ವಿಜಯಪುರ | ಯುಗಾದಿ ಸಂಭ್ರಮದಲ್ಲಿದ್ದ ಮೂವರು ಬಾಲಕರು ನೀರುಪಾಲು

Date:

ಯುಗಾದಿ ಹಬ್ಬದ ಹಿನ್ನೆಲೆ ಸ್ನಾನಕ್ಕೆಂದು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದೆ.

ಮೂವರು ಮೃತರನ್ನು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಭಾನುವಾರವೇ ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಎಂಬಾತನ ಶವ ಪತ್ತೆಯಾಗಿದ್ದು, ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಸೋಮವಾರ ಸಂಜೆಯವರೆಗೂ ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದ್ದು, ಶವಗಳು ಪತ್ತೆಯಾಗಿಲ್ಲ.

ಯುಗಾದಿ ಅಮವಾಸ್ಯೆಗೆ ತಮ್ಮ ತಮ್ಮ ಗ್ರಾಮಗಳ ದೇವರ ಪಲ್ಲಕ್ಕಿಯೊಂದಿಗೆ ಆಲಮಟ್ಟಿಯ ಕೃಷ್ಣಾ ನದಿಗೆ ಆಗಮಿಸಿ, ಪಲ್ಲಕ್ಕಿ ಶುಚಿಗೊಳಿಸುವುದು ಸಂಪ್ರದಾಯ. ಅದೇ ರೀತಿ ಇಲ್ಯಾಳ ಗ್ರಾಮದಿಂದ ಬೊಮ್ಮಲಿಂಗೇಶ್ವರ ದೇವರ ಪಲ್ಲಕ್ಕಿಯೊಂದಿಗೆ ಈ ಮೂವರು ಆಗಮಿಸಿದ್ದರು. ಒಟ್ಟು ಐವರು ನದಿಗೆ ಸ್ನಾನಕ್ಕೆ ಇಳಿದಿದ್ದರು. ನದಿಯ ಆಳ ಗೊತ್ತಿಲ್ಲದ ಐವರು ಮುಳುಗತೊಡಗಿದರು. ತಕ್ಷಣವೇ ಸಮೀಪದಲ್ಲಿಯೇ ಇದ್ದ ಇನ್ನಿತರರು ಇಬ್ಬರನ್ನು ರಕ್ಷಿಸಿದರು. ಆದರೆ ಈ ಮೂವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಹರನಾಳ ಗ್ರಾಪಂ ಅವ್ಯವಹಾರ ಖಂಡಿಸಿ ದಸಂಸ ಪ್ರತಿಭಟನೆ

ಸ್ಥಳೀಯ ಮೀನುಗಾರರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಶವ ಹುಡುಕಾಟವನ್ನು ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...