ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್‌ ರನ್; ಮುಂಜಾಗ್ರತಾ ಕ್ರಮಕ್ಕೆ ಎಸ್ಪಿ ಸೂಚನೆ

Date:

ಇದೇ ಡಿಸೆಂಬರ್ 7ರ ರವಿವಾರದಂದು ವಿಜಯಪುರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ನ್ನು ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಹೆರಿಟೇಜ್ ರನ್ ನಡೆಯುವ ಎರಡು ದಿನಗಳ ಮುಂಚೆ ಅಂದರೆ ಶುಕ್ರವಾರ ಮತ್ತು ಶನಿವಾರ ನಗರದ ಡಾ. ಬಿ ಆರ್ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಾನಾ ಪೂರ್ವಭಾವಿ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ, ಡಿ.7 ರಂದು ರವಿವಾರ ಓಟ ನಡೆಯಲಿದೆ. ಪೂರ್ವಭಾವಿ ಕಾರ್ಯಕ್ರಮಗಳು ನಡೆಯುವ ದಿನ ಸಂಚಾರ ಪೂರ್ವಭಾವಿ ಕಾರ್ಯಕ್ರಮಗಳ ಎರಡು ದಿನಗಳಂದು ಪೊಲೀಸರು ಭದ್ರತೆ ಒದಗಿಸಬೇಕು. ಯಾವುದೇ ರೀತಿಯಲ್ಲಿ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.

“ಶನಿವಾರದಿಂದಲೇ ವಾಹನ ಸಂಚಾರಗಳ ಮಾರ್ಗ ಬದಲಾವಣೆ, ಝೀರೋ ಟ್ರಾಫಿಕ್ ಕುರಿತು ಸಭೆ ನಡೆಸಿ ಪರ್ಯಾಯ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸಂಚಾರಿ ಪೊಲೀಸರ ಜೊತೆಯಲ್ಲಿಯೇ ಸಿವಿಲ್ ಪೊಲೀಸರೂ ಕೂಡ ಕಟ್ಟೆಚ್ಚರ ವಹಿಸಬೇಕು. 20 ಸಾವಿರಕ್ಕೂ ಹೆಚ್ಚು ಓಟಗಾರರು ಮತ್ತು ಸಾರ್ವಜನಿಕರು ಸೇರುವುದರಿಂದ ಜನದಟ್ಟಣೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆ 6 ಗಂಟೆಯಿಂದಲೇ ನಾನಾ ವಿಭಾಗಗಳ ಓಟಗಳು ಪ್ರಾರಂಭವಾಗಲಿವೆ. 21 ಕಿ.ಮೀ, 10 ಕಿ.ಮೀ ಹಾಗೂ 5 ಕಿ.ಮೀ ಓಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಓಡುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಬೇಕು. ಆ್ಯಂಬುಲೆನ್ಸ್ ಸೇರಿದಂತೆ ಅತೀ ತುರ್ತು ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ತೊಡಕು ಆಗದಂತೆ ಈಗಲೇ ಎಸ್‌ಒಪಿ(ಸ್ಟ್ಯಾಂಡರ್ಡ್ ಆಪರೇಶನ್ ಪ್ರೊಸೀಜರ್) ಪ್ರಕಾರ ಎಲ್ಲ ಮುಂಜಾಗೃತೆ ವಹಿಸಬೇಕು. ಜೊತೆಗೆ ಟಿಇಟಿ ಪರೀಕ್ಷಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆ ಪೊಲೀಸ್ ವಾಹನಗಳಲ್ಲಿ ಅವರನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ವಾಹನಗಳ ಪಾರ್ಕಿಂಗ್(ನಿಲುಗಡೆ) ಸ್ಥಳಗಳನ್ನು ಗುರುತಿಸಿ ನಾಲ್ಕೈದು ದಿನಗಳಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, ಈಗಾಗಲೇ ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ. ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಆದ್ಯತೆ ನೀಡಲಾಗಿದೆ. ಈಗಾಗಲೇ ಕ್ರೀಡಾಪಟುಗಳು ಓಡುವ ಮಾರ್ಗಗಳನ್ನು ಪರಿಶೀಲಿಸಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್; ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ

ಓಟ ಪ್ರಾರಂಭ ಮತ್ತು ಮುಕ್ತಾಯವಾಗುವ ಮಾರ್ಗಗಳು, ಸಾಂಸ್ಕೃತಿಕ ತಂಡಗಳು ಮತ್ತು ಹೈಡ್ರೇಶನ್ ತಂಡಗಳು ಕಾರ್ಯ ನಿರ್ವಹಿಸುವ 21 ಸ್ಥಳಗಳು, ಮುಖ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಓಟಗಾರರು ಮೆಡಲ್ ಸ್ವೀಕರಿಸುವ ಸ್ಥಳ, ಪ್ರಮುಖ ಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಆಸೀನರಾಗುವ ಸ್ಥಳ, ಫಿಜಿಯೋಥೆರಪಿ ಕೇಂದ್ರಗಳ ಕುರಿತು ರನ್ ಸಮಿತಿ ಪದಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಡಾ ಬಸವರಾಜ ಯಲಿಗಾರ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ, ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿಯ ಸಂಚಾಲಕ ಡಾ. ಮುರುಗೇಶ ಪಟ್ಟಣಶೆಟ್ಟಿ, ಪದಾಧಿಕಾರಿಗಳಾದ ವಿನಯ ಕಂಚ್ಯಾಣಿ, ಸೋಮಶೇಖರ ಸ್ವಾಮಿ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಸಂದೀಪ ಮಡಗೊಂಡ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...