ವಿಜಯಪುರ | ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ: ಬೃಹತ್ ಪ್ರತಿಭಟನೆ ಎಚ್ಚರಿಕೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ, ರೈತರಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಕರ್ನಾಟಕ ರಸ್ತೆ ಅಭಿವೃದ್ಧಿ ಆರಕ್ಷಕರಿಗೆ ಎಚ್ಚರಿಕೆ ಪತ್ರ ಬರೆದಿದ್ದಾರೆ.

ಹುನಗುಂದದಿಂದ ತಂಗಡಗಿ ಮಾರ್ಗವಾಗಿ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಕಾಗದದಲ್ಲಿ ಪೂರ್ಣಗೊಳಿಸಲಾಗಿದೆ. ಈ ರಸ್ತೆಯು ಹಾಯ್ದು ಹೋಗುವ ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ವಾಸವಾಗಿದ್ದಾರೆ.

ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತವೆ. ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ. ಹೀಗಿದ್ದರೂ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ. ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೆ ಹಾಗೆಯೇ ಬಿಡಲಾಗಿದೆ. ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಅವುಗಳು ಮಳೆ ನೀರಿನಿಂದ ತುಂಬಿಕೊಂಡು ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಿವೆ. ಈ ಬಗ್ಗೆ 4 ವರ್ಷಗಳ ಹಿಂದೆಯೇ ಕರ್ನಾಟಕ ರಸ್ತೆ ಅಭಿವೃದ್ಧಿ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಿದರೂ, ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಬಹು ಉಪಯೋಗಿ ಹಲಸಿಗೆ ಬಹು ಬೇಡಿಕೆ

ಸಂಘಟನೆ ವತಿಯಿಂದ ಅಧಿಕಾರಿಗಳಿಗೆ 15 ದಿನಗಳ ಗಡುವು ನೀಡುತ್ತಿದ್ದು, ಕೂಡಲೇ ಪರಿಹಾರ ಪಡೆದ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಗಳನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ, ರೈತರಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...