ವಿಜಯಪುರ | ಅಭಿವೃದ್ಧಿ ಅನುದಾನದಿಂದ ಪರಿಹಾರ ನೀಡುವುದು ಯಾವ ನ್ಯಾಯ: ಪಾಲಿಕೆ ಸದಸ್ಯ ಪ್ರಶ್ನೆ

Date:

ವಿಜಯಪುರ ಮಹಾನಗರ ಪಾಲಿಕೆ ನೂತನ ಮೇಯರ್ ಎಂ ಎಸ್ ಕರಡಿ ಅಧ್ಯಕ್ಷತೆಯಲ್ಲಿ ಪ್ರಥಮ ಬಾರಿಗೆ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆದಿದ್ದು, ವಿಷಯ ಪ್ರಸ್ತಾಪಿಸಿದ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಅವರು ಅಧಿಕಾರಿಗಳು ಮಾಡಿದ ತಪ್ಪಿಗೆ ನಮ್ಮ ಅಭಿವೃದ್ಧಿ ಅನುದಾನವನ್ನು ಪರಿಹಾರವಾಗಿ ನೀಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

“ಮಹಾ ಯೋಜನೆ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಆಸ್ತಿ ಕಳೆದುಕೊಂಡವರಿಗೆ ಸರ್ಕಾರದಿಂದ ಪರಿಹಾರ ಕೊಡುವ ಬದಲಿಗೆ ಮಹಾನಗರ ಪಾಲಿಕೆಯ ಅಭಿವೃದ್ಧಿ ಅನುದಾನವನ್ನೇ ಪರಿಹಾರಕ್ಕೆ ನೀಡಿದೆ. 23 ಕೋಟಿ ರೂಪಾಯಿ ಅನುದಾನವನ್ನು ಪರಿಹಾರಕ್ಕೆ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಬೇಕು” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, “ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಪರಿಹಾರಕ್ಕೆ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಪರಿಹಾರ ನೀಡದೆ ತೆರವು ಕಾರ್ಯಚರಣೆ ನಡೆಸಿ ಲೋಪ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿ, “ಪರಿಹಾರ ನೀಡಲು ನಮಗೆ ತಕರಾರಿಲ್ಲ. ಆದರೆ, ಆ ಪರಿಹಾರ ಹಣವನ್ನು ಸರ್ಕಾರದಿಂದ ಕೊಡಿಸಿ. ಅದುಬಿಟ್ಟು ಪಾಲಿಕೆ ಅಭಿವೃದ್ಧಿ ಅನುದಾನವನ್ನು ಆ ಕಾರ್ಯಕ್ಕೆ ಬಳಕೆ ಮಾಡಿರುವುದು ಸರಿಯಲ್ಲ” ಎಂದು ಹೇಳಿದರು.

“ಈ ವಿಷಯದಲ್ಲಿ ಬಹುತೇಕ ಅಧಿಕಾರಿಗಳು ಲೋಪ ಎಸಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ವಿಶೇಷ ಸಮಿತಿ ರಚನೆ ಮಾಡಿ” ಎಂದು ಶಿವರುದ್ರ ಬಾಗಲಕೋಟ ಪಟ್ಟು ಹಿಡಿದರು.

ಸಭೆಯಲ್ಲಿ ಎಸ್ಕಾಂ ಅಧಿಕಾರಿಗಳು ಗೈರಾಗಿದ್ದು, ಅವರ ಪರವಾಗಿ ವಿಭಾಗವೊಂದರ ಅಧಿಕಾರಿ ಸಭೆಯಲ್ಲಿ ಉತ್ತರಿಸಲು ಮುಂದಾದರು. ಆಗ ಪಾಲಿಕೆ ಸದಸ್ಯರು ನೀವು ವಿಭಾಗವೊಂದಕ್ಕೆ ಅಧಿಕಾರಿ, ನೀವು ಉತ್ತರ ಕೊಟ್ಟರೆ ಪ್ರಯೋಜನವೇನು? ಸಭೆಗೆ ಹಿರಿಯ ಅಧಿಕಾರಿಗಳು ಬರಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ; ಕ್ರಮಕ್ಕೆ ದಸಂಸ ಆಗ್ರಹ

ಪಾಲಿಕೆ ಸದಸ್ಯ ಅಶೋಕ ನ್ಯಾಮಗೊಂಡ ಮಾತನಾಡಿ, “ಇದೊಂದು ಗಂಭೀರ ಸಮಸ್ಯೆ, ಜಲಮಂಡಳಿ ಹಾಗೂ ಎಸ್ಕಾಂ ಅಧಿಕಾರಿಗಳೊಂದಿಗೆ ಕೂಡಲೇ ವಿಶೇಷ ಸಭೆ ಕರೆದರೆ ಒಳ್ಳೆಯದು” ಎಂದು ಸಲಹೆ ನೀಡಿದರು.

ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಈ ವಿಷಯಗಳ ಬಗ್ಗೆ ಚರ್ಚಿಸಲು ಎಸ್ಕಾಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಾಗುವುದೆಂದು ಭರವಸೆ ನೀಡಿದರು. ಈ ವೇಳೆ ಉಪಮೇಯರ್ ಸುಮಿತ್ರ ಜಾದವ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...