ವಿಜಯಪುರ | ಬಿಎಲ್‌ಡಿಇ ಆಸ್ಪತ್ರೆ ಗ್ರಾಮೀಣ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ: ಶಿವಯೋಗೇಶ್ವರ ಮಹಾಸ್ವಾಮೀಜಿ

Date:

ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿಎಲ್‌ಡಿಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ಬಿಎಲ್‌ಡಿಇ ಆಸ್ಪತ್ರೆ ಮತ್ತು ಸರ್ವೋದಯ ಸಾಮಾಜಿಕ ಕ್ಷೇಮಾಭಿವೃದ್ಧಿ ಹಾಗೂ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

“ಉತ್ತಮ ಆರೋಗ್ಯ ಇಂದು ಮಹತ್ವದ್ದಾಗಿದೆ. ರಕ್ತದಾನ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಅಲ್ಲದೆ, ರಕ್ತದ ಅಗತ್ಯವಿರುವ ರೋಗಿಗಳಿಗೆ ವರದಾನವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

ಇದೇ ವೇಳೆ ರಕ್ತದಾನ ಮಾಡಿದ ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕುಮಾರ ಸಿ ದೇಸಾಯಿ ಮಾತನಾಡಿ, “ಬಿಎಲ್‌ಡಿಇ ಸಂಸ್ಥೆ ನಿರಂತರವಾಗಿ ಸಾಮಾಜಿಕ ಕಾಳಜಿಯೊಂದಿಗೆ ಎಷ್ಟೋ ಮಂದಿ ರೋಗಿಗಳ ಜೀವ ಉಳಿಸುವ ಕಾರ್ಯ ಮಾಡುತ್ತಿದೆ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಶಿಬಿರದಲ್ಲಿ 400ಕ್ಕಿಂತಲೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 20 ಯುವಕರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಪರಿಸರ ಚಿಂತಕ ಡಾ. ಎಂ ಆರ್ ದೇಸಾಯಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...