ಸಿಂದಗಿ | ಫೆ.26ಕ್ಕೆ ʼಬೆರಗು ಪ್ರಶಸ್ತಿʼ ಪ್ರದಾನ; 25 ಪುಸ್ತಕ ಬಿಡುಗಡೆ ಸಮಾರಂಭ

Date:

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್ ಜಿ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಫೆ.26ರಂದು ಬೆಳಗ್ಗೆ 10 ಗಂಟೆಗೆ ಬೆರಗು ಪ್ರಕಾಶನ ಕೊಡಮಾಡುವ ಈ ವರ್ಷದ ʼಬೆರಗು ಪ್ರಶಸ್ತಿʼ ಪ್ರದಾನ ಸಮಾರಂಭ ಹಾಗೂ 25 ಪುಸ್ತಕಗಳ ಬಿಡುಗಡೆ ಸಮಾರಂಭ ನಡೆಯಲಿದೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅಶೋಕ ಮನಗೂಳಿ ಸಮಾರಂಭ ಉದ್ಘಾಟಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಮಾನಸ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತ ಪುಸ್ತಕಗಳನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಬಿಡುಗಡೆ ಮಾಡುವವರಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆನಿರ್ದೇಶಕ ಪ್ರೊ. ಎಚ್‌ ಟಿ ಪೋತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಸಿಂದಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಎಸ್ ಎಸ್‌ ಹಳೇಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆರಗು ಪ್ರಕಾಶನ ಸಂಸ್ಥೆ ಅಧ್ಯಕ್ಷೆ ವಿಜಯಲಕ್ಷ್ಮೀ ಕತ್ತಿ, ಪ್ರಾಚಾರ್ಯ ಎ ಆ‌ರ್ ಹೆಗ್ಗನದೊಡ್ಡಿ ಗೌರವ ಉಪಸ್ಥಿತಿ ವಹಿಸಿಕೊಳ್ಳುವರು ಎಂದು ಬೆರಗು ಪ್ರಕಾಶನ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಪ್ರಶಸ್ತಿಗೆ ಆಯ್ಕೆಯಾದವರ ವಿವರ:

ದಿವಂಗತ ಎಂ ಸಿ ಮನಗೂಳಿ ಸ್ಮರಣಾರ್ಥ ದತ್ತಿ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಅಂಕಿತ ಪ್ರಕಾಶನ ಬೆಂಗಳೂರು, ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ- ಕಲಬುರಗಿಯ ಸಾಹಿತಿ ಶ್ರೀಶೈಲ ನಾಗರಾಳ, ಪ್ರೊ. ಎಚ್‌ ಟಿ ಪೋತೆ ರಾಜ್ಯಮಟ್ಟದ ಹಸ್ತಪ್ರತಿ ಪುರಸ್ಕಾರ ಪ್ರಶಸ್ತಿ-ಅನುವಾದಿತ ಕೃತಿ ‘ಯುದ್ಧಮೃದಂಗ'(ಲೇಖಕ ದೇವೂ ಮಾಕೊಂಡ ಸಿಂದಗಿ), ದಿವಂಗತ ಯಮುನಾ ಬಾಯಿ ರಾಜಣ್ಣಭೋವಿ ಸ್ಮರಣಾರ್ಥದತ್ತಿ ರಾಜ್ಯಮಟ್ಟದ ಬೆರಗು ಪುಸ್ತಕ ಪ್ರಶಸ್ತಿ- ಕೃತಿ ‘ಅಪ್ಪನ ಆಟೋಗ್ರಾಫ್’ (ಲೇಖಕ ಅನಂತ ಕುಣಿಗಲ್ ತುಮಕೂರು), ಶಂಕರ ಬೈಚಬಾಳ ರಾಜ್ಯಮಟ್ಟದ ಸೃಜನೇತರ ಸಾಹಿತ್ಯ ಪ್ರಶಸ್ತಿ- ಕೃತಿ ʼಸಮುದ್ರ ತೆರೆಸರಿಸಿʼ (ಲೇಖಕಿ ಪದ್ಮಿನಿ ನಾಗರಾಜು ಬೆಂಗಳೂರು), ಕೃತಿ-ಸುರದೇನು (ಲೇಖಕ ಮಹಾದೇವ ಬಸರಕೋಡ ಬಾಗಲಕೋಟೆ), ಪ್ರೊ. ಎಚ್ ಟಿ ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿ- ಕೃತಿ ʼಲಚಮವ್ವ ಮತ್ತು ಇತರೆ ಕತೆಗಳುʼ (ಲೇಖಕಿ ಸುಜಾತಾ ಚಲವಾದಿ ತಾಳಿಕೋಟೆ).

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...