ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಗೆ ನ್ಯಾಕ್‌ ತಂಡ ಭೇಟಿ

Date:

ರಾಷ್ಟ್ರೀಯ ಮೌಲ್ಯಾಂಕ ಮಾನ್ಯತಾ ಮಂಡಳಿ (ನ್ಯಾಕ್)ಯ ಉನ್ನತ ಮಟ್ಟದ ತಜ್ಞರ ತಂಡ ಡಿಸೆಂಬರ್ 21ರಿಂದ 23ರವರೆಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲಾ ತಿಳಿಸಿದ್ದಾರೆ.

“ಹರಿಯಾಣದ ಭಗತ್ ಫೂಲ್‌ಸಿಂಗ್ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ಸುದೇಶ್ ಚಿಕಾರಾ ಅವರ ನೇತೃತ್ವದಲ್ಲಿ ಏಳು ಮಂದಿ ತಜ್ಞರ ನ್ಯಾಕ್‌ ತಂಡವು ವಿಶ್ವವಿದ್ಯಾಲಯಕ್ಕೆ ಬರಲಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಹಾಗೂ ಸಿಂಧನೂರು ಮತ್ತು ಮಂಡ್ಯದಲ್ಲಿರುವ ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಅವರು ವಿವರಿಸಿದ್ದಾರೆ.

“ತಂಡ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ನಿರ್ದೇಶನಾಲಯಗಳು, ಅಧ್ಯಯನ ಕೇಂದ್ರಗಳು, ಮಹಿಳಾ ತಂತ್ರಜ್ಞಾನ ಪಾರ್ಕ್, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪ್ರಸಾರಾಂಗ, ಶಿಶುಪಾಲನಾ ಕೇಂದ್ರ, ವಸತಿ ನಿಲಯಗಳು, ಆಡಳಿತ ವಿಭಾಗ, ಶೈಕ್ಷಣಿಕ ವಿಭಾಗ, ಪರೀಕ್ಷಾ ವಿಭಾಗ, ಆರ್ಥಿಕ ವಿಭಾಗ, ಎಂಜನಿಯರಿಂಗ್ ವಿಭಾಗ, ಗ್ರಂಥಾಲಯ, ದೂರ ಶಿಕ್ಷಣ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ, ಕಂಪ್ಯೂಟರ್ ಕೇಂದ್ರ, ಕುಂದುಕೊರತೆ ನಿವಾರಣಾ ಘಟಕ, ರ್ಯಾಗಿಂಗ್ ತಡೆ ವಿಭಾಗ, ಸಿಡಿಸಿ, ಪಿಎಂಇ ಬೋರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ, ಸಮಾನ ಅವಕಾಶ ಘಟಕ, ವೃತ್ತಿ ಮಾರ್ಗದರ್ಶನ ಘಟಕ, ಸ್ವಾಮಿ ವಿವೇಕಾನಂದ ಕೇಂದ್ರ, ಕನಕದಾಸ ಅಧ್ಯಯನ ಕೇಂದ್ರ, ಮೌಲಾನಾ ಆಜಾದ್ ಅಧ್ಯಯನ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಗಾಂಧಿ ಅಧ್ಯಯನ ಕೇಂದ್ರ, ಮಹಿಳಾ ಅಧ್ಯಯನ ಕೇಂದ್ರ, ಭಾಸ್ಕರಾಚಾರ್ಯ ಅಧ್ಯಯನ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಶೈಕ್ಷಣಿಕ ಕಾರ್ಯಕ್ಷಮತೆ ಕೋರ್ಸುಗಳಿಗೆ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ. ನಾವು ಕೆಲಸ ಹೊಸ ವಿಶಿಷ್ಟ ಕೋರ್ಸ್ ಗಳನ್ನು ಸಹ ಪ್ರಾರಂಭಿಸಿದ್ದೇವೆ. ಇವು ಉದ್ಯಮದೊಂದಿಗೆ ಸಂಪರ್ಕ ಹೊಂದಿವೆ ಮತ್ತು ಉತ್ತಮ ಪ್ರಕ್ರಿಯೆಯನ್ನು ಪಡೆಯುತ್ತಿವೆ. ಈಗಾಗಿ ಈ ಬಾರಿ ನ್ಯಾಕನಿಂದ ನಮಗೆ ಉತ್ತಮ ರಾಂಕ್ ಬರುವ ವಿಶ್ವಾಸವಿದೆ” ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...