ವಿಜಯಪುರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಎಐಎಂಎಸ್‌ಎಸ್ ಪತ್ರಿಕಾಗೋಷ್ಠಿ

Date:

ದೇಶಕ್ಕೆ ಸ್ವತಂತ್ರ ಬಂದು 76ವರ್ಷಗಳೇ ಕಳೆದರೂ ಹೆಣ್ಣು ಮಕ್ಕಳು ಇಂದಿಗೂ ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಗುಂಪು ಅತ್ಯಾಚಾರ, ವರದಕ್ಷಿಣೆ ಹಿಂಸಾಚಾರ, ವಧುದಹನ, ಆ್ಯಸಿಡ್ ದಾಳಿ, ಮರ್ಯಾದೆ ಗೇಡು ಹತ್ಯೆ, ಬಾಲ್ಯ ವಿವಾಹ, ಉದ್ಯೋಗ ಸ್ಥಳದಲ್ಲಿ ಲೈಂಗಿಕ ಶೋಷಣೆ, ಹೆಣ್ಣು ಮಕ್ಕಳ ಕಳ್ಳ ಸಾಗಣಿಕೆ ಹಾಗೂ ಭ್ರೂಣ ಹತ್ಯೆ ಹೀಗೆ ಹಲವಾರು ಮುಖಗಳಲ್ಲಿ ಮಹಿಳೆಯರು ದೌರ್ಜನ್ಯಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಎಐಎಂಎಸ್‌ಎಸ್ ರಾಜ್ಯ ಸದಸ್ಯೆ ಕಲ್ಯಾಣಿ ಎಂ.ವಿ ಹೇಳಿದ್ದಾರೆ.

ವಿಜಯಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆದ 900 ಹೆಣ್ಣುಭ್ರೂಣ ಹತ್ಯೆ ಇಡೀ ಸಮಾಜವನ್ನೇ ತಲ್ಲಣ ಗೊಳಿಸಿವೆ. ಪ್ರೀತಿಸಿದ ಯುವಕ ಯುವತಿ ಓಡಿ ಹೋದರೆಂದು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ತಿಳಿಸಿದ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಒಟ್ಟಾರೆಯಾಗಿ ಮಹಿಳೆ ಎಲ್ಲಾ ವಿಧದಲ್ಲೂ ಬಲುಪಶು ಆಗುವುದನ್ನು ನೋಡುತ್ತಿದ್ದೇವೆ” ಎಂದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ದ 2022ವರದಿಯ ಪ್ರಕಾರ ದೇಶದಲ್ಲಿ ಪ್ರತಿ 11ನಿಮಿಷಕ್ಕೆ ಒಬ್ಬ ಮಹಿಳೆಯ ಮೇಲೆ ಅತ್ಯಾಚಾರ, ದಿನಕ್ಕೆ 90 ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿವೆ. 2009ರಿಂದ 2021ರವರೆಗೆ ಕೇವಲ ಎರಡು ವರ್ಷಗಳಲ್ಲಿ 13.13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ನಾಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರನೆಡೆಗೆ ನೆಗೆದ ಇದೇ ಸಮಾಜದಲ್ಲಿ, ಇಂದಿಗೂ ಹೆರಿಗೆಯಾದ ಮೇಲೆ ಹಸಿ ಬಾಣಂತಿಯನ್ನು ಹುಟ್ಟಿದ ಹಸಿ ಗುಸಿನೊಂದಿಗೆ ಊರಾಚೆ ಗುಡಿಸಿಲಿನಲ್ಲಿ ಇಡುವ ಹಳೆಯ ಗೊಡ್ಡು ಸಂಪ್ರದಾಯವನ್ನು ನೋಡುತ್ತಿದ್ದೇವೆ. ಇತ್ತೀಚಿಗೆ ತುಮಕೂರಿನ ಗೊಲ್ಲರಹಟ್ಟಿಯಲ್ಲಿ ನಡೆದ ಘಟನೆ ನಮ್ಮ ಸಮಾಜದಲ್ಲಿ ಬೇರೂರಿವುದಕ್ಕೆ ಹಿಡಿದ ಕನ್ನಡಿ.

