ವಿಜಯಪುರ | ಇಂದಿನ ಮಕ್ಕಳಿಗೆ ವಚನಗಳು ದಾರಿದೀಪ: ಶಾಲಿನಿ ಮಾಣಿಕ್

Date:

ವಚನಗಳನ್ನು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆ ತರುತ್ತವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶಾಲಿನಿ ಮಾಣಿಕ್ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕ, ತಾಲೂಕು ಮಹಿಳಾ ಕದಳಿ ವೇದಿಕೆ‌, ಮೆಟ್ರಿಕ್ ನಂತರದ ಡಿ ದೇವರಾಜ ಅರಸ್ ವಿದ್ಯಾರ್ಥಿನಿಯರ ವಸತಿ ನಿಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಶರಣ ಅಲ್ಲಮಪ್ರಭುಗಳ ಕುರಿತು ಮಾತನಾಡಿ, “ಅಲ್ಲಮಪ್ರಭುಗಳ ವಚನಗಳು ಸರ್ವಕಾಲಿಕ ಸತ್ಯ. ಅನುಭವ ಮಂಟಪದಲ್ಲಿರುವ ಶರಣ ಶರಣೆಯರು ಜತೆಗೂಡಿ ತಮ್ಮ ಅನುಭವದ ಸಾರವನ್ನು ಜನರಿಗೆ ತಿಳಿಸುತ್ತಿದ್ದರು. ಬಸವಣ್ಣನವರು, ಅಕ್ಕಮಹಾದೇವಿಯವರು, ಚನ್ನಬಸವಣ್ಣ ಸಿದ್ದರಾಮಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳಯ್ಯ ಇವರ ಜೊತೆಗೂಡಿ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಮನುಷ್ಯ ಕಾಯಕದಿಂದ ಶ್ರೇಷ್ಠನಾಗುತ್ತಾನೆ ಎನ್ನುವ ತತ್ವವನ್ನು ಪ್ರತಿಪಾದಿಸಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾರ್ವತಿ ಸೋಮಶೇಖರ್ ಸುರಪುರ, ದತ್ತಿದಾನಿಗಳ ಫೋಟೋ ಪೂಜೆ ಹಾಗೂ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆಯಾದ ಗಂಗಾ ಗಲಗಲಿ ತಮ್ಮ ಆಶಯ ನುಡಿಯಲ್ಲಿ ಶರಣ ಸಾಹಿತ್ಯ ಬೆಳೆದು ಬಂದ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮಕ್ಕಳಿಗೆ ತಪ್ಪದೇ ದಡಾರ ಲಸಿಕೆ ಹಾಕಿಸಬೇಕು: ಡಾ.ಹನುಮಂತಪ್ಪ

ಕಾರ್ಯಕ್ರಮದ ದತ್ತಿದಾನಿ ದಿ. ಸಂಗಮ್ಮ ಸುರಪುರ ಹಾಗೂ ದಿ. ಸಂದೇಶ್ ಸುರಪುರ ಇವರ ಕುರಿತು ಶರಣ ಸಾಹಿತ್ಯ ಅಧ್ಯಕ್ಷ ಬಿ ಎಸ್ ಪಾಟೀಲ್ ದತ್ತಿಸ್ಮರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕುರಿತು ವಸತಿ ಮೇಲ್ವಿಚಾರಿಕಿ ಎಸ್ ಎಸ್ ಜಟಗೊಂಡ ಮಾತನಾಡುತ್ತ, ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ” ಎಂದರು.

ಎಸ್ ಐ ಸೂಗೂರು ಸ್ವಾಗತಿಸಿದರು. ನಿರೂಪಣೆ ಕುಮಾರಿ ಐಶ್ವರ್ಯ ಮಾವಿನ ಮರ ಮಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಸಾವಿತ್ರಿ ವಾಲಿಕಾರ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...