ವಿಜಯಪುರ | ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

Date:

ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎನ್.ಟಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪಿಎಸ್ಐ ಸೇರಿ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳವಾರ ನ್ಯಾಯಾಲಯದಲ್ಲಿ ಕಲಾಪಗಳನ್ನು ಬಹಿಷ್ಕರಿಸಿ ವಕೀಲರು ಪ್ರತಿಭಟನೆ ನಡೆಸಿದ್ದು, ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಾನೂನುಗಳನ್ನು ಗೌರವಿಸುವುದು, ರಕ್ಷಣೆ ಮಾಡುವುದು ಮತ್ತು ಅವುಗಳನ್ನು ಕಾಪಾಡುವ ಜವಾಬ್ದಾರಿ ಪೊಲೀಸರಿಗಿದೆ. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಳ್ಳುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಚಿಕ್ಕಮಗಳೂರು ವಕೀಲನ ಮೇಲೆ ಅವಾಚ ಶಬ್ದಗಳಿಂದ ನಿಂದಿಸಿರುವ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಸರ್ಕಾರ ಈ ವಿಷಯದಲ್ಲಿ ಸಿಐಡಿ ತನಿಖೆ ಪ್ರಕರಣವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಕಾ ಸಂಸ್ಥೆಯವರು ಆರೋಪಿಗಳು ಪೊಲೀಸರು, ಅಧಿಕಾರಿ ಎಂದು ನೋಡದೆ ನಿಷ್ಪಪಕ್ಷಪಾತವಾಗಿ ತನಿಖೆ ಮಾಡಿ ವಕೀಲರ ಸಂಘಕ್ಕೆ ನ್ಯಾಯ ಕೊಡಿಸಬೇಕು. ಪೊಲೀಸರ ವಿರುದ್ಧ ತನಿಖೆಗೆ ವಿಳಂಬ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಎಚ್ ಜೆ ನಾಡಗೌಡ, ಪಿ ಬಿ ಗೌಡರ, ಬಿ ಪಿ ಮ್ಯಾಗೇರಿ, ಹಿರಿಯ ವಕೀಲರಾದ ಎಂ ಹೆಚ್ ಹಾಲಣ್ಣವರ್, ಜೆ ಎ ಚಿನಿವಾರ,ಆರ್ ಬಿ ಪಾಟೀಲ, ಬಿ ಆರ್ ನಾಡಗೌಡ, ಎಂ ಎ ಮುದ್ದೇಬಿಹಾಳ, ಎಂ ಎಸ್ ನಾವದಗಿ, ಎಸ್ ಎಂ ಗುಡಿದಿನ್ನಿ, ಬಿ ಎಂ ಮುಂದಿನಮನಿ, ಎಚ್ ವೈ ಪಾಟೀಲ, ಎನ್ ಬಿ ಮುದ್ನಾಳ್, ಎನ್ ಜಿ ಕುಲಕರ್ಣಿ, ಎಂ ಬಿ ಹುಡೆದ, ಎಸ್ ಎಂ ಕಿಣಗಿ, ಎನ್, ಆರ್, ಮೊಕಾಶಿ, ಎಸ್ ಎಂ ಚೇಲ್ಲಳಶೆಟ್ಟರ, ಎಸ್ ಎಂ ಬಾಗಲಕೋಟೆ, ಚೇತನ ಶಿವಶಿಂಪಿ, ಪಿ ಎಂ ಪಾಟೀಲ, ಮಹಾಂತಗೌಡ ಬಿರಾದಾರ, ಕೆ ಬಿ ದೊಡ್ಡಮನಿ, ಹಸೀನಾ ಅನಂತಪುರ, ರಶ್ಮಿ ಕುಲಕರ್ಣಿ, ಆರ್ ಬಿ ಪಾಟೀಲ, ಸಂತೋಷ ಎಚ್ ಎಂ, ಎಚ್ ಎಲ್ ಸರೋರ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...