ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

Date:

ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ರೈತರ ಅಹವಾಲು ಆಲಿಸಿತು.

ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಅಕಾಲಿಕ ಮಳೆ ಹಾಗೂ ನದಿ ಪ್ರವಾಹದಿಂದ ದೊಡ್ಡ ಮಟ್ಟದ ನೀರು ಹೊಲಗಳಿಗೆ ನುಗ್ಗಿದ ಪರಿಣಾಮ ಬೆಳೆಗಳಿಗೆ ಆಗಿರುವುದನ್ನು ವೀಕ್ಷಿಸಿದರು. ಅಪಾರ ಪ್ರಮಾಣದ ತೊಗರಿ, ಸೂರ್ಯಪಾನ, ಕಬ್ಬು ನೀರಿನ ಪ್ರವಾಹಕ್ಕೆ ಸಿಲುಕಿದ್ದನ್ನು ಕಂಡು ಆತಂಕ ವ್ಯಕ್ತಪಡಿಸಿದರು.

“ಈ ಸರ್ಕಾರಕ್ಕೆ ಜವಾಬ್ದಾರಿಯೇ ಇಲ್ಲದಂತಾಗಿದೆ, ಇಷ್ಟೊಂದು ತೊಂದರೆ ಎದುರಿಸುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡುವ ಸೌಜನ್ಯವೂ ಅವರಿಗೆ ಇಲ್ಲ ಎಂಬುದು ಬೇಜವಾಬ್ದಾರಿ ಸಂಗತಿ, ಆದರೆ ಪ್ರತಿಪಕ್ಷವಾಗಿರುವ ನಾವು ನಿಮ್ಮ ಧ್ವನಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ” ಎಂದು ಆರ್‌ ಅಶೋಕ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...