ವಿಜಯಪುರ | ಮಹಿಳಾ ವಿವಿಯಲ್ಲಿ ಯುವ ಮಂಥನ ಕಾರ್ಯಕ್ರಮ

Date:

ವಿಕಸಿತ ಭಾರತ-2024 ಸಂಕಲ್ಪದ ಅಡಿಯಲ್ಲಿ ಯುವ ಮಂಥನ ಕಾರ್ಯಕ್ರಮದ ಮಾದರಿ ವಿಶ್ವಸಂಸ್ಥೆ ಆಣುಕು ಸಂಸತ್ತು ಅಧಿವೇಶನವನ್ನು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಯುಜಿಸಿ ಮತ್ತು ಎನ್‌ಎಸ್‌ಎಸ್‌ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಜಾಗತಿಕ ವಿಷಯವಾದ ಪರಿಸರ ಜೀವನ ಶೈಲಿ ಕುರಿತು ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ವಿವಿಧ ಕ್ಷೇತ್ರಗಳಲ್ಲಿ ಆಗುವ ದುಷ್ಪರಿಣಾಮಗಳ ಕುರಿತು ಅಣಕು ಸಂಸತ್ತು ಅಧಿವೇಶನದಲ್ಲಿ ಚರ್ಚಿಸಲಾಯಿತು.

ವಿಶ್ವ ಸಂಸ್ಥೆಯ ಅಣುಕು ಸಂಸತ್ತು ಅಧಿವೇಶನದಲ್ಲಿ ವಿಶ್ವ ಸಂಸ್ಥೆಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಪ್ರತಿನಿಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪ್ರಧಾನಿಯಾಗಿ ಕೀರ್ತಿ ನಾಟಕರ, ಜಪಾನ ಪ್ರಧಾನಿಯಾಗಿ ಅಶ್ವಿನಿ ಆಕಲ್‌ವಾಡಿ, ಬಾಂಗ್ಲಾದೇಶದ ಪ್ರಧಾನಿಯಾಗಿ ರಾಧಿಕಾ ಕಾಂಜ್ಞೆ, ಪ್ರಾನ್ಸ್‌ ನ ರಾಷ್ಟ್ರಪತಿಯಾಗಿ ಸವಿತ ತೆಗ್ಗಿ, ಇಂಗ್ಲೆಂಡ್ ಪ್ರಧಾನಿಯಾಗಿ ಮಲ್ಲಮ್ಮ ಕುಂಬಾರ, ಇಟಲಿಯ ಪ್ರಧಾನಿಯಾಗಿ ಮುಕ್ತುಬಾಯಿ ಟಾಕೆ, ಕೆನಡಾದ ಪ್ರತಿನಿಧಿಯಾಗಿ ಪವಿತ್ರಾ ಒಡಯರ, ಇರಾಕ್‌ ರಾಷ್ಟ್ರಪತಿಯಾಗಿ ಪರ್ವಿನ್ ಅವರು ಆಯಾ ದೇಶದ ಜಾಗತಿಕತಾಪಮಾನ ಹಾಗೂ ಪರಿಸರ ಸಮಸ್ಯೆಗಳ ಕುರಿತು ಮತ್ತು ರಾಷ್ಟ್ರದ ಅಸ್ಮಿತೆಗೆ ಧಕ್ಕೆತರುವ ಕಾರಣಗಳು ಮತ್ತು ಅವುಗಳ ಪರಿಹಾರೋಪಾಯಗಳ ಕುರಿತು ಚರ್ಚಿಸಿದರು.

ಸಂಸತ್ತಿನಲ್ಲಿ  ವಿವಿಧ ಪಕ್ಷಗಳ ಪ್ರತಿನಿಧಿಗಳಾಗಿ ನೇಹಾ ನಾಗಠಾಣ, ಶಾಹಿರಾ ಬೇಗಂ, ಗಾಯತ್ರಿ (ಬಿಜೆಪಿ), ಸುನಂದಾ (ಕಾಂಗ್ರೆಸ್), ಮಯೂರಿ (ಶಿವಸೇನೆ), ಶಾಂತಮ್ಮ (ಟಿಎಂಸಿ ), ಬಸಮ್ಮ (ಎಸ್‌ಪಿ), ಲಕ್ಷ್ಮೀ (ಎಎಪಿ) ವಿದ್ಯಾರ್ಥಿನಿಯರು ಚರ್ಚೆಯಲ್ಲಿ ಪಾಲ್ಗೊಂಡರು.

ವಿಶ್ವಸಂಸ್ಥೆ ಸಂಸತ್ ಅಧಿವೇಶನ ಅಧ್ಯಕ್ಷರಾಗಿ ವಿದ್ಯಾರ್ಥಿನಿ ವಿದ್ಯಾರಾಣಿಯಾದವ ಅವರು ಕಾರ್ಯನಿರ್ವಹಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಯಾರಿಸಿರುವ ವ್ಯಂಗ್ಯ ಚಿತ್ರಗಳನ್ನು ಸಭೆಯಲ್ಲಿ ಪ್ರದರ್ಶಿಸಲಾಯಿತು.

ಯುವ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಈ ವಿದ್ಯಾರ್ಥಿನಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಪ್ರಥಮ ಸ್ಥಾನ ಶಿಕ್ಷಣ ವಿಭಾಗದ ವಿದ್ಯಾರ್ಥಿನಿ ಪರವಿನ್ (ಇರಾಕ್), ದ್ವಿತೀಯ ಸ್ಥಾನ ಇಂಗ್ಲೀಷ್ ವಿಭಾಗದ ವಿದ್ಯಾರ್ಥಿನಿ ಕೀರ್ತಿ ನಾಟೇಕರ (ಭಾರತ), ತೃತಿಯ ಸ್ಥಾನ ಶಿಕ್ಷಣ ವಿಭಾಗದ ವಿದ್ಯಾರ್ಥಿನಿ ಮುಕ್ತುಬಾಯಿ ಟಾಕೆ (ಇಟಲಿ).

ಕಾರ್ಯಕ್ರಮದಲ್ಲಿ ಪ್ರೊ. ಶಾಂತಾದೇವಿ, ಪ್ರೊ. ವಿಷ್ಣು ಶಿಂದೆ, ಪ್ರೊ.ನಾಮದೇವ ಗೌಡ, ಡಾ. ತಹಾಮಿನಾ ನಿಗಾರ ಸುಲ್ತಾನ, ಡಾ. ಪ್ರಜಪತಿ, ಡಾ.ಕಲಾವತಿ ಕಾಂಬಳೆ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...