ವಿಜಯಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟ: ದಮನದ ನೆರಳಿನಲ್ಲಿ ನ್ಯಾಯದ ಹುಡುಕಾಟ

Date:

"ಸರ್ಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಸಮಿತಿ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ನ್ಯಾಯಯುತ ಆಂದೋಲನವನ್ನು ದಮನ ಮಾಡುವ ಪ್ರಯತ್ನ ನಡೆದಿದೆ"

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದ ಹೋರಾಟವು ಇತ್ತೀಚೆಗೆ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಒಂದು ಶೈಕ್ಷಣಿಕ ಸೌಲಭ್ಯದ ಬೇಡಿಕೆಯಲ್ಲ, ಬದಲಿಗೆ ಸರ್ಕಾರದ ನೀತಿಗಳು, ರಾಜಕೀಯ ಒಳಸಂಚುಗಳು ಮತ್ತು ಸಾಮಾನ್ಯ ಜನರ ಹಕ್ಕುಗಳ ನಡುವಿನ ಸಂಘರ್ಷದ ಸಂಕೇತವಾಗಿ ಮಾರ್ಪಟ್ಟಿದೆ. ಈ ಹೋರಾಟವು 100 ದಿನಗಳನ್ನು ದಾಟಿದ್ದು, ಇತ್ತೀಚಿನ ಘಟನೆಗಳಲ್ಲಿ ಪೊಲೀಸ್ ದಮನ, ಸುಳ್ಳು ಪ್ರಕರಣಗಳು ಮತ್ತು ಸ್ವಾಮೀಜಿಯೊಬ್ಬರ ಹಲ್ಲೆಯಂತಹ ಉದ್ವಿಗ್ನ ಸನ್ನಿವೇಶಗಳು ಸೇರಿವೆ.

ಇದು ಕರ್ನಾಟಕದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಖಾಸಗೀಕರಣ ಮಾಡುವ ನೀತಿಗಳ ವಿರುದ್ಧದ ಹೋರಾಟದ ಮಾದರಿಯಾಗಿದೆಯೇ? ಅಥವಾ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಒಂದು ಚದುರಂಗದ ಪಾತ್ರವೇ? ಎಂಬುದು ತಿಳಿಯದಂತಾಗಿದೆ.

ಹೋರಾಟದ ಹಿನ್ನೆಲೆ: ಖಾಸಗೀಕರಣದ ಭಯ ಮತ್ತು ಸರ್ಕಾರಿ ಭರವಸೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ದೀರ್ಘಕಾಲದ ಬೇಡಿಕೆಯಿದೆ. ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿ ಈ ಜಿಲ್ಲೆಯೂ ಒಂದು. ಅಲ್ಲದೆ ಇಲ್ಲಿನ ಜನರು ಆರೋಗ್ಯ ಸೇವೆಗಳ ಕೊರತೆಯಿಂದ ಬಳಲುತ್ತಿದ್ದಾರೆ. ಸರ್ಕಾರವು ಆರಂಭದಲ್ಲಿ ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್‌ಶಿಪ್(ಪಿಪಿಪಿ) ಮಾದರಿಯಲ್ಲಿ ಕಾಲೇಜು ಸ್ಥಾಪಿಸುವ ಯೋಜನೆಯನ್ನು ಮುಂದಿಟ್ಟಿತು. ಆದರೆ, ಹೋರಾಟಗಾರರು ಇದನ್ನು ತೀವ್ರವಾಗಿ ವಿರೋಧಿಸಿದರು. ಕಾರಣ? ಪಿಪಿಪಿ ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಯ ಭೂಮಿ, ಕಟ್ಟಡಗಳು, ಸಲಕರಣೆಗಳು ಮತ್ತು ಮಾನವ ಸಂಪನ್ಮೂಲಗಳನ್ನು ಖಾಸಗಿ ಸಂಸ್ಥೆಗೆ ಹಸ್ತಾಂತರಿಸಿದರೂ ಸಾಮಾನ್ಯ ಜನರಿಗೆ ಆರೋಗ್ಯ ಸೇವೆಗಳು ದುಬಾರಿಯಾಗುತ್ತವೆ. ಅಲ್ಲದೆ ಸರ್ಕಾರಿ ನಿಯಂತ್ರಣ ಕಡಿಮೆಯಾಗಬಹುದೆಂಬ ಆತಂಕದಿಂದ ಇಂದಿಗೂ ಪ್ರತಿಭಟನೆ ನಡೆಯುತ್ತಿದೆ.

