ವಿಜಯಪುರ | ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ

Date:

ಮಕ್ಕಳಿಗೆ ಶಿಕ್ಷಣದ ಮಹತ್ವದ ಜೊತೆಗೆ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಜವಾಬ್ದಾರಿ ಮತ್ತು ಕಲಿಕಾ ಕೇಂದ್ರಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವುದರ ಮೂಲಕ ಮಕ್ಕಳ ಪ್ರತಿಭೆಯನ್ನು ಹೊರತರಬೇಕು ಎಂದು ಶಿಕ್ಷಕರಿಗೆ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ನ್ಯಾಯವಾದಿ ದಾನೇಶ್ ಅವಟಿ ತಿಳಿಸಿದರು.

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ, ಚಿಗುರು ಕಲಿಕಾ ಕೇಂದ್ರಗಳ ಸಹಯೋಗದಲ್ಲಿ ಆಯೋಜಿಸಿದ್ದ ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅತಿಥಿಯಾಗಿ ಆಗಮಿಸಿದ್ದ ಫಾದರ್ ರೋನಿ‌ ಮಾತನಾಡಿ, “ಕ್ರಿಸ್‌ಮಸ್ ಪ್ರೀತಿ, ಕರುಣೆ, ಪರಸ್ಪರ ಗೌರವ ಮತ್ತು ಸಹಾಯ ನೀಡುವುದಾಗಿದೆ. ನಾವೆಲ್ಲರೂ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಹೆಸರನ್ನು ಸಂಪಾದಿಸಬೇಕಾಗಿದೆ. ಈ ಮೂಲಕ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಗುರು ಕಲಿಕಾ ಕೇಂದ್ರ

ಫಾದರ್‌ ಟಿಯೋಲ ಮಚಾದೊ ಮಾತನಾಡಿ, “ಕಲಿಕಾ ಕೇಂದ್ರಗಳು ಪ್ರಸ್ತುತದಲ್ಲಿ ಸ್ಲಂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿವೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಲಿಕಾ ಕೇಂದ್ರಗಳು ಪ್ರಾರಂಭವಾಗಬೇಕಿದೆ. ಈ ಮೂಲಕ ಪ್ರತಿ ಮಗುವಿಗೂ ಶಿಕ್ಷಣ ದೊರೆದಂತಾಗಬೇಕು. ಕಲಿಕಾ ಕೇಂದ್ರಗಳು ಕೇವಲ ಪಠ್ಯಕ್ಕೆ ಮಾತ್ರ ಒತ್ತು ಕೊಡದೆ ಮಕ್ಕಳ ನೈಜ ಪ್ರತಿಭೆಗಳನ್ನು ಹೊರತರುವ ಕೇಂದ್ರಗಳಾಗಿವೆ. ಬರುವ ವರ್ಷದಲ್ಲಿ ಮಕ್ಕಳ ಸಂಖ್ಯೆ ಇನ್ನೂ ಹೆಚ್ಚಲಿ” ಎಂದು ಕ್ರಿಸ್‌ಮಸ್ ಹಬ್ಬದ ಶುಭಾಷಯ ಕೋರಿ ಆಶಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಇದೇ ವೇಳೆ ಮಕ್ಕಳಿಗೆ ವಿವಿಧ ಆಟೋಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಟಿಯೋಲ ಮಚಾದೊ, ಫಾದರ್ ರೋನಿ ಹಾಗೂ ಬ್ರದರ್ ಚೇತನ್ ಹಾಗೂ ಚಿಗುರು ಕಲಿಕಾ ಕೇಂದ್ರದ ಶಿಕ್ಷಕಿಯರು ಮತ್ತು ಅನೌಪಚಾರಿಕ ಶಿಕ್ಷಣ ಸಂಸ್ಥೆ ಸಿಬ್ಬಂದಿ ವರ್ಗದವರು ಮತ್ತು 8 ಕಲಿಕಾ ಕೇಂದ್ರದಿಂದ 200 ಮಂದಿ ಮಕ್ಕಳು ಕಾರ್ಯಕ್ರಮದಲ್ಲಿ ಇದ್ದರು.‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...