ವಿಜಯಪುರ | ಎಸ್‌ಐಆರ್ ಗೆ ಬಲಿ ಪಶುಗಳಾಗುವವರು; ಎಲ್ಲಾ ಜಾತಿ, ಧರ್ಮಿಯರು: ಚಿಂತಕ ಶಿವಸುಂದರ್

Date:

‘ಎಸ್‌ಐಆರ್‌ ಗೆ ಬಲಿಗೆ ಪಶುಗಳಾಗುವವರಲ್ಲಿ ಮೊದಲಿಗರು ಎಲ್ಲ ಜಾತಿ, ಧರ್ಮಕ್ಕೆ ಸೇರಿದ ಮಹಿಳೆಯರು, ಬಳಿಕ ಮುಸ್ಲಿಮರು, ದಲಿತರು, ವಲಸೆ ಕಾರ್ಮಿಕರು, ಅನಾಥರು. ಈ ದೇಶದ ಅಂಚಿನಲ್ಲಿರುವ ಜನರು ಎಸ್‌ಐಆರ್ ನಿಂದ ಹೊರಗುಳಿಯಲಿದ್ದಾರೆ’ ಎಂದು ಪ್ರಗತಿಪರ ಚಿಂತಕ ಶಿವಸುಂದರ್ ಹೇಳಿದರು.

ವಿಜಯಪುರದ ಡಾ. ಬಿಆರ್ ಅಂಬೇಡ್ಕರ್ ಸಭಾಭವನದಲ್ಲಿ ಮೇ ಸಾಹಿತ್ಯ ಮೇಳ ಬಳಗ, ಲಡಾಯಿ ಪ್ರಕಾಶನ, ದಲಿತ ವಿದ್ಯಾರ್ಥಿ ಪರಿಷತ್ತು, ಎಂ.ಎಂ.ಡಿ.ಸಿ. ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿ.ಎನ್.ಎಫ್.ಇ ಸಂಘಟನೆಗಳ ಆಶ್ರಯದಲ್ಲಿ ‘ಎಸ್.ಐ.ಆರ್: ಪೌರತ್ನದ ಪ್ರಶ್ನೆ-ಪ್ರಭುತ್ವದ ಹುನ್ನಾರಗಳು’ ಕುರಿತು ಏರ್ಪಡಿಸಿದ್ದ ಸಂವಾದಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆ‌ರ್ ಮೂಲ ಉದ್ದೇಶವೇನೆಂದರೆ ಈ ದೇಶದಲ್ಲಿ ಮತದಾನ ಹಕ್ಕು ಯಾರಿಗೆ ಇರಬೇಕು. ಈ ದೇಶ ಯಾರಿಗೆ ಸೇರಬೇಕು ಎಂದು ನಿರ್ಣಯಿಸುವ ದೊಡ್ಡ ಷಡ್ಯಂತ್ರ ಒಳಗೊಂಡಿದೆ.’ಭಾರತ ಚುನಾವಣಾ ಆಯೋಗವು ಆರಂಭಿಸಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿಯಾಗಿದೆ. ಇದರ ವಿರುದ್ಧ ವ್ಯಾಪಕ ಜನಾಂದೋಲನದ ಅಗತ್ಯವಿದೆ. ಎಸ್‌ಐಆ‌ರ್ ಬಗ್ಗೆ ಕಾಂಗ್ರೆಸ್ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಸಿಎಂ ಆದಿಯಾಗಿ ಎಲ್ಲರಿಂದ ಪ್ರತಿರೋಧ ವ್ಯಕ್ತವಾಗಬೇಕು. ಕಾಂಗ್ರೆಸ್ ಉಳಿಯಬೇಕು ಎಂದಾದರೆ ಎಸ್‌ಐಆ‌ರ್ ವಿರುದ್ಧ ಹೋರಾಟ ರೂಪಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಎಸ್ ಎಂ ಪಾಟೀಲ (ಗಣಿಹಾರ) ಮಾತನಾಡಿ, ಎಸ್‌ಐಆ‌ರ್ ರದ್ದಾಗಲೇ ಬೇಕು. ಇಲ್ಲವಾದರೆ ಪ್ರಜಾಪ್ರಭುತ್ವವೇ ರದ್ದಾಗಲಿದೆ. ಈ ಹಿಂದೆ ಎನ್‌ಆರ್‌ಸಿ, ರೈತ ವಿರೋಧಿ ನಾಲ್ಕು ಕಾನೂನುಗಳ ವಿರುದ್ಧ ನಡೆದ ಹೋರಾಟದ ಮಾದರಿಯಲ್ಲಿ ನಾವೆಲ್ಲರೂ ಒಂದಾಗಿ ವಿರೋಧಿಸಬೇಕಾಗಿದೆ. ಇದರ ತಡೆಗೆ ಜನಾಂದೋಲನವೊಂದೇ ದಾರಿ ಎಂದು ಹೇಳಿದರು.

ಇದನ್ನೂ ಓದಿ ವಿಜಯಪುರ | ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ: ಡಾ. ಅಶೋಕ ಪಾಟೀಲ

ಹಿರಿಯ ಪತ್ರಕರ್ತ ಅನಿಲ್ ಹೊಸಮನಿ, ಲಾಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ, ಫಾದರ್ ಕೆವಿನ್, ಬಿ. ಭಗವಾನ್ ರೆಡ್ಡಿ, ಎಂ.ಸಿ.ಮುಲ್ಲಾ, ರಾಜಶೇಖರ ಯಡಹಳ್ಳಿ, ಕೆ.ಎಫ್. ಅಂಕಲಗಿ, ಪ್ರೇಮಾ ಕೋಳಿ, ಸುರೇಖಾ ರಜಪೂತ, ಶ್ರೀನಾಥ ಪೂಜಾರಿ, ಯೂಸುಫ್ ನೇವಾರ ಇದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...