ವಿಜಯಪುರ | ಶರಣರ ಎಲ್ಲ ಕುರುಹುಗಳನ್ನು ಉಳಿಸಿ ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ

Date:

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಡಿ ಇದ್ದ ಬಸವನ ಬಾಗೇವಾಡಿಯನ್ನು ಬೇರ್ಪಡಿಸಿ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಅನುಷ್ಟಾನಕ್ಕೆ ತಂದಿದೆ. ಇದರ ಅಡಿಯಲ್ಲಿ ಉಳಿದ ಶರಣರ ಕ್ಷೇತ್ರಗಳನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸೇರ್ಪಡೆ ಮಾಡಿ ಶರಣರ ಜೀವನ ಚರಿತ್ರೆ ಹಾಗೂ ಶರಣರ ಕುರುಹುಗಳನ್ನು ಉಳಿಸಲು ಸ್ಮಾರಕಗಳನ್ನು ನಿರ್ಮಿಸುವುದರೊಂದಿಗೆ ಸಂಪೂರ್ಣ ಅಭಿವೃದ್ಧಿ ಪಡಿಸಬೇಕೆಂದು ಇಂಗಳೇಶ್ವರ ಗ್ರಾಮದ ವಿಶ್ವಗುರು ಬಸವ ಮಾತಾ ಮಾದಲಾಂಬಿಕೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರೈತ ಮುಖಂಡ ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಿಜಯಪುರ ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಸವನ ಬಾಗೇವಾಡಿ ನೂತನ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಬಸವ ಜನ್ಮಸ್ಥಳ ಇಂಗಳೇಶ್ವರ, ಹೋರಿಮಟ್ಟಿ ಗುಡ್ಡ, ಹಡಪದ ಅಪ್ಪಣ್ಣ ಜನಿಸಿದ ಮಸಬಿನಾಳ, ಲಿಂಗಮ್ಮಳ ಜನ್ಮಸ್ಥಳ ದೇಗಿನಾಳ, ಮಡಿವಾಳ ಮಾಚಿದೇವರ ಜನ್ಮಸ್ಥಳ ದೇವರ ಹಿಪ್ಪರಗಿ, ನುಲಿಯ ಚಂದಯ್ಯನವರ ಜನ್ಮಸ್ಥಳ ಶಿವಣಗಿ, ನೀಲಮ್ಮಳ ಐಕ್ಯಸ್ಥಳ ತಂಗಡಗಿ ಇವುಗಳನ್ನು ಮಾತ್ರ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇರ್ಪಡೆಗೊಳಿಸಲಾಗಿದೆ. ಆದರೆ ಇನ್ನೂ ಜಿಲ್ಲೆಯಲ್ಲಿ ಹಲವಾರು ಶರಣರು ಜನಿಸಿದ ಕ್ಷೇತ್ರಗಳಿದ್ದು,ಇವುಗಳನ್ನು ಸರ್ಕಾರದ ಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರಿದರು.

ಮುದ್ದೇಬಿಹಾಳ ತಾಲೂಕಿನ ಬಾವೂರಬೊಮ್ಮಯ್ಯನ ಜನ್ಮಸ್ಥಳ, ಸಿಂದಗಿ ತಾಲೂಕಿನ ಚಿಮ್ಮಲಗಿ ಚಂದಿಮರಸರು, ನಾಗರಹಳ್ಳಿಯ ಗೊಲ್ಲಾಳೇಶ್ವರ ದೇವಸ್ಥಾನ,ಲಕ್ಕಮ್ಮಳಬೈರವಾಡಗಿ, ಅಗ್ರಹಾರಗಳಾದ ಮುತ್ತಗಿ, ಮನಗೂಳಿ ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ ಇನ್ನುಳಿದ ಶರಣರ ಕ್ಷೇತ್ರಗಳನ್ನು ಗುರುತಿಸಿ ಅವುಗಳನ್ನು ಕೂಡ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಳ್ಳಾರಿ | ಅಂಬೇಡ್ಕರ್‌ಗೆ ಅವಮಾನ: ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಅಂತಾರಾಷ್ಟ್ರೀಯ ವಚನ ಅಧ್ಯಯನ ಕೇಂದ್ರ ಸ್ಥಾಪಿಸುವುದು, ಪ್ರಾಥಮಿಕ ಆರೊಗ್ಯ ಕೇಂದ್ರ ಮಂಜೂರು ಮಾಡಿಸುವುದು, ಬಸ್ ನಿಲ್ದಾಣ ಮಂಜೂರು ಮಾಡಿಸುವುದು, ಕ್ರೀಡಾಂಗಣ ನಿರ್ಮಿಸುವುದು, ಬಸವಣ್ಣನವರು ಈಜಾಡಿದ ಬಸವನ ಬಾವಿಯನ್ನು ಅಭಿವೃದ್ಧಿಪಡಿಸುವುದು, ಗ್ರಾಮದಲ್ಲಿಯ ಚಾಲುಕ್ಯರ ಕಾಲದ ಶ್ರೀಮನ್ ನಾರಾಯಣ ದೇವಸ್ಥಾನ ಜೀರ್ಣೋದ್ದಾರ ಮಾಡುವುದು, ರೇವಣಸಿದ್ದೇಶ್ವರ ಬೆಟ್ಟದ ಮೇಲೆ ಎಲ್ಲ ಶರಣರ ಮೂರ್ತಿಗಳನ್ನು ಸ್ಥಾಪಿಸುವುದು ಹಾಗೂ ಸುಂದರ ಉದ್ಯಾನವನ ನಿರ್ಮಾಣ ಮಾಡುವುದು ಸೇರಿದಂತೆ ಇಂಗಳೇಶ್ವರ ಗ್ರಾಮವನ್ನು ಸಂಪೂರ್ಣ ಅಭಿವೃದ್ಧಿಗೊಳಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸಬೇಕೆಂದು ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದತ್ತಾತ್ರೆಯ ಕುಲಕರ್ಣಿ, ಭೀಮರಾಯ ತಾಳಿಕೋಟಿ, ಸಾಯಿನಾಥ ಪಾಟೀಲ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...