ವಿಜಯಪುರ | ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು: ಅಶೋಕ್ ಮಣಿ

Date:

ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲಿ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅಶೋಕ್ ಮಣಿ ಹೇಳಿದರು.

ಮುದ್ದೇಬಿಹಾಳದ ಮಲ್ಲಿಕಾ ಸಾಬ್ ನದಾಫ್ ಅಮರಗೋಳ ಮಂಟಪದ ಮಾತೋಶ್ರೀ ಗಂಗಮ್ಮ ಬೀರಪ್ಪ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ಐದನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

“ಗಡಿನಾಡು ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳನ್ನು ಹೆಚ್ಚು ಅಭಿವೃದ್ಧಿಗೊಳಿಸಬೇಕು. ಗ್ರಾಮೀಣ ಪ್ರದೇಶದ ಕನ್ನಡ ಶಾಲೆಗಳನ್ನು ಸುಸಜ್ಜಿತಗೊಳಿಸಿ ಉತ್ತಮ ಶಿಕ್ಷಕರನ್ನು ನೇಮಿಸಬೇಕು. ಪ್ರತಿಯೊಂದು ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಾಚನಾಲಯ ಸ್ಥಾಪಿಸಿ ಕನ್ನಡ ಸಾಹಿತಿಗಳ ಪುಸ್ತಕಗಳನ್ನು ಓದುವ, ಜ್ಞಾನ ಬೆಳೆಸಿಕೊಳ್ಳುವ ಅಭಿವೃದ್ಧಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಸಾಹಿತಿಗಳು, ಲೇಖಕರು ಪ್ರಕಟಿಸಿದ ಪುಸ್ತಕಗಳನ್ನು ಶೇ.50ರಷ್ಟು ಕೊಂಡುಕೊಳ್ಳುವಂತೆ ಪುಸ್ತಕ ಪ್ರಾಧಿಕಾರ, ಗ್ರಂಥಾಲಯ ಇಲಾಖೆ, ಶಾಲೆ, ಕಾಲೇಜುಗಳಿಗೆ ಸೂಚಿಸಬೇಕು. ಬರೆಯುವವನ ಕೈ ಬರೆದಂತೆ ಬಡ ಬರಹಗಾರರಿಗೆ, ಸಾಹಿತಿಗಳಿಗೆ, ಸಾಹಿತ್ಯದ ಅಧ್ಯಯನಕ್ಕಾಗಿ ಪ್ರೇಕ್ಷಣೀಯ ಸ್ಥಳ ವೀಕ್ಷಿಸಲು ಉಚಿತ ಬಸ್ ಪಾಸ್ ನೀಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಸಿ ಎಸ್ ನಾಡಗೌಡ ಮಾತನಾಡಿ, “ಸಮ್ಮೇಳನ ಕನ್ನಡ ಚಿಂತನೆಯ, ಭಾಷೆ, ಸಂಸ್ಕೃತಿ ಶ್ರೀಮಂತಗೊಳಿಸುವ ವೇದಿಕೆಯಾಗಬೇಕು. ಮೂಲಭೂತ ವಿಚಾರಗಳನ್ನು ಮೆಲುಕು ಹಾಕುವಂತಿರಬೇಕು. ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು. ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗಬೇಕು. ಒಳ್ಳೆಯದನ್ನು ಪ್ರೋತ್ಸಾಹಿಸಬೇಕು. ಶರಣ ನಾಡಿನ ಬಳಗ ಅತ್ಯಂತ ಶ್ರೀಮಂತ ಬಳಗವಾಗಿದ್ದು, ಇದನ್ನು ರಕ್ಷಿಸುವ ಕೆಲಸವಾಗಬೇಕು. ಇತಿಹಾಸ ಮರೆ ಮಾಚಿದರೆ ಮುಂದಿನ ಪೀಳಿಗೆಗೆ ಸತ್ಯ ತಿಳಿಸಲಾಗುವುದಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಕೃಷ್ಣ ನದಿ ತೀರದ ಐತಿಹಾಸಿಕ ಅಮರಗೋಳ ಗ್ರಾಮ ಶರಣರ ಸ್ಮಾರಕವಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ವರದಿ ಫಲಶೃತಿ | ₹14 ಕೋಟಿ ವೆಚ್ಚದಲ್ಲಿ ಹಾಗರಗಾ ರಸ್ತೆ ಕಾಮಗಾರಿ ಆರಂಭ

ಈ ವೇಳೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಪ್ರೊ. ಬಿ ಎಂ ಹಿರೇಮಠ, ಬಿಇಒಬಿಎನ್ ಸಾವಳಗಿ, ಆರ್ ಎಸ್ ಪಾಟೀಲ ಕುಚಬಾಳ, ಪ್ರಭುಗೌಡ ದೇಸಾಯಿ, ನಾಲತವಾಡ ಕಸಾಪ ವಲಯ ಘಟಕದ ಅಧ್ಯಕ್ಷ ಡಾ. ದತ್ತಾತ್ರಯ ಮುಳಖೇಡ, ಕಸಾಪ ಜಿಲ್ಲಾಧ್ಯಕ್ಷ ಹಾಸಿಮ್ ಪೀರ್ ವಾಲಿಕಾರ, ಕಸಪಾ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಶ್ರೀ ಗುರು ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಖಾರಿ ಇಸಾಕ್ ಅಹಮದ್ ಮಾಗಿ, ಪುರಸಭೆ ಅಧ್ಯಕ್ಷ ಮೆಹಬೂಬ ಗೋಳಸಂಗಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ, ಕಸಾಪ ಗೌರವಾಧ್ಯಕ್ಷ ಎಂಬಿ ನಾವದಗಿ, ತಾಲೂಕು ಪಂಚಾಯತಿ ಇಒ ಎನ್ ಎಸ್ ಮಸಳಿ, ಪುರಸಭೆ ಮುಖ್ಯ ಅಧಿಕಾರಿ ಮಲ್ಲನಗೌಡ ಬಿರಾದಾರ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಮದ್ನೂರ, ಗಣ್ಯರಾದ ಅಬ್ದುಲ್ ರೆಹಮಾನ್ ಬೀದರ್ ಕುಂದಿ, ಬರಹಗಾರರಾದ ಎಚ್ ಕೆ ವಿವೇಕಾನಂದ, ಬಿ ಸಿ ಮೊಟಗಿ, ಜಯಶ್ರೀ ಹಿರೇಮಠ, ಮದನ ಪಾಟೀಲ್ ಸಾಳವಾಡಗಿ ಬಾಂಬೆ, ಕಾಂಗ್ರೆಸ್ ಮುಖಂಡ ಸಿ ಬಿ ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...