ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

Date:

ಯೇಸುಕ್ರಿಸ್ತರ ಸಂದೇಶಗಳಾದ ಕ್ಷಮೆ, ಪ್ರೀತಿ ಸಹನೆ, ಸಹಬಾಳ್ವೆ ಮತ್ತು ಶಾಂತಿ ಈ ಮಾನವೀಯ ಮೌಲ್ಯಗಳನ್ನು ನಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಮನಗೂಳಿ ಹೇಳಿದರು.

ಅವರು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವ ಧರ್ಮೀಯ ಸ್ನೇಹಕೂಟದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ಸಂಗಮ ಎಂದರೆ ಎಲ್ಲರು ಒಟ್ಟಿಗೆ ಕೂಡಿಕೊಳ್ಳುವುದು. ವಿವಿಧ ರೀತಿಯಲ್ಲಿ ಸಂಗಮ ಸಂಸ್ಥೆಯು ಶಿಕ್ಷಣ ನೀಡುತ್ತಿದೆ. ಯಾರಿಗೂ ಭೇದಭಾವ ಮಾಡದೇ ಎಲ್ಲರಿಗೂ ಅವಕಾಶಗಳನ್ನು ಕೊಡುತ್ತಿದ್ದಾರೆ. ದೇವರು ಪ್ರತಿಯೊಬ್ಬರ ಆತ್ಮದೊಳಳಗೆ ಇರುವವನು. ನಾವು ಹೊಟ್ಟೆ ಕಿಚ್ಚು, ಅಸೂಯೆ ಪಡದೇ ಎಲ್ಲರೊಂದಿಗೆ ಸಹಬಾಳ್ವೆಯಿಂದ ಇರಬೇಕು” ಎಂದು ಸಾನಿಧ್ಯ ವಹಿಸಿದ್ದ ಸಿಂದಗಿಯ ಶ್ರೀ ಗುರುದೇವ ಆಶ್ರಮದ ಶ್ರೀ ಶ್ರೀ ಶಾಂತಗಂಗಾಧರ ಸ್ವಾಮೀಜಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 23 at 8.30.10 PM 1

ಯೇಸು ಅವರ ಜೀವನ ಚರಿತ್ರೆ ಹಾಗೂ ಅವರು ಮಾಡಿದ ಜನರ ಸೇವೆ ಅಮೂಲ್ಯವಾದದ್ದು. ಯೇಸು ಅವರ ತತ್ವ ಮತ್ತು ಮೌಲ್ಯಗಳನ್ನು ಎಲ್ಲರೂ ಅನುಸರಿಸಬೇಕೆಂದು ಮುಸ್ಲಿಂ ಧರ್ಮಗುರು ಮೌಲವಿ ನಸ್ರುದ್ದೀನ್ ಮುಲ್ಲಾ ಗಣಿಹಾರ ಹೇಳಿದರು.

ಕ್ರಿಸ್ಮಸ್ ಹಬ್ಬವನ್ನು ವಿಶ್ವದಾದ್ಯಂತ ಎಲ್ಲರೂ ಆಚರಿಸುತ್ತಾರೆ. ನಮ್ಮಲ್ಲಿ ಯೇಸುವಿನ ಮೌಲ್ಯಗಳಾದ ನಿಸ್ವಾರ್ಥತೆ, ಕ್ಷಮೆ, ಪ್ರೀತಿಯನ್ನು ನಾವು ರೂಡಿಸಿಕೊಳ್ಳಬೇಕೆಂದು ಫಾದರ್ ಜೀವನ್‌ ಹೇಳಿದರು.

ಸಂಗಮ ಸಂಸ್ಥೆಯು ಪ್ರತಿ ವರ್ಷ ದೀಪಾವಳಿ, ಬಕ್ರೀದ್ ಮತ್ತು ಕ್ರಿಸ್ಮಸ್ ಹಬ್ಬಗಳನ್ನು ಎಲ್ಲ ಧರ್ಮಗಳ ಜೊತೆಗೂಡಿ ಆಚರಿಸುತ್ತೇವೆ ಎಂದು ಸಂಗಮ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ್‌ ಹೇಳಿದರು.

ಇದನ್ನು ಓದಿದ್ದೀರಾ? ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ವಹಿಸಿದ ರಾಜ್ಯ ಸರ್ಕಾರ: ಉಳಿಯಿತು 10,700 ಎಕರೆ ‘ದೇವರ ಸ್ವತ್ತು’

ಸಂಗಮ ಸಂಸ್ಥೆಯ ಸಹ ನಿರ್ದೇಶಕಿಯಾದ ಸಿಸ್ಟರ್ ಸಿಂತಿಯಾ ಡಿ’ಮೆಲ್ಲೊ ಸರ್ವಧರ್ಮ ಪ್ರಾರ್ಥನಾ ವಿಧಿಯನ್ನು ನಡೆಸಿಕೊಟ್ಟರು. ಭಾರತದ ಸಂವಿಧಾನದ ಪೀಠಿಕೆಯ ಮೂಲಕ ಈ ಸ್ನೇಹಕೂಟವನ್ನು ಪ್ರಾರಂಭಿಸಲಾಯಿತು.

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ದೇವದಾಸಿ ತಾಯಂದಿರಿಗೆ, ವಿಶೇಷ ಚೇತನರಿಗೆ ಮತ್ತು ಹೆಚ್.ಐ.ವಿ ಬಾದಿತರಿಗೆ ಕಿಟ್ ವಿತರಿಸಲಾಯಿತು. ಹೊಲಿಗೆ ತರಬೇತಿ ಶಿಕ್ಷಕಿಯರಿಗೆ ಹಾಗೂ ಕಲಿಕಾ ಕೇಂದ್ರದ ಶಿಕ್ಷಕಿಯರಿಗೆ ಕ್ರಿಸ್ಮಸ್ ಉಡುಗೊರೆ ನೀಡಲಾಯಿತು. ಉಮೇಶ್ ನಿರೂಪಿಸಿದರು, ವಿಜಯಕುಮಾರ ಬಂಟನೂರ ಸ್ವಾಗತಿಸಿದರು ಮತ್ತು ಮಲ್ಕಪ್ಪ ಹಲಗಿ ವಂದಿಸಿದರು.

WhatsApp Image 2024 12 23 at 8.30.06 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...