ವಿಜಯಪುರ | ಬಿಜೆಪಿ ಹಿಂದೆಗೆದ ಪ್ರಕರಣಗಳ ಬಗ್ಗೆ ಸಿ ಟಿ ರವಿ ಯಾಕೆ ಮಾತನಾಡಲ್ಲ? ಎಂ.ಬಿ. ಪಾಟೀಲ್

Date:

‘ಹುಬ್ಬಳ್ಳಿ ಗಲಭೆಯ ಪ್ರಕರಣವನ್ನು ಹಿಂಪಡೆದ ಕುರಿತು ಮಾತನಾಡುವ ಬಿಜೆಪಿ, ಸಿ.ಟಿ. ರವಿ, ಬಿಜೆಪಿ ಅವಧಿಯಲ್ಲಿ ಹಿಂಪಡೆದಿರುವ ಪ್ರಕರಣಗಳ ಬಗ್ಗೆ ಏಕೆ ಮಾತನಾಡಲ್ಲ’ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ‘ಹೋರಾಟಗಳು ನಡೆದ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣಗಳನ್ನು ಕಾಲ ಕಾಲಕ್ಕೆ ಎಲ್ಲ ಸರ್ಕಾರಗಳು ಹಿಂಪಡೆದಿದ್ದಾರೆ. ರೈತ ಹೋರಾಟ, ವಿದ್ಯಾರ್ಥಿ ಹೋರಾಟ, ಜನರ ಹೋರಾಟಗಳ ಕೇಸ್‌ಗಳನ್ನು ಹಿಂಪಡೆದಿರುತ್ತವೆ. ಅದೇ ರೀತಿ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿರಬಹುದು’ ಎಂದರು.

‘ಕಾಂಗ್ರೆಸ್ ಸರ್ಕಾರ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ’ ಎಂದ ವಿಪಕ್ಷ ನಾಯಕ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಹಿಜಾಬ್, ಹಲಾಲ್, ಅಜಾನ್ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಆರ್. ಅಶೋಕ್ ಸಹ ಇದನ್ನೇ ಮಾಡಿದ್ದಾರೆ. ಆದರೆ, ನಾವು ಎಲ್ಲ ಜನರನ್ನು ರಕ್ಷಣೆ ಮಾಡುತ್ತೇವೆ. ಹಿಂದೂ, ಮುಸ್ಲಿಂ, ಸಿಖ್, ಬೌದ್ಧ, ಜೈನರು ಸೇರಿ ಎಲ್ಲರನ್ನು ರಕ್ಷಣೆ ಮಾಡುತ್ತೇವೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಲಭೆಗಳಾದಾಗ ಅಮಾಯಕರ ಮೇಲೆ ಕೇಸ್ ದಾಖಲಾಗಿರುತ್ತದೆ. ಗಲಭೆ ಮಾಡಿದವರು ಓಡಿ ಹೋಗಿರುತ್ತಾರೆ. ಗಲಭೆ ನೋಡುತ್ತ ನಿಂತವರು ಸಿಕ್ಕಿಹಾಕಿ ಕೊಂಡಿರುತ್ತಾರೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಇದನ್ನು ಓದಿದ್ದೀರಾ? ಮುಧೋಳ | ಸ್ಥಗಿತಗೊಂಡಿದ್ದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರು ಚಾಲನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರಿಗೆ ತಮ್ಮಲ್ಲೆ ನೆಲೆ ಇಲ್ಲ. ಅವರಲ್ಲಿ 20 ಗುಂಪುಗಳಿವೆ. ಮೊದಲು ತಮ್ಮ ಮನೆ ಸರಿ ಪಡೆಸಿಕೊಳ್ಳಲಿ. ಬೇರೆಯವರದ್ದೇನು ನೋಡುತ್ತಾರೆ. ಶೇ. 40 ಭ್ರಷ್ಟಾಚಾರದಿಂದ ಜನರು ಬಿಜೆಪಿಯನ್ನು ಕಿತ್ತೆಸೆದು ಮನೆಗೆ ಕಳಿಸಿದ್ದಾರೆ. ಬಿಜೆಪಿಯಲ್ಲೇ ಹೊಂದಾಣಿಕೆ ಇಲ್ಲ’ ಎಂದು ಲೇವಡಿ ಮಾಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...