ವಿಜಯಪುರ ಮೆಡಿಕಲ್ ಕಾಲೇಜು‌ ಪ್ರತಿಭಟನೆ

ವಿಜಯಪುರ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಈ ಆಂದೋಲನ ನಡೆಯುತ್ತಿದೆ. ಅಂಬೇಡ್ಕರ್ ಸರ್ಕಲ್ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಸಂಪೂರ್ಣ ಸರ್ಕಾರಿ ಹೂಡಿಕೆಯೊಂದಿಗೆ ಕಾಲೇಜು ಸ್ಥಾಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಆರಂಭದಲ್ಲಿ ಪಿಪಿಪಿ ಮಾದರಿಯನ್ನು ಬೆಂಬಲಿಸಿದ್ದರು. ಆದರೆ ಹೋರಾಟದ ತೀವ್ರತೆಗೆ ಮಣಿದು, ʼಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಷಯದಲ್ಲಿ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಸಿಎಂ ಅವರನ್ನ ಭೇಟಿ ಮಾಡಿಸಿದ್ದೇನೆ. ಸರ್ಕಾರಿ ಕಾಲೇಜು ಮಾಡಲು ಮುಖ್ಯಮಂತ್ರಿ ಒಪ್ಪಿದ್ದಾರೆ. ಡಿಸೆಂಬರ್‌ 9ರಂದು ಮತ್ತೊಮ್ಮೆ ಸಿಎಂ ಭೇಟಿ ಮಾಡಿಸುತ್ತೇನೆ. ಇಷ್ಟೆಲ್ಲ ಹೇಳಿದ ಮೇಲೂ ಹೋರಾಟಗಾರರ ಉದ್ದೇಶ ನನಗೆ ಅರ್ಥವಾಗುತ್ತಿಲ್ಲʼ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸಚಿವ ಎಂ ಬಿ ಪಾಟೀಲ

“ಸಿಎಂ ಬರೆದು ಕೊಡಬೇಕು, ಸಚಿವ ಸಂಪುಟದಲ್ಲಿ ಘೋಷಣೆ ಮಾಡಬೇಕು ಎಂದರೆ ಆಗುವುದಿಲ್ಲ. ರಾಜ್ಯದಲ್ಲಿ ದಿನಕ್ಕೆ ಸಾವಿರಾರು ಪ್ರತಿಭಟನೆ ಆಗುತ್ತವೆ. ಎಲ್ಲರಿಗೂ ಲಿಖಿತವಾಗಿ ಬರೆದುಕೊಡಲು ಆಗುತ್ತದೆಯೇ? ಹೋರಾಟಗಾರರ ಬಗ್ಗೆ ನನಗೆ ಗೌರವ ಇದೆ. ಪಿಪಿಪಿ ಮಾಡಲ್ಲ ಹಣದ ಲಭ್ಯತೆ ನೋಡಿಕೊಂಡು ಸರ್ಕಾರಿ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಿಂದಲೇ ಹೇಳಿಸುತ್ತೇನೆ. ನಮ್ಮ ಮೇಲೆ ನಂಬಿಕೆ ಇರಬೇಕು” ಎನ್ನುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿಷಯವು ಚರ್ಚೆಗೆ ಬರಲಿದೆ. ಆದರೂ, ಹೋರಾಟಗಾರರು ಲಿಖಿತ ಭರವಸೆಗೆ ಒತ್ತಾಯಿಸಿ ಆಂದೋಲನ ಮುಂದುವರೆಸಿದ್ದಾರೆ. ಈ ಹೋರಾಟವು ನಾಲ್ಕು ತಿಂಗಳುಗಳಿಗಿಂತ ಹೆಚ್ಚು ಕಾಲದಿಂದಲೂ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ವಿಜಯಪುರ ಮೂಲದವರೊಂದಿಗೆ ಎರಡು ಸುತ್ತಿನ ಸಭೆಗಳನ್ನೂ ನಡೆಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವ ಎಂ ಬಿ ಪಾಟೀಲ್‌ ಅವರು, ʼಪಿಪಿಪಿ ಮಾದರಿಯು ಹಿಂದಿನ ಬಿಜೆಪಿ ಸರ್ಕಾರದ ಯೋಜನೆ. ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಹೋರಾಟಗಾರರೊಂದಿಗೆ ಸೇರಿ ನಾಟಕವಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಹಾಗಾಗಿ ಇದು ಹೋರಾಟದಲ್ಲಿ ರಾಜಕೀಯ ದೃಷ್ಟಿಕೋನವನ್ನು ಹೆಚ್ಚಿಸಿದೆ. ಆದರೆ ಸಕ್ಕರೆ ಮಂತ್ರಿ ಶಿವಾನಂದ ಪಾಟೀಲ್ ಅವರು ಹೋರಾಟಗಾರರನ್ನು ಬೆಂಬಲಿಸಿದ್ದಾರೆ. ಆದರೂ ಸರ್ಕಾರದ ಒಳಗಿನ ವಿರೋಧಾಭಾಸಗಳು ಸ್ಪಷ್ಟವಾಗಿವೆ.

