ವಿಜಯಪುರ | ರಾಜ್ಯದಲ್ಲಿ ಬರ, ಕೇಂದ್ರದ ಅಸಹಕಾರ; ಸಚಿವ ಎಂ.ಬಿ ಪಾಟೀಲ್‌ ಆರೋಪ

Date:

ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್‌ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅಧ್ಯಯನ ಮಾಡಿದ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬರದ ವಿಷಯವಾಗಿ ಯಾವ ಜವಾಬ್ದಾರಿ ನಿಭಾಯಿಸಿಲ್ಲ. ಇದು ರೈತ ವಿರೋಧಿ ನೀತಿಯಾಗಿದೆ. ಆದರೆ, ಕೇಂದ್ರದಲ್ಲಿ 27ಸಂಸದರಿದ್ದರೂ ಈ ಪೈಕಿ ಯಾರೂ ಕೂಡಾ ಬರದ ಬಗ್ಗೆ ಮಾತನಾಡುತ್ತಿಲ್ಲ.

ರಾಜ್ಯದ ಸಂಸದರು, ಕೇಂದ್ರ ಸರ್ಕಾರ, ಪ್ರಧಾನಿ ಹಾಗೂ ಸಚಿವರನ್ನು ಭೇಟಿ ಮಾಡುತ್ತಿಲ್ಲ. ಅವರು ಇವರಿಗೆ ಸಮಯವನ್ನೇ ಕೊಡುತ್ತಿಲ್ಲ. ಹೀಗಾಗಿ, ಇಲ್ಲಿಯವರೆಗೆ ಕೇಂದ್ರದಿಂದ ಒಂದು ಬಿಡಿಗಾಸು ಪರಿಹಾರ ಬಂದಿಲ್ಲ, ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿದರು. ಆದರೆ, ವರದಿ ಕೊಟ್ಟಿದ್ದಾರೋ ಇಲ್ಲವೋ ಅದು ಗೊತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರ ನಿರ್ವಹಣೆ ಪ್ರತಿಯೊಬ್ಬರ ಜವಾಬ್ದಾರಿ. ಅಧಿಕಾರದಲ್ಲಿ ಯಾರೇ ಇದ್ದರೂ, ತಕ್ಷಣ ರೈತರ ನೆರವಿಗೆ ಬರಬೇಕು. ಈ ವಿಷಯದಲ್ಲಿ ರಾಜ್ಯಕ್ಕಿಂತ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚು ಎಂಬುದನ್ನು ಮರೆಯಬಾರದು.

ಜಿಲ್ಲೆಯಲ್ಲಿರುವ 10ಸಾವಿರ ಹೆಕ್ಟೇರ್ ಲಿಂಬೆ ಬೆಳೆಯುವ ಪ್ರದೇಶದ ಪೈಕಿ ಅಂದಾಜು 7.5ಕೋಟಿ ಹೆಕ್ಟೇರ್ ಲಿಂಬೆ ಹಾನಿಯಾಗಿದೆ. ಈಗಾಗಲೇ ಜಿಲ್ಲಾಡಳಿತ ವರದಿ ಕೂಡ ಒಪ್ಪಿಸಿದೆ. ಆ ಪ್ರಕಾರ ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ ಕೂಡ ಬದಲಾಗುವ ಅವಶ್ಯಕತೆ ಇದೆ ಎಂದರು.

ರೈತರು ಸೂರ್ಯಪಾನಕ್ಕೆ ಪ್ರತಿ ಎಕರೆಗೆ ಹತ್ತು ಸಾವಿರ ಖರ್ಚು ಮಾಡಿದ್ದಾರೆ. ಆದರೆ, ಪರಿಹಾರ ಮೂರೂವರೆ ಸಾವಿರ ಪರಿಹಾರ ಸಿಗಲಿದೆ. ಲಿಂಬೆ ಬೆಳೆಗಾರರ ಸ್ಥಿತಿ ಕೂಡ ಭಿನ್ನವಾಗಿಲ್ಲ. ಮೂರು ಲಕ್ಷ ಎಕರೆ ತೊಗರಿ ನಾಶವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತಿದೆ. ಸರಕಾರ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಮಾಡಿದ್ದು, ಉದ್ಯೋಗ ಖಾತ್ರಿ ಮಾನವ ದಿನಗಳ ಸೃಜನತೆಗೆ ಲಿಮಿಟ್ ನೀಡಿಲ್ಲ. ಎಷ್ಟು ಜನ ಬಂದರೂ ಕೆಲಸ ನೀಡಬೇಕೆಂದು ತಿಳಿಸಲಾಗಿದೆ ಎಂದರು.

ಇಡೀ ರಾಜ್ಯ ತೀವ್ರ ಬರದಿಂದ ತತ್ತರಿಸಿದ್ದರಿಂದ ಈಗಾಗಲೇ ರಾಜ್ಯ ಸರಕಾರ ರಾಜ್ಯದ ಬಹುತೇಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಹೀಗಾಗಿ ಸರ್ಕಾರ ಕುಡಿಯುವ ನೀರು ಸೇರಿದಂತೆ ಪ್ರತಿಯೊಂದಕ್ಕೂ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಹಣ ಠೇವಣಿ ಮಾಡಲಾಗಿದೆ ಎಂದು ವಿವರಿಸಿದರು.

ಇನ್ನೂ ಅಗತ್ಯ ಬಿದ್ದರೆ, ನೂರು ಕೋಟಿಯವರೆಗೆ ಹಣ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸರ್ಕಾರದ ಸ್ಪಷ್ಟ ಸೂಚನೆಯಿರುವುದರಿಂದ ಬಹುತೇಕ ಇಲಾಖೆಗಳು ಬರದ ಮಾಹಿತಿ ನೀಡಿವೆ ಎಂದು ಮಾಹಿತಿ ಹಂಚಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...