ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆ ರಚನೆ ಮತ್ತು ಆರ್ಟಿಕಲ್ 371(ಜೆ) ಸೇರ್ಪಡೆಗೆ ಆಗ್ರಹ

Date:

ಇಂಡಿ ಪ್ರತ್ಯೇಕ ಜಿಲ್ಲಾ ರಚನೆ ಘೋಷಣೆ ಹಾಗೂ ಸಂವಿಧಾನ ವಿಧಿ 371(ಜೆ) ಸೇರ್ಪಡೆಗೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇಂಡಿ ಅಡತ(ಎಪಿಎಂಸಿ) ವ್ಯಾಪಾರಸ್ಥರು, ಎಪಿಜೆ ಅಬ್ದುಲ್ ಕಲಾಂ, ಡಿಎಸ್‌ಎಸ್‌ ಒಕ್ಕೂಟ, ಮಾಜಿ ಸೈನಿಕರ ಸಂಘ, ಅನುದಾನ ರಹಿತ-ಸಹಿತ ಶಾಲಾ ಕಾಲೇಜುಗಳು, ಸಮಸ್ತ ಕಿರಾಣಿ ವ್ಯಾಪಾರಸ್ಥರ ಸಹಯೋಗದಲ್ಲಿ ಪ್ರತಿಭಟನೆ ನಡೆಸಿದರು.

“ವಿಜಯಪುರ ಜಿಲ್ಲೆಯಲ್ಲಿನ ಸಮಗ್ರವಾದ ಇಂಡಿ ತಾಲೂಕು ತೀವ್ರ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಇನ್ನೂ ಪ್ರಗತಿ ಕಾಣಬೇಕಾಗಿದೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಜಿಲ್ಲೆಯಾಗಲು ಸಂಬಂಧಿಸಿದಂತೆ ಆ ಪರಿಸರದಲ್ಲಿ ಬೇಕಾಗಿರುವ ಪೂರಕ ಅಂಶಗಳು ಇಂಡಿಯಲ್ಲಿ ಸಾಕಷ್ಟು ಇವೆ. ಅದರಂತೆ ಪದವಿ ಕಾಲೇಜುಗಳು, ಎಂಜಿನಿಯರಿಂಗ್/ಡಿಪ್ಲೋಮಾ ಕಾಲೇಜುಗಳು, ಪ್ಯಾರಾ ಮೆಡಿಕಲ್/ನರ್ಸಿಂಗ್ ಕಾಲೇಜು ಹಾಗೂ ಸ್ನಾತಕೋತ್ತರ ಕಾಲೇಜುಗಳು‌ ಸೇರಿದಂತೆ ಹಲವಾರು ವೈವಿದ್ಯಮಯ ಸ್ವರೂಪದ ಕಾಲೇಜುಗಳ ಸ್ಥಾಪನೆಗೆ ಹಾಗೂ ಅವುಗಳ ಸಂಬಧಿತ ಗಡಿನಾಡು ಅಭಿವೃದ್ಧಿಗಾಗಿ ಸದರಿ ಇಂಡಿಯನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕು. ಹಾಗೆಯೇ ಇಂಡಿ ನಗರವನ್ನು ಸಂವಿಧಾನದ ವಿಧಿ 371(ಜೆ) ಅಡಿ ಸೇರ್ಪಡೆಗೆ ಶೀರ್ಘದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜ್ಯಾದ್ಯಂತ ಹೆಚ್ಚುವರಿ ಬಸ್‌ ಒದಗಿಸಲು ಆಗ್ರಹ

ಈ ವೇಳೆ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಜಟ್ಟಪ್ಪ ರವಳಿ, ಗೌರವಾಧ್ಯಕ್ಷ ಭೀಮಣ್ಣ ಕೌಲಗಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಾಳೆ, ಉಪಾಧ್ಯಕ್ಷ ಇಲಿಯಾಸ್ ಬೋರಾಮಣಿ, ಜಾವೀದ್ ಮೋಮಿನ, ಬಾಬುರಾವ ಗುಡಿಮಣಿ ಡಿಎಸ್‌ಎಸ್ ತಾಲೂಕು ಮುಖಂಡರುಗಳಾದ ಧರ್ಮರಾಜ ವಾಲಿಕಾರ, ಮೆಹಬೂಬ್ ಅರಬ್, ಸದಾಶಿವ ಪ್ಯಾಟಿ, ರಮೇಶ್ ಕಲ್ಯಾಣಿ, ಮಹೇಶ್ ಹೊನ್ನ ಬಿಂದ್ಗಿ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರುಗಳಾದ ರುಕುಮುದ್ದೀನ್ ತದ್ದೇವಾಡಿ, ಶೇಖರ್ ನಾಯಕ್, ಮಹಿಳಾ ಬ್ಲಾಕ್ ಅಧ್ಯಕ್ಷರುಗಳಾದ ನಿರ್ಮಲ ತಳಕೇರಿ, ಸುಗಂಧ ಬಿರಾದಾರ, ಸಂಜುದಾದ ರಾಥೋಡ್, ಮಲ್ಲನಗೌಡ ಪಾಟೀಲ್, ಜೀತಪ್ಪ ಕಲ್ಯಾಣಿ, ಶಿವಯೋಗಪ್ಪ ಚೆನ್ನಗೊಂಡ, ಹುಚ್ಚಪ್ಪ ತಳವಾರ, ಆಸಿಫ್ ಕಾರಬಾರಿ ಸೇರಿದಂತೆ ಹಲವು ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು, ಗಣ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...