ನಮ್ಮ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ದೇಶದ ಹೆಮ್ಮೆಯ ಸೈನಿಕ ಶಾಲೆಗೆ ಆಯ್ಕೆಯಾಗಿರುವುದು ಹೆಮ್ಮೆ ತಂದಿದೆ. ಇದು ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಯಲ್ಲ, ಇದು ಜ್ಞಾನ ಮತ್ತು ಹೋರಾಟದ ಹಾದಿಯಲ್ಲಿ ಬೆಳೆಯುತ್ತಿರುವ ಪ್ರತಿಯೊಬ್ಬ ಹೆಣ್ಣುಮಗಳ ಜಯ ಎಂದು ʼಒಡಲ ದನಿʼ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸೈನಿಕ ಶಾಲೆಗೆ ಆಯ್ಕೆಯಾಗಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ಅನುಷ್ಕಾ ದುಂಡಪ್ಪ ಬನಸೂಡೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಬಲಾದ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ಊರಿನ ಪ್ರಮುಖರು ಅನುಷ್ಕಾಳ ಸಾಧನೆಯನ್ನು ಕೊಂಡಾಡಿದ್ದು, ಮುಂದಿನ ದಿನಗಳಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಉನ್ನತ ಅಧಿಕಾರಿಯಾಗಿ ಹೊರಹೊಮ್ಮಲಿ ಎಂದು ಹಾರೈಸಿದ್ದಾರೆ.

ಅನುಷ್ಕಾ ಮೊದಲಿನಿಂದಲೂ ವಿದ್ಯಾಭ್ಯಾಸದಲ್ಲಿ ಅತೀವ ಆಸಕ್ತಿ ಹೊಂದಿದ್ದು, ಜಾಣ ವಿದ್ಯಾರ್ಥಿನಿ, ಶಿಸ್ತು ಮತ್ತು ನಿರಂತರ ಈ ಪರಿಶ್ರಮವೇ ಈ ಉನ್ನತ ಸಾಧನೆಗೆ ಕಾರಣವಾಗಿದೆ. ಕಡು ಬಡತನ ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ, ಕಲಿಕೆಯಲ್ಲಿ ಆಕೆ ತೋರಿದ ತನ್ಮಯತೆ ಇಂದು ಸಾರ್ಥಕವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ‘ಒಡಲ ಧ್ವನಿ ಮಹಿಳಾ ಒಕ್ಕೂಟ’ ಹಾಗೂ ಸಾಮಾಜಿಕ ಹೋರಾಟಗಾರ್ತಿಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ
ಈ ಸಂದರ್ಭದಲ್ಲಿ ಒಡಲ ಧ್ವನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಊರಿನ ಗುರು ಹಿರಿಯರು ಇದ್ದರು.