ಸಂಘಟಿತ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕೋಟ್ಯಂತರ ಬಡ, ಕೆಳಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಗೌರವಿಯುತ ಕನಿಷ್ಠ ವೇತನ ವಾಗಲಿ ಸಾಮಾಜಿಕ ಭದ್ರತೆಯಾಗಲಿ ಕಾತ್ರಿ ಆಗುತ್ತಿಲ್ಲ ಎಂದು ಅವರು ದೂರಿದರು.

ಅಸಮಾನತೆ ಮತ್ತು ಅನ್ಯಾಯದ ಮೇಲೆ ನಿಂತಿರುವ ಬಂಡವಾಳಶಾಹಿ ವ್ಯವಸ್ಥೆಯು ಮಹಿಳೆಯರನ್ನು ಸೇರಿದಂತೆ ಇಡೀ ದುಡಿಯುವ ಜನ ಸಮುದಾಯವನ್ನೇ ಆರ್ಥಿಕ ಶೋಷಣೆಗೆ ಒಳಪಡಿಸಿದೆ. ಅಲ್ಲದೇ, ಮಹಿಳೆ ಉಳಿಗ ಮಾನ್ಯ ವ್ಯವಸ್ಥೆಯ ಪಳಿಯುಳಿಕೆಯಾದ ಹಳೆಯ ಮೌಲ್ಯ ಪ್ರಜ್ಞೆ, ಪುರುಷಪ್ರಧಾನ ಮನೋ ಧೋರಣೆಯ ದೌರ್ಜನ್ಯಕ್ಕೆ ಗುರಿಯಾಗುತ್ತಿದ್ದಾಳೆ.

ಈ ಎಲ್ಲಾ ಸಮಸ್ಯೆಗಳಿಂದ ಬಳಲುತ್ತಿರುವ ಮಹಿಳಾ ಸಮುದಾಯವನ್ನು ಉನ್ನತ ನೀತಿ ಉನ್ನತ ನೈತಿಕತೆ ಆಧಾರದಲ್ಲಿ ಅವರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವಂತ ಅವರನ್ನು ವೈಚಾರಿಕವಾಗಿ ರಾಜಕೀಯವಾಗಿ ಸಂಸ್ಕೃತಿಕವಾಗಿ ಸಂಘಟಿಸಿ ಹೋರಾಟ ಕಟ್ಟುತ್ತಿರುವ ಎಐಎಂಎಸ್ಎಸ್ ಸಂಘಟನೆಯನ್ನು, ಇನ್ನು ಬಲಪಡಿಸಲು ಮತ್ತು ವಿಸ್ತರಿಸಲು ಏಳನೇ ರಾಜ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದ್ದೇವೆ ಎಂದರು.

ಜನೇವರಿ ಆರು ಮತ್ತು ಏಳರಂದು ದಾವಣಗೆರೆಯಲ್ಲಿ ನಡೆಯುವ ಈ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ರೈತಾಪಿ ಮಹಿಳೆಯರು ಕೂಲಿ ಕಾರ್ಮಿಕರು, ಗ್ರಹಿಣಿಯರು, ಗಾರ್ಮೆಂಟ್ ಮಹಿಳೆಯರು, ದುಡಿಯುವ ಮಹಿಳೆಯರು, ವಿದ್ಯಾರ್ಥಿನಿಯರು ಸೇರಿದಂತೆ ವಿವಿಧ ಸ್ಥಳದ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಈ ಸಮ್ಮೇಳನವನ್ನು ಉದ್ಘಾಟನೆಯನ್ನು ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಐ ಎಂಎಸ್ಎಸ್ ಜಿಲ್ಲಾ ಸಂಚಾಲಕರಾದ ಶಿವಬಾಳಮ್ಮ ಕೊಂಡಗೋಳಿ, ಸದಸ್ಯರಾದ ಶಿವರಂಜನಿ, ರಾಜ್ಮಾ ಕಲಾದಗಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...