ವಿಜಯಪುರ | ಕಾರ್ಮಿಕರ ಹಲ್ಲೆ ಪ್ರಕರಣ; ಶಿಸ್ತು ಕ್ರಮಕ್ಕೆ ಮನವಿ

Date:

ವಿಜಯಪುರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ, ಅಪರಾಧಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಪ್ರಗತಿಪರ ಸಂಘಟನೆಗಳ ವೇದಿಕೆ ಮನವಿ ಸಲ್ಲಿಸಿತು.

ಹೊಟ್ಟೆಪಾಡಿಗಾಗಿ ಬೇರೆ ಕಡೆಗಳಿಂದ ಕೆಲಸಕ್ಕೆ ಬಂದ ಅಮಾಯಕ ಕಾರ್ಮಿಕರಿಗೆ ಮನಬಂದಂತೆ ಥಳಿಸಿದ ಪ್ರಕರಣ ಇಡೀ ಮಾನವ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಶ್ರಮಿಕ ವರ್ಗದ ಮೇಲೆ ಮಾಲೀಕರ ನಿರಂತರ ದೌರ್ಜನ್ಯ ಹೆಚ್ಚತ್ತಲೇ ಇದೆ. ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಮುಂದುವರೆದು ಅಪರಾಧಿಗಳನ್ನು ಸೂಕ್ತ ಕಾನೂನು ಕ್ರಮಕ್ಕೊಳಪಡಿಸಬೇಕು. ಶೋಚನೀಯ ಸ್ಥಿತಿಯಲ್ಲಿರುವ ಕಾರ್ಮಿಕರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ವೇದಿಕೆ ಮುಖಂಡರು ಒತ್ತಾಯಿಸಿದರು.

ಆರೋಪಿಗಳ ಪರವಾಗಿ ಯಾರು ಎಷ್ಟೇ ಪ್ರಭಾವ ಬೀರಿದರೂ ಪರಿಗಣಿಸದೆ ಎಲ್ಲ ಆರೋಪಿಗಳಿಗೆ ನಿರ್ದಯನೀಯ ಶಿಕ್ಷೆ ನೀಡಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಜಿಲ್ಲಾ ಕಾರ್ಮಿಕ ಇಲಾಖೆ ಎಚ್ಚರಿಕೆ ವಹಿಸಬೇಕೆಂದು ಪ್ರತಿಭಟನೆ ಮೂಲಕ ವೇದಿಕೆ ಆಗ್ರಹಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಪಠ್ಯದ ಜೊತೆಗೆ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅವಶ್ಯಕ | ಬಿ ಜಿ ಮೂಲಿಮನಿ

ಪ್ರತಿಭಟನಾ ಸಭೆಯಲ್ಲಿ ವೇದಿಕೆ ಮುಖಂಡ ಸಿ ಎ ಘಂಟೆಪ್ಪಗೊಳ್, ಪ್ರಭುಗೌಡ ಪಾಟಿಲ್, ಶ್ರೀನಾಥ ಪೂಜಾರಿ, ಸಿದ್ದಲಿಂಗ ಬಾಗೇವಾಡಿ, ಹಫೀಜ್ ಸಿದ್ದಿಕಿ, ಸಂಗಮೇಶ ಸಗರ, ಬಾಳು ಜೆವೂರ, ಚೆನ್ನು ಕಟ್ಟಿಮನಿ, ಕರಿಯಪ್ಪ ಗುಡಿಮನಿ, ಶಿವಬಾಳಮ್ಮ ಕೊಂಡಗೂಳಿ, ಅಕ್ಷಯ ಅಜಮನಿ, ರಮೇಶಗೌಡ ಪಾಟೀಲ, ಜಕರಾಯ ಪೂಜಾರಿ, ಮಾದೇವಪ್ಪ ತೇಲಿ, ಎಮ್ ಎಮ್ ಮಾಶಳಕರ್, ಮಹಮದ್ ಇದಾಯತ್, ರೇಷ್ಮಾ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...