ವಿಜಯಪುರ | ದೇವದಾಸಿ ತಾಯಂದಿರು ಸಾಮಾಜಿಕ ನ್ಯಾಯ ಪಡೆಯಲು ಮುಂದಾಗಬೇಕು: ಫಾ. ತಿಯೋಳ ಮಾಚ್ಯಾದ

Date:

ಶತಮಾನಗಳಿಂದ ಹಲವಾರು ರೀತಿಯ ಶೋಷಣೆ ದೌರ್ಜನ್ಯ ಅಸಮಾನತೆಗಳಿಂದ ದೇವದಾಸಿ ಸಮುದಾಯ ಸಮಾಜದಲ್ಲಿ ಕಟ್ಟ ಕಡೆಯ ಹಿಂದುಳಿದ ಸಮುದಾಯವಾಗಿ ಉಳಿದಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಗೌರವ ಘನತೆಯಿಂದ ಬದುಕುವುದು ಮೂಲಭೂತ ಹಕ್ಕು ಎಂದು ಫಾದರ್‌ ತಿಯೋಳ ಮಾಚ್ಯಾದ ಹೇಳಿದರು.

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜೀವನ ಜ್ಯೋತಿ ಮಾಜಿ ದೇವದಾಸಿ ಮಹಿಳೆಯರ ಜಿಲ್ಲಾ ಒಕ್ಕೂಟ ಇವರ ಸಹಯೋಗದಲ್ಲಿ ಮಾಜಿ ದೇವದಾಸಿ ಮಹಿಳೆಯರ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳಿಗೆ ಸಂಘಟನೆ ಮತ್ತು ನಾಯಕತ್ವ ಕುರಿತು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾಮಾಜಿಕ ನ್ಯಾಯ ಪಡೆಯಲು ಮಾಜಿ ದೇವದಾಸಿ ತಾಯಂದಿರು ಮುಂದಾಗಬೇಕು, ಸಂಘಟಿತರಾಗಬೇಕು. ಜೊತೆಗೆ ಸಾಮೂಹಿಕ ನಾಯಕತ್ವದೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನಮ್ಮ ಉದ್ದಾರ ನಮ್ಮಿಂದಲೇ ಆಗಬೇಕಾದರೆ ಎಲ್ಲ ದೇವದಾಸಿ ತಾಯಂದಿರು ಸಾಮೂಹಿಕ ನಾಯಕತ್ವಕ ವಹಿಸಬೇಕು. ಸಂಘಟಿತರಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಗತಿ ಹೊಂದಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅಂತೋನಿ ಸಿ ಮಾತನಾಡಿ, “ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮುಖ್ಯವಾದ ಮೂರು ಸೂತ್ರಗಳಾದ ಶಿಕ್ಷಣ, ಸಂಘಟನೆ ಹಾಗೂ ಪರಿವರ್ತನೆಯ ನಮ್ಮ ಮೂಲ ಮಂತ್ರವಾಗಬೇಕು. ಆ ನಿಟ್ಟಿನಲ್ಲಿ ಪ್ರತಿ ಮಾಜಿ ದೇವದಾಸಿ ತಾಯಂದಿರು ತಮಗಾದ ಅನ್ಯಾಯವನ್ನು ಎದುರಿಸಲು ನಾಯಕಿಯರಾಗಿ ಬೆಳೆಯಬೇಕು. ಆ ಮೂಲಕ ಸಾಮಾಜಿಕ ಸಮಾನತೆ ಕಂಡುಕೊಳ್ಳಬೇಕು” ಎಂದು ಹೇಳಿದರು.

ಹಲವು ಚಟುವಟಿಕೆ ಮುಖಾಂತರ ತರಬೇತಿ ನಡೆಸಿದರು. ನಂತರ ಜೀವನ ಜ್ಯೋತಿ ಮಾಜಿ ದೇವದಾಸಿ ಮಹಿಳೆಯರ ಎಲ್ಲ ಒಕ್ಕೂಟದ ಆಯ್ಕೆಯ ಪ್ರಜಾಪ್ರಭುತ್ವದ ನಿಟ್ಟಿನಲ್ಲಿ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ನೂತನ ಸಮಿತಿ ಆಯ್ಕೆ ಮಾಡಿದರು. ಅಧ್ಯಕ್ಷರಾಗಿ ರೇಣುಕಾ ಎಂಟಮಾನ, ಉಪಾಧ್ಯಕ್ಷರಾಗಿ ಮಲ್ಲಮ್ಮ ಕಟ್ಟಿಮನಿ, ಕಾರ್ಯದರ್ಶಿಯಾಗಿ ರೇಣುಕಾ ಕಾಂಬಳೆ ಹಾಗೂ ಖಜಂಚಿಯಾಗಿ ಚಂದಾಬಾಯಿ ಮಾದರ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ |‌ ಸಾಮಾಜಿಕ ಅಸಮಾನತೆ ನಿವಾರಣೆಗೆ ಅಂಬೇಡ್ಕರ್‌ ಕೊಡುಗೆ ಅಪಾರ : ಪ್ರೇಮಸಾಗರ ದಾಂಡೇಕರ್

ಕಾರ್ಯಕ್ರಮದಲ್ಲಿ ಎಲ್ಲ ತಾಲೂಕುಗಳಿಂದ ಸುಮಾರು 65 ಮಾಜಿ ದೇವದಾಸಿ ಮುಖಂಡರು ಭಾಗವಹಿಸಿದ್ದರು. ಸಿಸ್ಟರ್ ಜಯ, ಅನುಸೂಯ ಮಾಶಾಳ, ಭಾರತಿ ಹಾಗೂ ಮಂಜುಳಾ, ಸುನಿತಾ ಮೋರೆ, ದೇವಕಿ, ಮೀನಾಕ್ಷಿ ಸಿಂದೇ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...