ವಿಜಯಪುರ | ಮಕ್ಕಳ ಸಮಸ್ಯೆಗಳ ಕುರಿತು ‘ಮಕ್ಕಳ ಸಂಸತ್’ ನಡೆಸಿದ ವಿದ್ಯಾರ್ಥಿಗಳು

Date:

ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗಳು ಮಕ್ಕಳ ಸುಂದರ ಭವಿಷ್ಯವನ್ನು ನರಕವನ್ನಾಗಿಸುತ್ತಿವೆ. ಮಕ್ಕಳಿಗೆ ಪೌಷ್ಠಿಕ ಆಹಾರ ಕೊರತೆ ಎದುರಾಗುತ್ತಿದೆ. ಇವು ಮಕ್ಕಳ ಸಂಸತ್‌ನಲ್ಲಿ ಪ್ರತಿಧ್ವನಿಸಿದ ಪ್ರಮುಖ ಮಕ್ಕಳ ಸಮಸ್ಯೆಗಳಾಗಿವೆ. ಈ ಎಲ್ಲ ಸಮಸ್ಯೆಗಳನ್ನು ‘ಬಾಲ ಜನಪ್ರತಿನಿಧಿ’ಗಳೇ ಮಂಡಿಸಿದ್ದು, ಅವುಗಳನ್ನು ಪರಿಹಾರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಿಜಯಪುರದ ಶಾಂತಿನಗರದಲ್ಲಿ ವಿದ್ಯಾರ್ಥಿಗಳು ‘ಮಕ್ಕಳ ಸಂಸತ್’ ನಡಸಿದ್ದಾರೆ. ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಿಕ್ಕಮಕ್ಕಳು ಅನುಭವಿ ಸಂಸದರಂತೆ, ಜನಪ್ರತಿನಿಧಿಗಳಂತೆ ವಿವಿಧ ವಿಷಯಗಳ ಕುರಿತು ತರ್ಕಬದ್ಧವಾಗಿ ವಾದ ಮಂಡಿಸಿ ಗಮನ ಸೆಳೆದಿದ್ದಾರೆ.

ಮಕ್ಕಳು ಎದುರಿಸುತ್ತಿರುವ ರಕ್ತಹೀನತೆ ಸಮಸ್ಯೆ, ಪೌಷ್ಠಿಕ ಆಹಾರದ ಕೊರತೆ, ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮೊದಲಾದ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಡುವ ಜೊತೆಗೆ ಅದಕ್ಕೆ ಪೂರಕವಾದ ಚಾರ್ಟರ್‌ಗಳನ್ನು, ಅಂಕಿ ಅಂಶಗಳನ್ನು ಹಾಗೂ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರದ 15 ಶಾಲೆಗಳಿಂದ 30 ಮಕ್ಕಳು ಹಾಗೂ ಶಿಕ್ಷಕರು ಈ ಸಂಸತ್ತಿನಲ್ಲಿ ಭಾಗವಹಿಸಿ ತಮ್ಮ ವಿಚಾರ ಮಂಡಿಸಿದರು. ಮಕ್ಕಳ ಮೇಲಿನ ದೌರ್ಜನ್ಯಗಳನ್ನು ಕೊನೆಗಾಣಿಸುವ ಕುರಿತಾಗಿ ಹಾಗೂ ಸಾರ್ವತ್ರಿಕ ರೋಗ ನಿರೋಧಕಗಳು ಹಾಗೂ ಹದಿಹರೆಯದ ಮಕ್ಕಳ ಸಮಸ್ಯೆಗಳ ಕುರಿತು ಸುದೀರ್ಘವಾದ ಚರ್ಚೆ ನಡೆಸಿದ್ದಾರೆ.

ಅರ್ಥಪೂರ್ಣವಾಗಿ ವಾದ ಮಂಡಿಸಿದ ಬಿಎಲ್‌ಡಿಇ ಬಾಲಕಿಯರ ಪ್ರೌಢಶಾಲೆಯ ಲಕ್ಷ್ಮೀ ಐಹೊಳಿ ಹಾಗೂ ಎಸ್‌ಎಸ್ ಪ್ರೌಢಶಾಲೆಯ ವಿನಾಯಕ ಕಬಾಡೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯುವ ಮಕ್ಕಳ ಸಂಸತ್‌ಗೆ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಬೆಳಸಿಕೊಂಡು ಪೌಷ್ಠಿಕ ಆಹಾರವನ್ನು ಸೇವಿಸಿ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕು. ವ್ಯಾಯಾಮದಿಂದ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚಿಸಿಕೊಂಡರೆ, ಓದಿನ ಹಂಬಲ ಹೆಚ್ಚುತ್ತದೆ. ಮೊಬೈಲ್ ಬಳಕೆಯನ್ನು ಅವಶ್ಯಕತೆಗಿಂತ ಹೆಚ್ಚು ಬಳಸಬಾರದು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಮಾಜ ಸೇವಕ ವಾಸುದೇವ ತೋಳಬಂದಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ದಾನೇಶ ಅವಟಿ, ಉಜ್ವಲ ಸಂಸ್ಥೆಯ ಯೋಜನಾ ನಿರ್ದೇಶಕಿ ಸುನಂದಾ ತೋಳಬಂದಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...