ವಿಜಯಪುರ | 146 ಮಂದಿ ಸಂಸದರ ಅಮಾನತು; ಕಾಂಗ್ರೆಸ್ ಸಮಿತಿ ಖಂಡನೆ

Date:

ಲೋಕಸಭೆ ಹಾಗೂ ರಾಜ್ಯಸಭೆಯ ಉಭಯ ಸದನಗಳ 146 ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರ ನೇತೃತ್ವದಲ್ಲಿ ಪ್ರಜಾಪ್ರಭುತ್ವ ವಿರೋಧಿ, ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆಯನ್ನು ಬಲವಾಗಿ ಖಂಡಿಸಿದರು.

ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, “ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿದ್ದು, ಇವರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ ಹಾಗೂ ರಾ‌ಷ್ಟ್ರದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಮಾಡುತ್ತಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವುದನ್ನು ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಗದಾಪ್ರಹಾರ ಮಾಡುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭೆ ಹಾಗೂ ರಾಜ್ಯಸಭೆಯ ಸಭಾಪತಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ವಿರೋಧ ಪಕ್ಷಗಳನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಇವರ ಜನವಿರೋಧಿ ನೀತಿಗಳನ್ನು ಪ್ರಶ್ನೆ ಮಾಡಿದಾಗ ಹಿಂಬಾಗಿಲಿನಿಂದ ಕೇಂದ್ರದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ಉಭಯ ಸದನಗಳ ಸಂಸದರನ್ನು ಅಮಾನತುಗೊಳಿಸುವುದು ಯಾವುದೇ ಒಂದು ಸಣ್ಣ ವಿಷಯಕ್ಕೆ ಅನರ್ಹಗೊಳಿಸುವ ಕೃತ್ಯಗಳಿಗೆ ಕೈಹಾಕಿರುವುದು ಈ ದೇಶದ ದುರಂತಗಳಲ್ಲಿ ಒಂದು” ಎಂದರು.

“ಭಾರತ ರಾಷ್ಟ್ರ ಸ್ವತಂತ್ರಗೊಂಡ ನಂತರ ಇಷ್ಟೊಂದು ಸಂಖ್ಯೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ್ದು ಇದೇ ಮೊದಲ ಬಾರಿಯಾಗಿದೆ. ಈ ದೇಶದ ಜನ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರು ನೋಡುತ್ತಿಲ್ಲಾ ಅಂತಾ ಇವರು ಭಾವಿಸಿದಂತೆ ಕಾಣುತ್ತದೆ” ಎಂದರು.

“ವಿರೋಧ ಪಕ್ಷಗಳನ್ನು ಹೊರಗಿಟ್ಟು, ಜನವಿರೋಧಿ ಬಿಲ್‌ಗಳನ್ನು ಮಂಡಿಸಿ ಅವುಗಳನ್ನು ಪಾಸ್‌ ಮಾಡಿಕೊಳ್ಳುವ ಇವರ ಹುನ್ನಾರವನ್ನು ಇಡೀ ದೇಶ ಗಮನಿಸಿದೆ. ಇವರ ಹುಳುಕನ್ನು ಯಾವಾಗ ಯಾವಾಗ ವಿರೋಧ ಪಕ್ಷ ಪ್ರಶ್ನೆ ಮಾಡಿದೆಯೋ ಆಗ ಇವರು ಈ ತರಹದ ಕೆಲಸ ಮಾಡಿದ್ದಾರೆ. ಇವರು ಈ ದೇಶವನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ಜನವಿರೋಧಿ ನೀತಿಗಳ ಬಿಲ್‌ಗಳನ್ನು ಮಂಡಿಸಿ ಈ ದೇಶದ ಸಾಮರಸ್ಯಕ್ಕೆ ಧಕ್ಕೆ ತಂದೊಡ್ಡುವ ಪ್ರಯತ್ನ ಮಾಡುತ್ತಿದ್ದು, ಸರ್ವಾಧಿಕಾರಿ ರಾಜನಂತೆ ವರ್ತಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಇವರ ಈ ನೀತಿಯನ್ನು ಜನರ ಮುಂದೆ ಕೊಂಡೊಯ್ದು ಇವರಿಗೆ ತಕ್ಕಪಾಠ ಕಲಿಸುತ್ತದೆ. ಇವರ ಈ ಸರ್ವಾಧಿಕಾರಿ ಧೋರಣೆಯನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ: ಜಂಟಿ ಕೃಷಿ ನಿರ್ದೇಶಕ

ಈ ವೇಳೆ ಕೆ ಎಫ್ ಅಂಕಲಗಿ, ಆಜಾದ ಪಟೇಲ, ರಮೇಶ ಗುಬ್ಬೇವಾಡ, ಮಹ್ಮದರಫೀಕ ಟಪಾಲ, ಆರತಿ ಶಹಾಪೂರ, ಶಬ್ಬೀರ ಜಾಗೀರದಾರ, ಸಾಹೇಬಗೌಡ ಬಿರಾದಾರ ಮುಂತಾದವರು ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಚಂದ್ರಕಾಂತ ಶೆಟ್ಟಿ, ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ, ಜಮೀರ್ ಅಹ್ಮದ್ ಬಕ್ಷಿ, ಕಾಂಗ್ರೆಸ್ ಮುಖಂಡ ಡಿ ಎಲ್ ಚವ್ಹಾಣ, ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಅಮಿತ ಚವ್ಹಾಣ, ಮಹಾನಗರಪಾಲಿಕೆ ಸದಸ್ಯ ದಿನೇಶ ಹಳ್ಳಿ, ಅಂಗ ಘಟಕಗಳ ಅಧ್ಯಕ್ಷ ಕೃಷ್ಣಾ ಕಾಮಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನಮಲ್ಲ ಸಾರವಾಡ, ಚನಬಸಪ್ಪ ನಂದರಗಿ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...