2024ರ ಜನವರಿ 8ರಂದು ಐಬಿಎ ಮತ್ತು ಯುಎಫ್ಬಿಯು ನಡುವಿನ ಒಪ್ಪಂದದ ಪ್ರಕಾರ ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ಸೇವೆ ಜಾರಿಗೊಳಿಸಿ, ಎಲ್ಲ ಶನಿವಾರಗಳನ್ನು ರಜೆಯಾಗಿ ಘೋಷಿಸಬೇಕಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಕೇಂದ್ರ ಹಣಕಾಸು ಸಚಿವಾಲಯದಿಂದ ಈವರೆಗೂ ಯಾವುದೇ ಅನುಮೋದನೆ ದೊರೆತಿಲ್ಲ’ ಎಂದು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಜಿ ಗಾಂಧಿ ಹೇಳಿದರು.
ವಿಜಯಪುರ ನಗರದ ರಾಷ್ಟ್ರೀಕೃತ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಹಾಗೂ ಸಹಕಾರಿ ಬ್ಯಾಂಕುಗಳ ನೂರಾರು ನೌಕರರು ನಗರದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಎಸ್ ಐಆರ್ ಓಟಿನ ಹಕ್ಕು ಕಸಿಯುತ್ತಿದೆ : ಡಾ ಎಚ್ ವಿ ವಾಸು
ವಿಜಯಪುರ ಸಂಯುಕ್ತ ವೇದಿಕೆಯ ಸಂಚಾಲಕ ಅಶೋಕ್ ಕಟ್ಟಿಮನಿ, ಶ್ರೀಕಾಂತ್, ಸುಶೀಲ್ ಶಿಂಧೆ,
ರಾಹುಲ್ ಪೊಳ್ಳು, ಸುನಿಲ್ ನಾಯಕ್, ಸಾಗರ ಲೋಣಿ, ಚಂದ್ರಶೇಖರ ಗಂಟೆಪ್ಪಗೋಳ, ಅಜಯ ಚವ್ಹಾಣ, ಮಹಾಂತೇಶ ಭೂತನಾಳ, ಜಹೀರ್, ಫಾರೂಕ್ ನದಾಫ್, ಕವಿತಾ ಜಾಧವ್, ಸೌಮ್ಯಾ, ರೇಣುಕಾ, ರಶ್ಮಿ, ಐಶ್ವರ್ಯ ರವಿಶಂಕರ್, ಸವಿತಾ ಕೋರಿ, ಮಂಗಳ ಪಾಟೀಲ, ನಿವೇದಿತಾ ಇದ್ದರು.





