ವಿಜಯಪುರ | ಇನ್ನೊಂದು ವಾರ ಶುಷ್ಕ ವಾತಾವರಣ ಮುಂದುವರೆದರೆ ಬರ ಘೋಷಣೆ: ಎಂಬಿ ಪಾಟೀಲ್

Date:

ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಎರಡು ವಾರಗಳ ಕಾಲ ನಿರಂತರ ಶುಷ್ಕ ವಾತಾವರಣವಿದೆ. ಇನ್ನೊಂದು ವಾರ ಇದೇ ಪರಿಸ್ಥಿತಿ ಮುಂದುವರೆದರೆ ತಿಕೋಟಾ ತಾಲೂಕು ಸಹ ಬರಪೀಡಿತ ತಾಲೂಕು ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. “ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಗಳಲ್ಲಿಯೂ ಕೆಲವು ಬದಲಾವಣೆ ಮಾಡುವಂತೆ ಈಗಾಗಲೇ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಪತ್ರ ವ್ಯವಹಾರ ನಡೆಸಿದೆ” ಎಂದರು.

“ಬರ ಪೀಡಿತ ತಾಲೂಕು ಘೋಷಣೆಯಾಗಲು ಶೇ.60ರಷ್ಟು ಮಳೆ ಕೊರತೆ ಇರಬೇಕು ಅಥವಾ ಸತತ ಮೂರು ವಾರ ಶುಷ್ಕ ವಾತಾವರಣ ಇರಬೇಕು. ತಿಕೋಟಾದಲ್ಲಿ ಜುಲೈ ತಿಂಗಳಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಜೂನ್, ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತಾದರೂ, ಸೆಪ್ಟೆಂಬರ್ ತಿಂಗಳಲ್ಲಿ ಶೇ.5ರಷ್ಟು ಮಳೆ ಹೆಚ್ಚಾಗಿದೆ. ಹೀಗಾಗಿ ಬರಪೀಡಿತ ತಾಲೂಕು ಘೋಷಣೆಗೆ ತೊಡಕಾಗಿದೆ. ಹೀಗಾಗಿ, ಮೂರು ವಾರಗಳ ಕಾಲ ಶುಷ್ಕ ವಾತಾವರಣವಿದ್ದರೆ ಮಾತ್ರ ಬರ ಘೋಷಣೆ ಮಾಡಲು ಸಾಧ್ಯ. ಸದ್ಯ ಎರಡು ವಾರ ಶುಷ್ಕ ವಾತಾವರಣ ಮುಂದುವರೆದಿದೆ. ಇನ್ನೊಂದು ವಾರ ಇದೇ ವಾತಾವರಣ ಮುಂದುವರೆದರೆ ತಿಕೋಟಾ ಸಹ ಬರಪೀಡಿತ ತಾಲೂಕು ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು. ಕುಡಿಯುವ ನೀರಿನ ಸಮಸ್ಯೆ, ಟ್ಯಾಂಕರ್ ಲಭ್ಯತೆ, ಬೆಳೆ ಪರಿಹಾರ ಮೊದಲಾದ ವಿಷಯಗಳ ಬಗ್ಗೆ ಪಿಡಿಓ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂಧ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಅಧಿಕಾರಿಗಳು ಒತ್ತಡದಲ್ಲಿದ್ದರೂ ಸಹ ಸಾರ್ವಜನಿಕರ ಕರೆ ಸ್ವೀಕರಿಸಬೇಕು. ಕೇವಲ ಕಚೇರಿಯಲ್ಲಿ ಕುಳಿತುಕೊಂಡರೆ ಸಲ್ಲದು. ಫೀಲ್ಡ್ ವಿಸಿಟ್ ಮಾಡಿ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಬೇಕು. ಫೀಲ್ಡ್ ವಿಸಿಟ್ ಹೆಸರಿನಲ್ಲಿ ಹೊರಗಡೆ ಅಡ್ಡಾಡಿದರೆ ಸರ್ಕಾರ ಸಹಿಸಲ್ಲ. ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸದೇ ಹೋದರೆ ಅಧಿಕಾರಿಗಳನ್ನೇ ಹೊಣೆಗಾರಿಕೆಯನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಆಲಮಟ್ಟಿ ಜಲಾಶಯದಲ್ಲಿ 96 ಟಿಎಂಸಿ ಲೈವ್ ಸ್ಟೋರೆಜ್ ನೀರಿನ ಲಭ್ಯತೆ ಇದೆ. ನಾರಾಯಣಪೂರ ಜಲಾಶಯದಲ್ಲಿ 11.83 ಟಿಎಂಸಿ ನೀರಿನ ಲಭ್ಯತೆ ಇದೆ. ಆದರೆ, ಒಳ ಹರಿವು ಸಂಪೂರ್ಣ ಶೂನ್ಯವಾಗಿದೆ. ಒಟ್ಟಾರೆಯಾಗಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ 12 ಟಿಎಂಸಿಯಷ್ಟು ನೀರಿನ ಲಭ್ಯತೆ ಪ್ರಮಾಣ ಕಡಿಮೆಯಾಗಿದೆ” ಎಂದರು.

ಸಭೆಯಲ್ಲಿ ಶಾಸಕ ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ ಕುದರಿಸಾಲೋಡಗಿ, ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರೋಷನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ ಭಗವಾನ ಸೋನಾವನೆ ಮೊದಲಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...