ಕಾಂಗ್ರೆಸ್‌ಗೂ ಬಂತು ಹೆಸರು ಬದಲಿಸುವ ಖಯಾಲಿ; ವಿಜಯಪುರ ಮರುನಾಮಕರಣಕ್ಕೆ ಮುಂದಾದ ಸರ್ಕಾರ

Date:

2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಜಿಲ್ಲೆಗೆ ಮರುನಾಮಕರಣ ಮಾಡಲು ಮುಂದಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಿಸಿದ ವಚನ ಚಳುವಳಿಯ ನೇತಾರ ಬಸವಣ್ಣನವರ ಹೆಸರನ್ನು ವಿಜಯಪುರಕ್ಕೆ ಮರುನಾಮಕರಣ ಸರ್ಕಾರ ಚಿಂತಿಸುತ್ತಿದೆ.

ಜಿಲ್ಲೆಯ ಹೆಸರು ಬದಲಿಸುವ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವಣ್ಣನವರ ಹೆಸರನ್ನು ಜಿಲ್ಲೆಗೆ ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಬಸವಣ್ಣನವರ ಕೊಡುಗೆಗಳನ್ನು ಪರಿಗಣಿಸಿ ಸರ್ಕಾರವು ಜಿಲ್ಲೆಯನ್ನು ‘ಬಸವೇಶ್ವರ ಜಿಲ್ಲೆ’ ಅಥವಾ ‘ಬಸವ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಬಯಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಚುನಾಯಿತ ಪ್ರತಿನಿಧಿಗಳು, ಗಣ್ಯರು, ಎನ್‌ಜಿಒಗಳು ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. 15 ದಿನಗಳೊಳಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಗೆ ಮತ್ತೆ ಮರುನಾಮಕರಣ ಮಾಡುವ ವಿಚಾರವನ್ನು ಬೆಂಬಲಿಸುವುದಿಲ್ಲ ದಲಿತ ಸಮುದಾಯದ ಕೆಲವರು ಸೇರಿದಂತೆ ಹಲವು ಮುಖಂಡರು, ಇತಿಹಾಸಕಾರರು ಎಂದು ಹೇಳಿದ್ದಾರೆ. ಹೆಸರು ಬದಲಿಸುವ ಪ್ರಕ್ರಿಯೆ ಅನಗತ್ಯ. ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವ ಬದಲು ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರೆಲ್ಲರೂ ಹೇಳುತ್ತಿದ್ದಾರೆ.

“ಜಿಲ್ಲೆಯ ಹೆಸರನ್ನು ಮತ್ತೆ ಮರುನಾಮಕರಣ ಮಾಡುವ ಅಗತ್ಯವಿಲ್ಲ….” ಎಂದು ಇತಿಹಾಸಕಾರ, ಲೇಖಕ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣ ಕೊಲ್ಹಾರ ಕುಲಕರ್ಣಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಶೋಭಕ್ಕ ಅಥವಾ ವಿಜಯೇಂದ್ರ – ಯಾರು ಹಿತವರು ಈ ಸಂದಿಗ್ಧದೊಳಗೆ?

“ಬಿಜಾಪುರ ಹೆಸರನ್ನು ವಿಜಯಪುರ ಎಂದು ಬದಲಾಯಿಸುವ ಸರ್ಕಾರದ ನಿರ್ಧಾರವನ್ನು ನಾನು ವಿರೋಧಿಸಿದ್ದೆ. ಮೂರು ಶತಮಾನಗಳಿಂದ ಈ ಪ್ರದೇಶವನ್ನು ಬಿಜಾಪುರ ಎಂದು ಗುರುತಿಸಲಾಗಿದೆ. ವಿನಾಕಾರಣ ವಿಜಯಪುರ ಎಂದು ಹೆಸರು ಬದಲಿಸಲಾಗಿದೆ. ಸರ್ಕಾರವು ಜಿಲ್ಲೆಯ ಹೆಸರನ್ನು ಮತ್ತೆ ಬದಲಾಯಿಸಲು ಬಯಸಿದೆ, ಇದು ಅಪ್ರಾಯೋಗಿಕ” ಎಂದು ಅವರು ವಿರೋಧಿಸಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

“ಬಸವಣ್ಣ ಹುಟ್ಟಿದ ಬಸವನಬಾಗೇವಾಡಿ ತಾಲೂಕನ್ನು ಅಭಿವೃದ್ಧಿ ಪಡಿಸಬಹುದು. ಅವರ ಹೆಸರಲ್ಲಿ ಈಗಾಗಲೇ ‘ಬಸವ ಎಕ್ಸ್‌ಪ್ರೆಸ್’ ರೈಲು ಇದ್ದು, ಇಲ್ಲಿನ ಹೊಸ ವಿಮಾನ ನಿಲ್ದಾಣಕ್ಕೆ ಬಸವಣ್ಣನವರ ಹೆಸರಿಡುವ ಪ್ರಸ್ತಾವನೆ ಇದೆ. ಹೀಗಾಗಿ, ಮತ್ತೆ ಜಿಲ್ಲೆಯ ಹೆಸರನ್ನು ಬದಲಾಯಿಸುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...