ವಿಜಯಪುರ | ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ; ಅಪರಾಧಿಗಳಿಗೆ 3 ವರ್ಷ ಜೈಲು ಶಿಕ್ಷೆ

Date:

ವಿಜಯಪುರ ಜಿಲ್ಲೆಯಲ್ಲಿ ನಾಗಠಾಣದ ಶರಣಪ್ಪ ಅರಕೇರಿ ಎಂಬವರು 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅವರಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 75 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯ ಜಿಲ್ಲೆಯ ನಾಗಠಾಣ ಗ್ರಾಮದ ಶರಣಪ್ಪ ಅರಕೇರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಜಮೀನಿಗೆ ಹೊಂದಿಕೊಂಡ ಜಮೀನಿನ ಮಾಲೀಕರಾದ ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಗಿರಿಸಾಗರ ಅವರ ಕಿರುಕುಳದಿಂದ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದು, ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...