ಇತ್ತೀಚಿನ ಘಟನೆಗಳು: ಧರಣಿ, ಬಂಧನ ಮತ್ತು ಉದ್ವಿಗ್ನತೆ

2026ರ ಜನವರಿ 1ರಂದು ಹೋರಾಟವು ತೀವ್ರಗೊಂಡಿತು. ಹೋರಾಟಗಾರರು ಸಚಿವ ಎಂ ಬಿ ಪಾಟೀಲ್ ಅವರ ವಿಜಯಪುರ-ಸೋಲಾಪುರ ರಸ್ತೆಯಲ್ಲಿರುವ ನಿವಾಸದ ಎದುರು ಧರಣಿ ನಡೆಸಲು ಮುಂದಾದರು. ಪೊಲೀಸರು ಮಧ್ಯಪ್ರವೇಶಿಸಿ 22 ಮಂದಿ ಹೋರಾಟಗಾರರನ್ನು ವಶಕ್ಕೆ ಪಡೆದರು. ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಹುಣಶ್ಯಾಳ ಮಠದ ಶ್ರೀ ಸಂಗನಬಸವೇಶ್ವರ ಸ್ವಾಮೀಜಿ ಸೇರಿದಂತೆ ಹಲವರು ಭಾಗವಹಿಸಿದ್ದರು.

image 88 1

ಮುಖ್ಯ ಘಟನೆಯಾಗಿ, ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸೀತಾರಾಮ ಲಮಾಣಿ ಅವರು ಸ್ವಾಮೀಜಿಯ ಮೊಬೈಲ್ ಫೋನ್ ಕಸಿದುಕೊಂಡಿದ್ದರಿಂದ ಕೋಪಗೊಂಡ ಸ್ವಾಮೀಜಿ ಪೊಲೀಸ್ ಅಧಿಕಾರಿಯ ಕಪಾಳಕ್ಕೆ ಹೊಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಹೋರಾಟದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ನಂತರ, ಜನವರಿ 1ರ ಮಧ್ಯರಾತ್ರಿ ಪೊಲೀಸರು ಹೋರಾಟ ಸ್ಥಳದಲ್ಲಿ ಹಾಕಲಾಗಿದ್ದ ಟೆಂಟನ್ನು ತೆರವುಗೊಳಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಪ್ರತಿಭಟನಾಕಾರರ ಪ್ರವೇಶ ನಿಷೇಧಿಸಿದ್ದಾರೆ. ಬಳಿಕ ಸ್ವಾಮೀಜಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಲ್ ಇಂಡಿಯಾ ಕಿಸಾನ್ ಖೇತ್ ಮಜ್ದೂರ್ ಸಂಘಟನೆ (AIKKMS), ಎಸ್‌ಯುಸಿಐ, ಜನ ವೇದಿಕೆ ಸಂಘಟನೆ ಸೇರಿದಂತೆ ಕೆಲ ಸಂಘಟನೆಗಳು ಈ ಬಂಧನವನ್ನು ಖಂಡಿಸಿದ್ದು, “ಸರ್ಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಸಮಿತಿ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ನ್ಯಾಯಯುತ ಆಂದೋಲನವನ್ನು ದಮನ ಮಾಡುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿವೆ.

ವಿಜಯಪುರ ಎಸ್‌ಯುಸಿಐ 1

ಜನವರಿ 3ರಂದು AIKKMS ಸದಸ್ಯರು ಮೈಸೂರಿನಲ್ಲಿ ಧರಣಿ ನಡೆಸಿದ್ದು, ʼಇದು ನ್ಯಾಯಯುತ ಬೇಡಿಕೆಯನ್ನು ದಮನಿಸುವ ಪ್ರಯತ್ನʼ ಎಂದು ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸ್ವಾಮೀಜಿಯ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ಹೋರಾಟದ ಗಮನವನ್ನು ಹಳಿ ತಪ್ಪಿಸಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಹೋರಾಟ ಸಮಿತಿಯ ನಾಯಕರು ಅರವಿಂದ ಕುಲಕರ್ಣಿ, ಅನಿಲ್ ಹೊಸಮನಿ ಮತ್ತು ಇತರರು ಈ ಘಟನೆಯಲ್ಲಿ ಭಾಗವಹಿಸಿದ್ದರು.

