ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ, ‘ಎನ್ಸಿಟಿಇ ನಿಯಮಗಳು ಮತ್ತು ಮಾನದಂಡಗಳ ಹಿನ್ನೆಲೆಯಲ್ಲಿ ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಇದೇ 19, 20ರಂದು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕನ್ನಡ ಭವನದಲ್ಲಿ 19ರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ನವದೆಹಲಿ ಎನ್ಸಿಟಿಇ ಎಸ್ಆರ್ಸಿ ಅಧ್ಯಕ್ಷೆ ಡಾ. ಮೀನಾ ಆರ್ ಚಂದಾವರ್ಕರ್ ಭಾಗವಹಿಸಲಿದ್ದು, ಮಹಿಳಾ ವಿವಿಯ ಹಂಗಾಮಿ ಕುಲಪತಿ ಶಾಂತಾದೇವಿ ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶಾಲಾ ಶಿಕ್ಷಣ ವಿಭಾಗದ ಡೀನ್ ಮತ್ತು ಅಧ್ಯಕ್ಷ, ಪ್ರೊ. ಜಿ ಆರ್ ಅಂಗಡಿ, ಗೌರವ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಶಿಕ್ಷಣ ವಿಭಾಗದ ಡೀನ್ ಪ್ರೊ. ಸಕ್ಸಾಲ್ ಹೂವಣ್ಣ, ಬಿಪಿಎಸ್ ಅಧ್ಯಕ್ಷ ಪ್ರೊ. ಬಸವರಾಜ ಎಲ್ ಲಕ್ಕಣ್ಣವರ್ ಭಾಗವಹಿಸಲಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಗಾರದಲ್ಲಿ ವಿವಿಧ ತಜ್ಞರು ವಿಶೇಷ ಉಪನ್ಯಾಸ ನೀಡಲಿದ್ದು, ಗುಂಪು ಚರ್ಚೆ ಮತ್ತು ಸಂವಾದಗಳು ನಡೆಯಲಿವೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾನಪದ ಎಂಬುದು ಸಾವಿಲ್ಲದ ಗಾಯನ: ಟಿಎಚ್ಎಂ ಬಸವರಾಜ್
ಸಮಾರೋಪ ಸಂಮಾರಂಭ: ಜೂನ್ 20ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಶಿಕ್ಷಣ ನಿಖಾಯದ ಡೀನ್ ಪ್ರೊ.ಸಕ್ಸಾಲ್ ಹೂವಣ್ಣ, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಬಸವರಾಜ ಎಲ್ ಲಕ್ಕಣ್ಣವರ್, ಪ್ರೊ.ವೆಂಕೋಬ ನಾರಾಯಣಪ್ಪ, ಪ್ರೊ.ಎಂ ಶಿಂಧೆ, ಪ್ರೊ. ಯು ಕೆ ಕುಲಕರ್ಣಿ, ಪ್ರೊ. ಎ ಬಿ ಸುರಪುರ, ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ ಸೌಭಾಗ್ಯ, ಡಾ. ಪ್ರಕಾಶ್, ವೈ ಸಣ್ಣಕ್ಕನವರ್ ಸೇರಿದಂತೆ ಇತರರು ಇರಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.





