ವಿಜಯಪುರ | ಹೆಣ್ಣು ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತ ಬಂದಿದ್ದಾಳೆ: ಎಂ. ಎನ್. ಮಂಜುಳಾ

Date:

“ಸ್ತ್ರೀಯರ ಮೇಲೆ ದಿನೇ ದಿನೇ ಹಿಂಸೆ, ಕ್ರೌರ್ಯ, ದೌರ್ಜನ್ಯ, ಅಪರಾಧಗಳು ಹೆಚ್ಚಾಗುತ್ತಿವೆ. ಹೆಣ್ಣು ಹುಟ್ಟಿನಿಂದ ಮಸಣದವರೆಗೂ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ” ಎಂದು ಮಹಿಳಾ ಸಂಘಟನೆ ರಾಜ್ಯ ಅಧ್ಯಕ್ಷೆ ಎಂ.ಎನ್. ಮಂಜುಳಾ ಹೇಳಿದರು.

ವಿಜಯಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪ್ರಥಮ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ  ಮಾತನಾಡಿದರು.

“ಸಾಂಸ್ಕೃತಿಕ ಅಧಃಪತನದಿಂದ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿವೆ. ಇವೆಲ್ಲದರ ಪರಿಣಾಮವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಪರಾಧಗಳು ಹೆಚ್ಚುತ್ತಿವೆ. ಇಂದು ಎಲ್ಲಾ ಕ್ಷೇತ್ರದ ಹೆಣ್ಣು ಮಕ್ಕಳು ಸಂಘಟಿತರಾಗಬೇಕು, ಶೋಷಣೆ ರಹಿತ ಸಮಾಜ ಕಟ್ಟುವ ಗುರಿಯೊಂದಿಗೆ ಪುರುಷರ ಸಮಸಮವಾಗಿ ಮುನ್ನಡೆಯಬೇಕು. ಸಮಾಜದ ಎಲ್ಲಾ ಮಹಿಳೆಯರು ಪ್ರಜಾತಾಂತ್ರಿಕ ಮೌಲ್ಯಗಳನ್ನು ರೂಢಿಸಿಕೊಳ್ಳುತ್ತಾ ಮಹಿಳೆ ಅಬಲೆಯಲ್ಲ ಸಬಲೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸೆಕ್ರೆಟರಿಯೆಟ್ ಸದಸ್ಯರಾದ ಡಾ.ಸುನೀತ್ ಕುಮಾರ್ ಟಿ ಎಸ್  ಮಾತನಾಡಿ, “ನಮ್ಮ ಸಮಾಜದಲ್ಲಿ ಪುರುಷ ಪ್ರಧಾನ ಮನೋವಭಾವ ಜೀವಂತವಾಗಿರುವುದರಿಂದ ಹೆಜ್ಜೆ ಹೆಜ್ಜೆಗೂ ಮಹಿಳೆಯರು ದ್ವಿತೀಯ ದರ್ಜೆಯ ಪ್ರಜೆಯಾಗಿ ಪರಿಗಣಿಸ್ಪಲಡುತ್ತಿದ್ದಾರೆ. ಈ ಪುರುಷ ಪ್ರಧಾನ ಮನೋಭಾವ ಜೀವಂತ ಇರುವವರೆಗೂ ಹೆಣ್ಣು ಮಕ್ಕಳಿಗೆ ಸಮಾನತೆ ಎನ್ನುವುದು ಕನಸಿನ ಮಾತು. ಹಾಗಾಗಿ ಇದನ್ನು ತೊಡೆದು ಹಾಕುವಲ್ಲಿ ವೈಚಾರಿಕ, ಸಾಂಸ್ಕೃತಿಕ ಹೋರಾಟ ಬೆಳೆಯಬೇಕು ಹಾಗೂ ಸಮಾನತೆಯ ಸಮಾಜ ಸ್ಥಾಪಿಸಲು ಎಐಎಮ್ಎಸ್ಎಸ್ ಸಜ್ಜಾಗಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಬಾಳಮ್ಮ ಕೊಂಡಗೂಳಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಸಮ್ಮೇಳನದಲ್ಲಿ ಚುನಾಯಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಗೀತಾ ಹೆಚ್, ಕಾರ್ಯದಶಿಯಾಗಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿಯಾಗಿ ಶಿವರಂಜನಿ ಎಸ್.ಬಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಬೀನಾ.ಮಹದೇವಿ, ಗಂಗಾ ಜಾಲವಾದ, ಸ್ಥಿತಾ, ಗೀತಾ ಹಿರೇಮಠ, ಸಾನಿಯಾ, ವಿದ್ಯಾ, ಯಶೋಧ, ಚಂದ್ರವ್ವ, ಕಾವೇರಿ ಹಾಗೂ ಅಕ್ಷತಾ ಹಟ್ಟಿ, ಸವಿತಾ ತೆಗ್ಗಿ,ಶಂಕರಮ್ಮ ದೇಸಾಯಿ, ಸುಷ್ಮಾ ಹಾಗೂ 20 ಕೌನ್ಸಿಲ್ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಸಮ್ಮೇಳನದಲ್ಲಿ ಉದ್ಯೋಗಸ್ಥ ಮಹಿಳೆಯರು ಗೃಹಿಣಿಯರು, ಕಾರ್ಮಿಕ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ದುಡಿಯುವ ಮಹಿಳೆಯರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...