್ನಿಗೆ ನಮ್ಮ ಗ್ಯಾರಂಟಿಗಳ ಅಭಯವಿದೆ. ರಾಜ್ಯ ಸರಕಾರದ ಜನಪರ ಆಡಳಿತದ ಬೆಂಬಲವಿದೆ. ಚುನಾವಣೆಯಲ್ಲಿ ಧೈರ್ಯವಾಗಿ ಮತ ಕೇಳುವ ನೈತಿಕ ಹಕ್ಕು ನಮಗಿದೆ. ಪಕ್ಷದ ಎಲ್ಲರೂ ಸಂಘಟಿತರಾಗಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಬಹು ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಗೆಲ್ಲುವ ಕಾಲ ಕೂಡಿ ಬಂದಿದೆ ಎಂದು ಹೇಳಿದರು.

ರಾಜು ಆಲಗೂರ್ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮನ್ನು ಬೆಂಬಲಿಸಲು ಕೋರಿದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇದನ್ನು ನಾವು ಹೇಳುತ್ತಿಲ್ಲ, ಬಿಜೆಪಿಗೆ ಅಡಿಪಾಯ ಹಾಕಿದ ದೊಡ್ಡ ನಾಯಕರೇ ಹೇಳಿದ್ದಾರೆ. ಇದು ನೂರಾ ನಲವತ್ತು ಕೋಟಿ ಜನರ ಭವಿಷ್ಯ ನಿರ್ಮಿಸುವ ಚುನಾವಣೆ.

ಇದು ಸವಾಲಿನ ಚುನಾವಣೆ, ಈ ಸಲ ನಮ್ಮ ಅಭಿವೃದ್ಧಿ ಕಾರ್ಯಗಳೇ ನಮಗೆ ಗೆಲುವಿನ ‘ಗ್ಯಾರಂಟಿ’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕರು ಹೇಳಿದರು. ಆರು ಜನ ಶಾಸಕರಿದ್ದು, ಪ್ರತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ. ಬಿಜೆಪಿಗೆ ಸುಳ್ಳೇ ಬಂಡವಾಳ, ಕಾಂಗ್ರೆಸ್‌ಗೆ ಜನಪರ ಕೆಲಸಗಳೇ ಆಧಾರ ಎಂದು ಸಭೆಯಲ್ಲಿದ್ದ ನಾಲ್ವರು ಶಾಸಕರು ಹೇಳಿದರು. ಬೂತ್ ಮಟ್ಟದಲ್ಲಿ ಲೋಕಸಭೆ ಚುನಾವಣೆ ಎದುರಿಸಲು ನಿರ್ಧರಿಸಿದರು.

ವಿಠ್ಠಲ ಕಟಕದೊಂಡ, ಸುನೀಲಗೌಡ ಪಾಟೀಲ, ಅಶೋಕ ಮನಗೂಳಿ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಮಕ್ಬೂಲ್ ಬಾಗವಾನ, ಹಮೀದ್ ಮುಶ್ರೀಫ್, ಕಾಂತಾ ನಾಯಕ, ವಿದ್ಯಾರಾಣಿ ತುಂಗಳ, ಸುಭಾಶ ಛಾಯಾಗೋಳ, ಡಿ.ಎಲ್. ಚೌಹಾಣ್, ಮಲ್ಲಣ್ಣ ಸಾಲಿ, ಅರ್ಜುನ ರಾಠೋಡ, ಸುಜಾತಾ ಕಳ್ಳಿಮನಿ, ಎಸ್.ಎಂ.ಪಾಟೀಲ ಗಣಿಹಾರ, ಆರ್.ಆರ್.ಪಾಟೀಲ, ಬಸವರಾಜ ದೇಸಾಯಿ, ಸಿದ್ದು ಗೌಡನವರ, ಈರನಗೌಡ ಬಿರಾದಾರ, ಇಲಿಯಾಸ ಬೋರಾಮಣಿ, ಅಬ್ದುಲ್ ರಜಾಕ್ ಹೊರ್ತಿ, ಕನ್ನಾನ ಮುಶ್ರಿಫ್, ಆರತಿ ಶಹಾಪುರ, ಬಿ. ಎಸ್. ಪಾಟೀಲ ಯಾಳಗಿ, ಟಪಾಲ್ ಎಂಜಿನಿಯರ್ ಸೇರಿದಂತೆ ನಗರ ಪಾಲಿಕೆ ಸದಸ್ಯರು, ವಿಡಿಎ ಅಧ್ಯಕ್ಷರು, ಸದಸ್ಯರು, ಜಿಲ್ಲೆಯ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು ಅನೇಕರಿದ್ದರು.

ಸಂಗಮೇಶ ಬಬಲೇಶ್ವರ ಸ್ವಾಗತಿಸಿದರು, ಶಬ್ಬೀರ್ ಜಾಹಗೀರದಾರ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...