ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಂಗೆ ಮನವಿ

Date:

ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಮಗ್ರ ಇಂಡಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಕಾಮಗೊಂಡ ಮಾತನಾಡಿ, “ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಇಂಡಿ ತಾಲೂಕನ್ನು ಆರ್ಟಿಕಲ್ 371 (ಜೆ) ಅಡಿಯಲ್ಲಿ ಸೇರ್ಪಡೆ ಮಾಡಬೇಕು.‌ ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೇ ಚರ್ಚೆಯಾಗಬೇಕು” ಎಂದು ಒತ್ತಾಯಿಸಿದರು.

ರಾಜಕೀಯ ಮುಖಂಡ ಪಾಪು ಕಿತ್ತಳಿ ಮಾತನಾಡಿ, “ಸರ್ಕಾರ ನಮ್ಮ ಮನವಿ ಪರಿಗಣಿಸಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಇತರ ಹಂತದ ಹೋರಾಟಗಳನ್ನೂ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುರಸಭೆಯ ಸದಸ್ಯ ಸತೀಶ ಕುಂಬಾರ ಮಾತನಾಡಿ, “ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು, ಅಭಿವೃದ್ಧಿ ದೃಷ್ಟಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹುದಿನದ ಜಿಲ್ಲಾ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದರು.

ನಿವೃತ್ತ ಶಿಕ್ಷಕ ಜಿ ವಿ ಬಿರಾದಾರ ಮಾತನಾಡಿ, “ಶಾಸಕ ಯಶವಂತರಾಯ ಗೌಡರಿಗೆ ಬೆಳಗಾವಿ ಸದನದಲ್ಲಿ ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ. ಶಾಸಕರು ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಪ್ರತಿಭಟನೆಯಲ್ಲಿ ಡಾ. ರಮೇಶ ಪೂಜಾರಿ, ನಿವೃತ್ತ ಪ್ರಾಚಾರ್ಯ ಎ ಸಿ ಪಾಟೀಲ, ರಾಜಕೀಯ ಮುಖಂಡ ಜಗದೀಶ ಕ್ಷತ್ರಿ, ಕಿರಣಕುಮಾರ ಜೋಶಿ, ಪುರಸಭೆ ಸದಸ್ಯ ಅಯೂಬ ಬಾಗವಾನ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅವಿನಾಶ ಬಗಲಿ, ಚನ್ನು ದೇವರ, ಮಹೇಶ ಮೈದರಗಿ, ರುಕ್ಮುದ್ದೀನ ಪಟೇಲ, ಸಂತೋಷ ಪರೆಶೇನ್ನವರ, ಮೇಘು ರಾಠೋಡ, ಬಾಲಾಜಿ ರಜಪೂತ, ರಮೇಶ ಅಡಗಲ್ಲ, ಉದ್ದಿಮೆದಾರ ಅನಂತ ಜೈನ, ನಿವೃತ್ತ ಪ್ರಾಚಾರ್ಯ ಎ ಎಸ್ ಗಾಣಿಗೇರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...