ವಿಜಯಪುರ | ಇಂಗಳೇಶ್ವರ ಮಠದ ಚನ್ನಬಸವ ಶ್ರೀಗೆ ಗೌರವ ಸಮರ್ಪಣೆ

Date:

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಇಂಗಳೇಶ್ವರ ವಿರಕ್ತಮಠದ ಹಿರಿಯ ಪೂಜ್ಯರಾದ ಶ್ರೀ ಚನ್ನಬಸವ ಸ್ವಾಮೀಜಿ ಅವರನ್ನು ಜಿಲ್ಲಾ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸನ್ಮಾನ ಮಾಡಿ ಗೌರವ ಸಮರ್ಪಿಸಿದರು.

ಜಿಲ್ಲಾ ಕಸಾಪ ಗೌರವ ಸಲಹೆಗಾರ ಡಾ. ವಿ ಡಿ ಐಹೊಳ್ಳಿ ಮಾತನಾಡಿ, “ಬಹುಕಾಲದವರೆಗೆ ವಚನ ಸಾಹಿತ್ಯದ ಸೇವೆ ಮಾಡುತ್ತ ಅಪರೂಪದ ವಚನ ಶಿಲಾ ಮಂಟಪವನ್ನು ಸ್ಥಾಪಿಸಿ ನಾಡಿನ ಘನತೆ, ಗೌರವವನ್ನು ಹೆಚ್ಚಿಸಿದ ಶ್ರೀಗಳು ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಎಲ್ಲ ಶ್ರೀಗಳಿಗೂ ಹಾಗೂ ಸಾಹಿತಿಗಳಿಗೂ ವಿಶೇಷವಾಗಿ ಅನೇಕ ಕನ್ನಡಪರ ಸಂಘಟನೆಗಳಿಗೂ ಅತೀವ ಸಂತೋಷವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ಶ್ರೀಗಳಿಂದ ಇನ್ನೂ ಹೆಚ್ಚಿನ ಮಾರ್ಗದರ್ಶನ ಸಿಗುವಂತಾಗಲಿ” ಎಂದರು.

ಬಸವನ ಬಾಗೇವಾಡಿ ತಾಲೂಕಿನ ಹಿರಿಯ ಸಾಹಿತಿ ವಿವೇಕಾನಂದ ಕಲ್ಯಾಣ ಶೆಟ್ಟಿ ಮಾತನಾಡಿ, “ಶ್ರೀಗಳು ಕನ್ನಡದ ಅಭಿಮಾನಿಗಳು. ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರವಾಗಿದ್ದು, ಅದನ್ನು ಉಳಿಸಿ ಬೆಳೆಸಿದ ಕೀರ್ತಿ ಇಂಗಳೇಶ್ವರ ವಿರಕ್ತಮಠಕ್ಕೆ ಸಲ್ಲುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ರೈತರಿಗೆ ಸಹಕರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ: ಮಹಾಪ್ರಬಂಧಕ ಕಮ್ಮೂರ

ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಅಭಿಷೇಕ ಚಕ್ರವರ್ತಿ, ಡಾ. ಮಾಧವಗುಡಿ, ಸುರೇಶ ಜತ್ತಿ, ಜಯಶ್ರೀ ಹಿರೇಮಠ, ಶಿವಾನಂದ ಡೋಣೂರ, ಬಸವರಾಜ ಮೇಟಿ, ಶಿವಪುತ್ರ ಅಂಕದ, ಅರವಿಂದ ಕುಲಕರ್ಣಿ, ಕುಮಾರಗೌಡ ಪಾಟೀಲ, ರಾಹುಲ್ ಜಾಧವ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...