ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್ ನೇರ ಪ್ರಸಾರವನ್ನು ಎಲ್ಇಡಿ ಪರದೆ ಮೇಲೆ ವೀಕ್ಷಿಸುವ ಮೂಲಕ ಪ್ರಯಾಣಿಕರು ಖುಷಿಪಟ್ಟರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಂತೆಯೇ ರಾಜ್ಯದ ಬಹುತೇಕ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರಿಂದ ಬಸ್ ನಿಲ್ದಾಣಗಳಲ್ಲಿದ್ದ ಪ್ರಯಾಣಿಕರು ಬಜೆಟ್ ಮಂಡನೆಯನ್ನು ನೇರವಾಗಿ ಕಣ್ತುಂಬಿಕೊಳ್ಳುವ ಮೂಲಕ ಸಂತೋಷ ವ್ಯಕ್ತಪಡಿಸಿದರು.
ಸಾಮಾನ್ಯವಾಗಿ ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮಗಳನ್ನು ನೇರವಾಗಿ ವೀಕ್ಷಿಸಲು ಅವಕಾಶ ಸಿಗುವುದು ಕಡಿಮೆ. ಸಿಗುವ ಸಂದರ್ಭದಲ್ಲಿ, ಸರ್ಕಾರ ಕೈಗೊಂಡ ಈ ಹೊಸ ಪ್ರಯತ್ನಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಸ್ ನಿಲ್ದಾಣಗಳಲ್ಲಿ ಪ್ರಯಾಣಕ್ಕಾಗಿ ಕಾಯುತ್ತಿದ್ದ ಅನೇಕರು ಎಲ್ಇಡಿ ಪರದೆಗಳ ಮೂಲಕ ಬಜೆಟ್ ಮಂಡನೆಯನ್ನು ಏಕಾಗ್ರತೆಯಿಂದ ವೀಕ್ಷಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕ್ರಮಗಳ ಕುರಿತು ಮಾಹಿತಿ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.
ಸಾರ್ವಜನಿಕರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಕೈಗೊಂಡ ಈ ಕ್ರಮವನ್ನು ವಿಜಯಪುರದ ಜನತೆ ಸ್ವಾಗತಿಸಿದರು.
ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ
“ವಿಜಯಪುರ ನಗರದ ವೀರ ರಾಣಿ ಕಿತ್ತೂರು ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ ವಿಜಯಪುರ, ಇಂಡಿ, ಸಿಂದಗಿ, ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ಬಜೆಟ್ ಮಂಡನೆ ಎಲ್ಇಡಿ ಪರದೆಗಳಲ್ಲಿ ಪ್ರಯಾಣಿಕರು ಬಜೆಟ್ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು” ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.





