ಆಲಮೇಲದಲ್ಲಿ ಬೀದಿನಾಯಿ ಹಾವಳಿ; ಕ್ರಮಕ್ಕೆ ಸ್ಥಳೀಯರ ಆಗ್ರಹ

Date:

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾಳಿ ಮೇಲೆ ದಾಳಿ ಮಾಡುತ್ತಿವೆ. ಇತ್ತ ಆತಂಕದಲ್ಲಿರುವ ಸ್ಥಳೀಯರು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.

15 ದಿನಗಳ ಹಿಂದೆ ಸುಮಾರು 30 ರಿಂದ 40 ಬೀದಿ ನಾಯಿಗಳು ಕಚ್ಚಿದ್ದರಿಂದ ಎರಡು ಹಸುಗಳು ಮೃತಪಟ್ಟಿವೆ. ಒಂದು ಮಗುವಿಗೂ ಕಚ್ಚಿ ಗಾಯಗೊಳಿಸಿವೆ. ಹೀಗಾಗಿ ನಾಯಿಗಳ ದಾಳಿಯಿಂದ ಕಡನಿ ಆಗಸಿ ಭಾಗದ ನಿವಾಸಿಗಳು ತೀವ್ರ ಆತಂಕಗೊಂಡಿದ್ದಾರೆ. ಜನವರಿ 30ರಂದು ಆಸ್ಪಕ್ ಸಾಲ್ವೋಟಗಿ ಅವರ ಜಮೀನಿನಲ್ಲಿ ಆಕಳು ಮೇಲೆ ದಾಳಿ ಮಾಡಿವೆ. ಈ ಬಗ್ಗೆ ಪಟ್ಟಣ ಪಂಚಾಯತಿಗೆ ಮಾಹಿತಿ ನೀಡಲಾಗಿದೆ. ಒಂದೇ ವಾರದಲ್ಲಿ ಮತ್ತೊಂದು ಆಕಳು ಮೇಲೆ ದಾಳಿ ಮಾಡಿ ಸಾಯಿಸಿವೆ. ಫೆ.19ರಂದು ಸಂಜೆ 6 ಗಂಟೆಗೆ ಮನೆ ಮುಂದೆ ಕುಳಿತಿದ್ದ ಖಾಸಿಂ ಸಾಲೋಟಗಿ ಅವರ ಮಗುವಿನ ಮೇಲೆ ಬಂದೆರಗಿ ಕಚ್ಚಿ ಗಾಯಗೊಳಿಸಿವೆ. ನಾಯಿ ಕಚ್ಚುತ್ತಿದ್ದಂತೆ ಭಯಗೊಂಡು ಮಗು ಕಿರುಚಾಡಿದ ತಕ್ಷಣ ಪಾಲಕರು ಮಗು ರಕ್ಷಿಸಿದ್ದಾರೆ. ಶುಕ್ರವಾರ ಮಗುವಿನೊಂದಿಗೆ ತಹಶೀಲ್ದಾರರ ಕಚೇರಿಗೆ ತೆರಳಿದ ಪಾಲಕರು ಘಟನೆ ಬಗ್ಗೆ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳಲು ವಿನಂತಿಸಿದ್ದಾರೆ.

ಬೀದಿ ನಾಯಿಗಳ ನಿರ್ವಹಣೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಕೋರ್ಟ್ ನಿರ್ದೇಶನ ನೀಡಿದ್ದರೂ ಆಲಮೇಲ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ. ಬೀದಿ ನಾಯಿಗಳು ದಾಳಿ ಮಾಡಿದ್ದ ಬಗ್ಗೆ ಅವರ ಗಮನಕ್ಕೆ ತಂದರೂ, ನೀವು ಸುರಕ್ಷತೆ ಮಾಡಿಕೊಂಡಿರಬೇಕು ಎನ್ನುತ್ತಾರೆ ಎಂದು ಮಗುವಿನ ಪಾಲಕರು ಪಟ್ಟಣ ಪಂಚಾಯಿತಿಯ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಸಮುದಾಯದ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 43 ಗ್ರಾಮಗಳಲ್ಲಿ ನಾಯಿ ಕಡಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ ಒಂದೇ ತಿಂಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಬೀದಿ ನಾಯಿಗಳನ್ನು ಹಿಡಿದು ಒಂದೆಡೆ ಕೂಡಿಹಾಕಿ ಅವುಗಳಿಗೆ ಆಹಾರ, ಚುಚ್ಚುಮದ್ದುಗೊಳಿಸುವುದು ಸೇರಿದಂತೆ ಅವುಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಸುರೇಶ ನಾಯಕ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...