ವಿಜಯಪುರ | ಡಿವಿಪಿ ವತಿಯಿಂದ ‘ವಿದ್ಯಾರ್ಥಿ ದಿವಸ’ ಆಚರಣೆ

Date:

ಅಂಬೇಡ್ಕರ್ 1900 ನವೆಂಬರ್ 7ರಂದು ಶಾಲೆಗೆ ಸೇರಿದ್ದರು. ಅವರು ಶಾಲೆಗೆ ಸೇರಿದ ದಿನವನ್ನು ‘ವಿದ್ಯಾರ್ಥಿ ದಿನ’ವೆಂದು ಆಚರಿಸಲು ಮಹರಾಷ್ಟ್ರ ಸರ್ಕಾರ ಆದೇಶಿಸಿದೆ. ಅಂತೆಯೇ ನಾವೂ ಕೂಡ ‘ವಿದ್ಯಾರ್ಥಿ ದಿನ’ ಆಚರಿಸುತ್ತಿದ್ದೇವೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಮುಖಂಡ ವಿನೋದ ಕಾಳೆ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಡಿವಿಪಿ ಆಯೋಜಿಸಿದ್ದ ‘ವಿದ್ಯಾರ್ಥಿ ದಿವಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಅಂಬೇಡ್ಕರ್ ಶಾಲೆ ಸೇರಿ, ವಿದ್ಯೆಯಲ್ಲಿ ಮಹಾ ಸಾಧಕರಾಗಿ, ವಿಶ್ವ ಅರ್ಥಶಾಸ್ತ್ರಜ್ಞಾನರಾಗಿ, ಸಮಾಜ ವಿಜ್ಞಾನಿಯಾಗಿ, ಉತ್ತಮ ಇತಿಹಾಸತಜ್ಞರಾಗಿ, ಭಾರತ ಸಂವಿಧಾನ ಶಿಲ್ಪಿಯಾಗಿ ಭಾರತದ ಪ್ರಜಾಪ್ರಭುತ್ವ ಪಿತಾಮಹರಾಗಿ, ಸಾಮಾಜಿಕ ನ್ಯಾಯದ ಪ್ರತೀಕವಾಗಿ ಸಮಾನತೆಯ ಪ್ರಜಾತಂತ್ರ ವ್ಯವಸ್ಥೆಗೆ ಕಾರಣರಾಗಿದ್ದಾರೆ. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಕಲಿತು ಅವರಂತೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಂಡಿ ಪುರಸಭೆ ಮುಖ್ಯಧಿಕಾರಿಗಳು ಮಾಂತೇಶ ಹಂಗರಗಿ ಹಾಗೂ ಭೀಮಾಶಂಕರ ಮುರಮಾನ, ಭೀಮನಗೌಡ್ರು, ಕಲ್ಲಪ್ಪ ಅಂಜುಟಗಿ, ಮಿಲಿಂದ ಹೊಸಮನಿ, ವಿನೋದ ಕಾಳೆ, ರವಿಕುಮಾರ್ ಶಿಂಗೆ, ಆಕಾಶ ಹಾದಿಮನಿ, ಗಂಗಾಧರ್ ಕಾಳೆ, ಆಕಾಶ ಹೊಸಮನಿ, ಸುನಿಲ ಕಾಲೇಬಾಗ, ರಾಹುಲ ಮನಗೂಳಿ, ರಾಮ ಪೋತೆ, ರಾಹುಲ ಮಡ್ಡಿಮನಿ, ವಿಕಾಸ, ಶ್ರವಣ್, ಸೋನು, ರಾಜು ಹಾಗೂ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...