ವಿಜಯಪುರ | ತಮ್ಮ ಕ್ಷೇತ್ರಕ್ಕೆ ನೀರು ಬರದಿದ್ದರೆ ರಾಜೀನಾಮೆ ನೀಡುತ್ತೇನೆ: ಕಾಂಗ್ರೆಸ್ ಶಾಸಕ

Date:

ತಮ್ಮ ಕ್ಷೇತ್ರದ ಗ್ರಾಮಗಳಿಗೆ ಕಾಲುವೆಗಳ ಮೂಲಕ ಕೃಷಿಗೆ ನೀರು ಪೂರೈಕೆ ಮಾಡದಿದ್ದಾರೆ ರಾಜೀನಾಮೆ ನೀಡುವುದಾಗಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂಡಿ ತಾಲೂಕಿನ ಕೊನೆಯ ಭಾಗದ ಹಳ್ಳಿಗಳಿಗೆ ಕಾಲುವೆ ನೀರು ಬಂದಿಲ್ಲ. ಈ ಹಳ್ಳಿಗಳಿಗೆ ನೀರು ಹರಿಸುವುದಕ್ಕಾಗಿಯೇ ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಗಳಿವೆ. ಅವುಗಳ ಮೂಲಕ ನೀರು ಹರಿಸದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

“ಇಂಡಿ ತಾಲೂಕು ಬರಪೀಡಿತವಾಗಿದೆ. ಹೀಗಿದ್ದರೂ, ತಾಲೂಕಿನ ಹಳ್ಳಿಗಳಿಗೆ ನೀರು ಪೂರೈಕೆಯಾಗಿಲ್ಲ. ನೀರು ಬರದೆ ಹೋದರೆ ನಾನು ಯಾರಿಗೂ ‘ಕೇರ್’ ಮಾಡುವುದಿಲ್ಲ. ಜನರಿಗೆ ಅನುಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುತ್ತೇನೆ. ಜನರ ಸಮಸ್ಯೆಗೆ ಸ್ಪಂದಿಸಲು ಆಗಿದಿದ್ದ ಮೇಲೆ ಯಾಕಾಗಿ ರಾಜಕೀಐ ಮಾಡಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...