ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

Date:

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಆದರ್ಶ ವಿದ್ಯಾಲಯ ಆಯೋಜಿಸಿದ್ದ ‘ಕನಾ೯ಟಕ ಸಂಭ್ರಮ 50’ ಹಾಗೂ ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಕವಿಗೋಷ್ಠಿಯನ್ನು ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, “ಕವನ ಸುಮ್ಮನೆ ಹುಟ್ಟುವುದಿಲ್ಲ. ಸಮಾಜದಲ್ಲಿ ಆಗಿಹೋದ ಘಟನೆಗಳ ಅನುಭವದ ಸಾರ ಕವನದಲ್ಲಿರುತ್ತದೆ. ಕಾವ್ಯ ರಚನೆಯಲ್ಲಿ ಕೇವಲ ಕಲ್ಪನೆಗಳಿದ್ದರೆ ಸಾಲದು, ಸಾಮಾಜಿಕ ಪ್ರಜ್ಞೆ, ವೈಜ್ಞಾನಿಕ ಮನೋಭಾವ ಇರಬೇಕು. ಜೊತೆಗೆ ಕವನ ಆಲಿಸಿದಾಗ ಮನಸ್ಸಿಗೆ ನೆಮ್ಮದಿ ಉಂಟುಮಾಡಲು ಆಧ್ಯಾತ್ಮಿಕ ಚಿಂತನೆಗಳು ಇರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಶೋಕ ತೆಲ್ಲೂರ ಮಾತನಾಡಿ, “ಸರ್ಕಾರಿ ನೌಕರರು ಕನ್ನಡ ಸಾರಸ್ವತ ಲೋಕಕ್ಕೆ ನೌಕರರ ಕೊಡುಗೆ ಅನನ್ಯವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳಿಗೆ ಸರಕಾರಿ ನೌಕರರ ಸಂಘದ ವತಿಯಿಂದ ಸಹಾಯ ಸಹಕಾರ ನೀಡಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಅಶೋಕ ಶುಲ್ಪಿ ಶಾಂತಪ್ಪ, ರಾಣಾಗೋಳ ಭೀಮಣ್ಣ ಹೇರೂರ, ರಾಮಪ್ಪ ಹಡಪದ, ರಮೇಶ ಪವಾರ, ರಮೇಶ ಚಟ್ಟರಕಿ, ಅಮರ ಗಾಯಕವಾಡ, ಮಲ್ಲು ಘತ್ತರಗಿ, ಅಂಬಿಕಾ ಪಾಟೀಲ, ಮಲ್ಲಮ್ಮ ಬಿರಾದಾರ, ನಟರಾಜ ಕುಂಬಾರ, ಸಿ ಎಮ್ ಪಾಟೀಲ, ಮಲ್ಲನಗೌಡ ಪಾಟೀಲ, ಗಾಯತ್ರಿ ಪಾಟೀಲ, ರಾಜಶೇಖರ ಕಂಬಾರ, ಶಾರದಾ ಮಂಗಳೂರಿನ ಮುಂತಾದವರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...