ವಿಜಯಪುರ | ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ: ಆಲಗೂರ್

Date:

ಕಲಾ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್ ಎಸ್  ಕಾಲೇಜಿನ ವಿದ್ಯಾರ್ಥಿ ವೇದಾಂತ್ ‌ಕಾಂಗ್ರೆಸ್ ಗ್ಯಾರಂಟಿಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಹೇಳಿದ್ದಾರೆ.

ಸಾಧನೆ ಮಾಡಿರುವ ವಿದ್ಯಾರ್ಥಿಯನ್ನು ಸತ್ಕರಿಸಿ, ಆತನ ಭವಿಷ್ಯಕ್ಕೆ ಶುಭ ಹರಸಿ ಮಾತನಾಡಿ, “ಬಡ ಕುಟುಂಬದ ಈ ಪ್ರತಿಭಾವಂತನ ತಂದೆ ತೀರಿಕೊಂಡಿದ್ದಾರೆ. ತಾಯಿ ಮತ್ತು ಅಕ್ಕ ಇದ್ದಾರೆ. ಇವರ ಕುಟುಂಬ ನಿರ್ವಹಣೆಗೆ ಬಹಳ ಕಷ್ಟವಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯರ ಸರ್ಕಾರ ನೀಡಿದ ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ ಯೋಜನೆಗಳೇ ಇವರಿಗೆ ಆಧಾರವಾಗಿದ್ದವೆಂದು ಸ್ವತಃ ವೇದಾಂತ್ ಉಪಕಾರ ಸ್ಮರಣೆಯಿಂದ ಹೇಳಿದ್ದಾನೆ. ಇದು ಜನಾನುರಾಗಿ, ಜನಪರ ಸರ್ಕಾರದ ಸಾರ್ಥಕ್ಯವಾಗಿದೆ. ಕಷ್ಟ ಗೊತ್ತಿಲ್ಲದ, ಬಡವರ ಬವಣೆ ಅರಿಯದ ಜನ ಬಿಟ್ಟಿ ಭಾಗ್ಯ, ಪುಕ್ಕಟೆ ಗ್ಯಾರಂಟಿಗಳೆಂದು ಕುಹಕವಾಡಿದ್ದರು. ಅವರಿಗೆಲ್ಲ ಇಂತಹ ಉದಾಹರಣೆಗಳ ಮೂಲಕ ಉತ್ತರ ಸಿಗುತ್ತಲೇ ಇದೆ” ಎಂದು ಆಲಗೂರ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೇದಾಂತ್‌ನಂತಹ ಲಕ್ಷಾಂತರ ಕುಟುಂಬಗಳು ರಾಜ್ಯ ಸರ್ಕಾರದ ಯೋಜನೆಗಳಿಂದ ನಿಟ್ಟುಸಿರು ಬಿಡುತ್ತಿವೆ. ಅನೇಕ ಪ್ರತಿಭೆಗಳು ನೆಮ್ಮದಿಯಿಂದ ಶಿಕ್ಷಣ ಪಡೆಯುತ್ತಿವೆ. ಈತ ವಸತಿ ನಿಲಯದಲ್ಲಿದ್ದುಕೊಂಡು ಓದಿದ್ದಾನೆ. ಮುಂದೆಯೂ ಇಂತಹವರ ನೆರವಿಗೆ ಸರ್ಕಾರ ಇರುತ್ತದೆ.  ಸಚಿವ‌ ಎಂ ಬಿ ಪಾಟೀಲ್‌ರೂ ಕೂಡ ಇವನ ಮುಂದಿನ ಶಿಕ್ಷಣಕ್ಕೆ ಸಹಾಯ ನೀಡುವುದಾಗಿ ಹೇಳಿದ್ದು, ಹೆಮ್ಮೆಯ ವಿಷಯ” ಎಂದರು.

“ಗ್ಯಾರಂಟಿಗಳನ್ಮು ಟೀಕಿಸುತ್ತಿದ್ದವರೇ ಈಗ ತಾವೇ ಗ್ಯಾರಂಟಿ ಜಪ ಮಾಡುತ್ತಿರುವುದು ವಿಪರ್ಯಾಸ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...