ವಿಜಯಪುರ | ಚುನಾವಣೆಗಳಲ್ಲಿ ಕಾಂಗ್ರೆಸ್ ಬಲಪಡಿಸಲು ಮತದಾರರ ಜಾಗೃತಿ ಅಗತ್ಯ

Date:

ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ನಿರ್ದೆಶನದ ಮೇರೆಗೆ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮನೆ ಮನೆಗೆ ತೆರಳಿ ಮತದಾರರನ್ನು ಜಾಗೃತಗೊಳಿಸುವ ಮೂಲಕ ಚುನಾವಣಾ ಆಯೋಗ ಹಾಗೂ ಬಿಜೆಪಿಯ ಕುತಂತ್ರಗಳನ್ನು ಬಯಲುಗೊಳಿಸಬೇಕು. ಚುನಾವಣೆಗಳಲ್ಲಿ ಕಾಂಗ್ರೆಸ್‌ ಬಲಪಡಿಸಲು ಮತದಾರರ ಜಾಗೃತಿ ಅಗತ್ಯ ಎಂದು ಕೆಪಿಸಿಸಿ ಸೇವಾದಳದ ರಾಜ್ಯಾಧ್ಯಕ್ಷ ಎಂ ರಾಮಚಂದ್ರಪ್ಪ ತಿಳಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

“ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿ ತಿಂಗಳ ಕೊನೆಯ ವಾರದಂದು ಪಕ್ಷದ ಕಚೇರಿಯ ಎದುರು ರಾಷ್ಟ್ರ ಧ್ವಜಾರೋಹಣ ಮಾಡಿ ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ ಮೂಡಿಸಬೇಕು. ಮುಂದಿನ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ಮೂರು ದಿನದ ಬೃಹತ್ ತರಬೇತಿ ಕಾರ್ಯಕ್ರಮ ಮಾಡಬೇಕು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಉಪಸ್ಥಿತರಿರುವರು. ಆ ತರಬೇತಿ ಶಿಬಿರವನ್ನು ತಾವೆಲ್ಲರೂ ಯಶಸ್ವಿಗೊಳಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, “ಸಂಘಟನೆಯಲ್ಲಿ ತಾವೆಲ್ಲರೂ ಪ್ರಾಮಾಣಿಕತೆಯಿಂದ ದುಡಿದರೆ ಪಕ್ಷ ನಿಮ್ಮನ್ನು ಮುಂದೊಂದು ದಿನ ಗುರುತಿಸಿ ನಿಮಗೆ ಉತ್ತಮವಾದ ಸ್ಥಾನಮಾನ ಕೊಟ್ಟೇ ಕೊಡುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಜಾತಿ, ಭೇದ ಭಾವ ಯಾವುದೇ ಇಲ್ಲ. ಇಲ್ಲಿ ರಾಷ್ಟದ, ರಾಜ್ಯದ ಒಳತಿಗಾಗಿ ಸರ್ವಜನರ ಹಿತಾಶಕ್ತಿ ಕಾಪಾಡುವದರ ಜೊತೆಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸಿದ್ದಂತದೊಂದಿಗೆ ಜನರ ಒಳಿತು ಮಾಡುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ತಾವೆಲ್ಲರೂ ನಿಷ್ಠೆ ಹಾಗೂ ಶಿಸ್ತಿನಿಂದ ಪಕ್ಷದ ಸಂಘಟನೆ ಮಾಡುವದರ ಮೂಲಕ ಮುಂಬರುವ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಬಾರಿಸಲು ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡೋಣ” ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಡಾ. ಗಂಗಾಧರ ಸಂಬಣ್ಣಿ, ರಾಜ್ಯ ಸೇವಾದಳದ ಕಾರ್ಯದರ್ಶಿ ರಮೇಶ, ಶಬ್ಬೀರ ಜಾಗಿರದಾರ, ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಬ್ದುಲ ಹಮೀದ ಮುಶ್ರೀಫ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ರಾಜ್ಯ ಸೇವಾದಳದ ಕಾರ್ಯದರ್ಶಿ ರಾಜೇಶ್ವರಿ ಚೋಳಕೆ, ಜಿಲ್ಲಾ ಸೇವಾದಳದ ಅಧ್ಯಕ್ಷ ವಿಜಯಕುಮಾರ ಕಾಳೆ, ಜಿಲ್ಲಾ ಸೇವಾದಳದ ಮಹಿಳಾ ಅಧ್ಯಕ್ಷೆ ಸಮೀನಾ ಮಂಟೂರ, ಶರಣಪ್ಪ ಯಕ್ಕುಂಡಿ, ಸಂತೋಷ ಬಾಲಗಾವಿ, ಪ್ರಕಾಶ ಗುಣದಾಳ, ರಮಜಾನ ಹೆಬ್ಬಾಳ, ಮೀನುಗಾರಿಗೆ ಜಿಲ್ಲಾ ಅಧ್ಯಕ್ಷ ಕೃಷ್ಣಾ ಕಾಮಟೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಜಿಲ್ಲಾ ಸೇವಾದಳದ ಪದಾಧಿಕಾರಿಗಳಾದ ಸಿದ್ದಪ್ಪ ಚಡಚಣ, ಅಪ್ಪಾಸಲಿ ಪಿಂಜಾರ, ಮಲ್ಲಿಕಾರ್ಜುನ ಯಂಕಚಿ, ಅಕ್ಬರ ಗೋತಾವಿ, ಪ್ರಶಾಂತ ಪೂಜಾರಿ, ರಾಚಪ್ಪ ಬಂತನಾಳ, ಲಾಲಸಾಬ ಜಮಾದಾರ, ಬಸಪ್ಪ ಕೋಲಕಾರ, ಗೋಪಿನಾಥ ಜಮಾದಾರ, ಗಾಲಿಬಸಾಬ ನಾಗಾಂವಿ, ದಿಲಿಪಿ ಪ್ರಭಾಕರ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...