ವಿಜಯಪುರ | ಅನಧಿಕೃತವಾಗಿ ಟೋಲ್ ಹಣ ಸಂಗ್ರಹ; ರಾಜ್ಯ ರೈತ ಸಂಘ ಆಕ್ರೋಶ

Date:

ಮುಳವಾಡ ಸಮೀಪದಲ್ಲಿ ಟೋಲನ್ನು ಏಕಾಏಕಿ ಪ್ರಾರಂಭಿಸಿ ಅನಧಿಕೃತವಾಗಿ ಟೋಲ್ ಹಣ ಸಂಗ್ರಹಣೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸಿ ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಮೇಲುಸೇತುವೆ ಕಾಮಗಾರಿ ಮುಗಿದ ಬಳಿಕ ಟೋಲ್ ಹಣ ಸಂಗ್ರಹಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿ‌ಸಿದರು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, “ರೈಲ್ವೆ ಮೇಲುಸೇತುವೆಯನ್ನು ಸಂಪೂರ್ಣ ನಿರ್ಮಿಸದೆ ಟೋಲ್ ಹಣ ಸಂಗ್ರಹಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಹೆದ್ದಾರಿಯವರು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ವಾಹನದಲ್ಲಿ ಒಂದು ಗ್ಲಾಸ್ ನೀರು ಇಟ್ಟು ಚಲಿಸುವಾಗ ನೀರು ಚೆಲ್ಲಿದರೆ ಅಂತಹ ರಸ್ತೆಗಳಿಗೆ ತೆರಿಗೆ ಕಟ್ಟುವ ಹಾಗಿಲ್ಲ ಎಂಬಿತ್ಯಾದಿ ನಿಯಮಗಳಿವೆ. ಮೂಲಭೂತವಾಗಿ ಇರಬೇಕಾಗಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿದ ನಂತರವೇ ಟೋಲ್ ಸಂಗ್ರಹ ಮಾಡಬೇಕು” ಎಂದು ಆಗ್ರಹಿಸಿದರು.

ಕೊಲ್ಹಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, “ಟೋಲ್ ಪ್ಲಾಜ಼ಾದಿಂದ ಸುತ್ತಮುತ್ತಲಿನ ಮುಳವಾಡ ಮಲರ್ಘಾಣ, ಕಲಗುರಕಿ, ರೋಣಿಹಾಳ ಕುಬಕಡ್ಡಿ, ದುಡ್ಯಾಳ, ಕಾರಜೋಳ, ತೊನಶ್ಯಾಳ, ಹೊನಗನಹಳ್ಳಿ, ಚಿಕ್ಕ ಆಸಂಗಿ, ಹಿರೇ ಆಸಂಗಿ, ಕೊಲ್ಹಾರ ಸೇರಿದಂತೆ ಎಲ್ಲ ವಾಹನ ಸವಾರರಿಗೆ ಉಚಿತ ಹಾಗೂ ಶಾಶ್ವತವಾಗಿ ಪ್ರಯಾಣ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ ಮಾತನಾಡಿ, “ರೈತ ಸಂಘಟನೆ ಹಾಗೂ ಉಳಿದ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹಾಗೂ ಟೋಲ್‌ ಸಂಬಂಧಿಸಿದ ಅಧಿಕಾರಿಗಳೊಡನೆ ಸಭೆ ಮಾಡಿ ಒಂದು ತಿಂಗಳ ಕಾಲಾವಕಾಶ ತೆಗೆದುಕೊಂಡು ಎಲ್ಲ ಮೂಲಭೂತ ಸೌಕರ್ಯ ಮತ್ತು ರೇಲ್ವೆ ಸೇತುವೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ. ಎಂದರು.

“ಭರವಸೆ ದೊರೆತ ನಂತರ ಹೋರಾಟದ ನಿರ್ಧಾರ ಕೈ ಬಿಡಲಾಯಿತು. ಒಂದು ವೇಳೆ ಈ ತಿಂಗಳಲ್ಲಿ ನಮ್ಮ ಬೇಡಿಕೆಗಳನ್ನು ಬಗೆಹರೆಸದಿದ್ದರೆ ಟೋಲ್ ಬಂದ್ ಮಾಡಿ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಪರಿನಿಬ್ಬಾಣ ದಿನ

ಈ ವೇಳೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಹೆದ್ದಾರಿ ಅಧಿಕಾರಿಗಳೊಂದಿಗೆ ಮಾತನಾಡಿ, ಶೀಘ್ರದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಮತ್ತು ಒಂದು ತಿಂಗಳ ಕಾಲಾವಕಾಶದೊಳಗೆ ರೈಲ್ವೆ ಸೇತುವೆ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಮಠ, ವಿಜಯಪುರ ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ಉಪಾಧ್ಯಕ ಪ್ರಕಾಶ ತೇಲಿ, ರೋಣಿಹಾಳ ಅಧ್ಯಕ್ಷ ಬಸು ನ್ಯಾಮಗೊಂಡ, ಚಡಚಣ ಪ್ರಧಾನ ಕಾರ್ಯದರ್ಶಿ ಸೋಮು ಪಟ್ಟಣಶೆಟ್ಟಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...