ಸಾಮಾಜಿಕವಾಗಿ ನೋಡಿದರೆ, ವಿಜಯಪುರದಂತಹ ಹಿಂದುಳಿದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಅಗತ್ಯ. ಖಾಸಗೀಕರಣದಿಂದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಶ್ರೀಮಂತರಿಗೆ ಮಾತ್ರ ಸೀಮಿತವಾಗಬಹುದು. ಇದರಿಂದ ಸಾಮಾಜಿಕ ಅಸಮಾನತೆ ಹೆಚ್ಚುತ್ತದೆ. ಸ್ವಾಮೀಜಿಯ ಹಲ್ಲೆ ಘಟನೆಯು ಹೋರಾಟದ ನೈತಿಕತೆಯನ್ನು ಪ್ರಶ್ನಿಸಿದೆಯಾದರೂ ಅದು ಪೊಲೀಸ್ ದಮನದ ಪ್ರತಿಕ್ರಿಯೆಯಾಗಿರಬಹುದು. ಇದೀಗ ಚರ್ಚೆಯು ಬೇಡಿಕೆಯಿಂದ ಹಲ್ಲೆಯ ಕಡೆಗೆ ಸರಿದಿರುವುದು ಹೋರಾಟವನ್ನು ಹಳಿ ತಪ್ಪಿಸಬಹುದೇ? ಎಂಬ ಕಳವಳನ್ನೂ ಹುಟ್ಟುಹಾಕಿದೆ.

ಸರ್ಕಾರದ ದಮನಕ್ಕೆ ಸಂಬಂಧಿಸಿದಂತೆ, ಸುಳ್ಳು ಮೊಕದ್ದಮೆಗಳು ಮತ್ತು ಬಂಧನಗಳು ಪ್ರಜಾಪ್ರಭುತ್ವದಲ್ಲಿ ಆಂದೋಲನಗಳನ್ನು ಹತ್ತಿಕ್ಕುವ ಸಾಧನವಾಗಿವೆ. AIKKMS, ಎಸ್‌ಯುಸಿಐ, ಜನ ವೇದಿಕೆ ಮತ್ತು ಇತರ ಸಂಘಟನೆಗಳ ಖಂಡನೆಯು ಇದನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬಹುದು. ಅಲ್ಲದೆ ಇದು ರಾಜ್ಯದ ಇತರ ಹೋರಾಟಗಳಿಗೆ ಮಾದರಿಯಾಗಬಹುದು.

ನ್ಯಾಯಯುತ ಬೇಡಿಕೆಗೆ ಸರ್ಕಾರದ ಜವಾಬ್ದಾರಿ

ಈ ಹೋರಾಟವು ಸರ್ಕಾರದ ನೀತಿಗಳಲ್ಲಿನ ಅಸಮಂಜಸತೆಯನ್ನು ಬಯಲಿಗೆಳೆದಿದೆ. ಪಿಪಿಪಿ ಮಾದರಿಯು ಆರ್ಥಿಕವಾಗಿ ಸಹಾಯಕವಾಗಬಹುದು. ಆದರೆ ಹಿಂದುಳಿದ ಪ್ರದೇಶಗಳಲ್ಲಿ ಸರ್ಕಾರಿ ಸೌಲಭ್ಯಗಳು ಅಗತ್ಯ. ಸಚಿವ ಪಾಟೀಲ್ ಮತ್ತು ಮುಖ್ಯಮಂತ್ರಿಗಳ ಭರವಸೆಗಳು ಲಿಖಿತ ರೂಪಕ್ಕೆ ಬರಬೇಕು. ಇಲ್ಲದಿದ್ದರೆ ಇದು ಕೇವಲ ರಾಜಕೀಯ ತಂತ್ರವಾಗಿ ಮಾರ್ಪಡಬಹುದು. ಸ್ವಾಮೀಜಿಯ ಹಲ್ಲೆಯಂತಹ ಘಟನೆಗಳು ಹೋರಾಟದ ನೈತಿಕತೆಯನ್ನು ಕಾಪಾಡುವಲ್ಲಿ ಸವಾಲುಗಳನ್ನು ಎದುರಿಸಿದರೂ ಮೂಲ ಬೇಡಿಕೆ ನ್ಯಾಯಯುತವಾಗಿದೆ. ಸರ್ಕಾರವು ದಮನ ಮಾಡುವ ಬದಲು ಸಂವಾದಕ್ಕೆ ಮುಂದಾಗಬೇಕು ಎಂಬುದು ಪ್ರತಿಭಟನಾಕಾರರ ಅಭಿಪ್ರಾಯವಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟ ಮತ್ತಷ್ಟು ತೀವ್ರವಾಗಬಹುದು. ವಿಜಯಪುರದ ಜನರ ಹಕ್ಕುಗಳು ಗೆಲ್ಲಬೇಕು. ಇದರಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಭವಿಷ್ಯ ನಿರ್ಧಾರವಾಗುತ್ತದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...