ಇಂಡಿ | ಸಾವಳಸಂಗದಲ್ಲಿ ಸಾವಯವ ಸುಗ್ಗಿ ಸಂಭ್ರಮ; ರೈತ ಮಹಿಳೆಯರ ಸಾಧನೆಗೆ ಶ್ಲಾಘನೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಸಾವಯವ ಕೃಷಿಯ ಮಹತ್ವವನ್ನು ಸಾರುವ ‘ಸಾವಯವ ಸುಗ್ಗಿ ಸಂಭ್ರಮ’ ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನೆರವೇರಿತು. ಸಾವಯವ ಪ್ರಗತಿಪರ ರೈತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಇಂದು ಹೊಸಮನಿ ಅವರ ನೇತೃತ್ವದಲ್ಲಿ, ಗ್ರಾಮದ ರಾಜಶ್ರೀ ಹೊಸಮನಿ ಅವರ ತೋಟದಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಿಂದ ಆಗಮಿಸಿದ ರೈತ ಮಹಿಳೆಯರು ಭಾಗವಹಿಸಿ, ತಮ್ಮ ಸಾವಯವ ಕೃಷಿ ಅನುಭವಗಳು, ಸವಾಲುಗಳು ಮತ್ತು ಸಾಧನೆಗಳನ್ನು ಪರಸ್ಪರ ಹಂಚಿಕೊಂಡರು. ಸ್ಥಳೀಯ ರೈತ ಮಹಿಳೆಯರು ತಾವು ಬೆಳೆದ ಬೆಳೆಗಳಿಗೆ ಮೌಲ್ಯವರ್ಧನೆ (Value Addition) ಮಾಡಿ ನೇರವಾಗಿ ಬೆಂಗಳೂರು ಮಾರುಕಟ್ಟೆಗೆ ಮಾರಾಟ ಮಾಡುತ್ತಾ ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಂಡು ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾವಯವ ಚಿಂತಕ ರಾಜಶೇಖರ್ ನಿಂಬರಗಿ ಅವರು ವಿಷಮುಕ್ತ ಕೃಷಿಯ ಅಗತ್ಯತೆ, ಮಣ್ಣಿನ ಆರೋಗ್ಯ ಮತ್ತು ಭವಿಷ್ಯದ ಕೃಷಿ ದಿಕ್ಕುಗಳ ಕುರಿತು ಮಾರ್ಗದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಡಲದನಿ ಮಹಿಳಾ ಒಕ್ಕೂಟದ ನಿರ್ದೇಶಕಿ ಭುವನೇಶ್ವರಿ ಕಾಂಬಳೆ ಮಾತನಾಡಿ, ರೈತ ಮಹಿಳೆಯರಲ್ಲಿ ಇರುವ ನೈಜ ಕೃಷಿ ಜ್ಞಾನ ಮತ್ತು ಕೌಶಲ್ಯಗಳು ಅತ್ಯಂತ ಅದ್ಭುತವಾಗಿವೆ. ಮಣ್ಣಿನ ನಾಡಿಮಿಡಿತ ಅರಿತಿರುವ ಈ ಮಹಿಳೆಯರು ಸಾವಯವ ಕೃಷಿಯ ಮೂಲಕ ತರುತ್ತಿರುವ ಬದಲಾವಣೆಗಳು ರಾಜ್ಯಕ್ಕೆ ಮಾದರಿಯಾಗುತ್ತಿರುವುದು ಸಂತೋಷದಾಯಕ ಬೆಳವಣಿಗೆ ಎಂದರು.

ಸಂವಾದ ಸಂಸ್ಥೆಯ ರಮೇಶ್ ಚೀಮಾನಹಳ್ಳಿ ಮಾತನಾಡಿ, ಮಣ್ಣನ್ನು ನಂಬಿದ ಮಹಿಳೆಯರು ಇಂದು ಬೆಳೆಗಾರರಾಗಿ ಮಾತ್ರವಲ್ಲದೆ ಉದ್ದಿಮೆದಾರರಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ. ಇಂತಹ ಸಬಲೀಕರಣದ ಹಾದಿಯಲ್ಲಿ ಸಂವಾದ ಸಂಸ್ಥೆ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂವಾದ ಸಂಸ್ಥೆಯ ಅಂಬಿಕಾ ಅವರು ಕೂಡ ಉಪಸ್ಥಿತರಿದ್ದು, ರೈತ ಮಹಿಳೆಯರ ಪ್ರಯತ್ನಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಮೋರೆ, ಪಂಚಾಯತ್ ಸದಸ್ಯೆ ಅನುಸೂಯ ಸಾವಳಸಂಗ ಸೇರಿದಂತೆ ಹಲವರು ಉಪಸ್ಥಿತರಿದ್ದು, ರೈತ ಮಹಿಳೆಯರ ಈ ವಿಶಿಷ್ಟ ಪ್ರಯತ್ನಕ್ಕೆ ಬೆಂಬಲ ಸೂಚಿಸಿದರು.

ಸ್ಥಳೀಯ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೋಟಕ್ಕೆ ಭೇಟಿ ನೀಡಿ ಜೀವಾಮೃತ, ದಶಪರ್ಣಿ ಕಷಾಯ ಮತ್ತು ವಿವಿಧ ಸಾವಯವ ತರಕಾರಿ ಬೆಳೆಗಳನ್ನು ಕುತೂಹಲದಿಂದ ವೀಕ್ಷಿಸಿದರು. ರೈತ ಮಹಿಳೆಯರು ಹಾಡಿದ ಜಾನಪದ ಸುಗ್ಗಿ ಹಾಡುಗಳು ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಳೆ ತುಂಬಿದವು.

ಕಾರ್ಯಕ್ರಮದಲ್ಲಿ ರೈತ ಮಹಿಳೆ ಲಕ್ಷ್ಮಿ ದ್ರಾವಿಡ್, ಸಂಗೀತ ಮಯೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...