ವಿಜಯಪುರ | ಮೂಲಸೌಕರ್ಯ ಕಲ್ಪಿಸುವಂತೆ ರೈತ ಸಂಘ ಆಗ್ರಹ

Date:

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಸ್ವಚ್ಛತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಿಡಗುಂದಿ ಪಟ್ಟಣ ಪಂಚಾಯತ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.

“ಪಟ್ಟಣದ ನ್ಯೂ ಇಂಗ್ಲಿಷ್ ಶಾಲೆಯ ಬಳಿ ಇರುವ ಗಟಾರಿನಲ್ಲಿ ನೀರು ನಿಂತು ಗಬ್ಬು ವಾಸನೆ ಬರುತ್ತಿದ್ದು, ಶೀಘ್ರದಲ್ಲಿ ಸ್ವಚ್ಛಗೊಳಿಸಿ ಶಾಲಾ ಮಕ್ಕಳು ಓಡಾಡುವ ಪ್ರದೇಶವನ್ನು ಶುದ್ಧವಾಗಿಡುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ನಿಡುಗುಂದಿ ಪೊಲೀಸ್ ಠಾಣೆ ಕತ್ತಲಾದರೆ ಯಾರಿಗೂ ಕಾಣುತ್ತಿಲ್ಲ. ಒಂದನೇ ವಾರ್ಡಿನ ವಿನಾಯಕ ನಗರದ ಕೊನೆಯ ಭಾಗದಲ್ಲಿ ದೊಡ್ಡ ಕಾಲುವೆ ಇರುವುದರಿಂದ ಇಲ್ಲಿ ವಿಷ ಜಂತುಗಳು ಹರಿದಾಡುವ ಸಂಭವಗಳು ಹೆಚ್ಚಾಗಿವೆ. ಹಾಗಾಗಿ ಈ ಎರಡೂ ಸ್ಥಳಗಳಲ್ಲಿ ಎತ್ತರ ಹಾಗೂ ದೊಡ್ಡ ಗಾತ್ರದ ಹೈ ಮಾಸ್ಟ್ ದೀಪಗಳನ್ನು ಕೂಡಲೇ ಅಳವಡಿಸಬೇಕು. ಪಟ್ಟಣದಲ್ಲಿ ಕಳ್ಳತನ ಹೆಚ್ಚಾಗುತ್ತಿರುವುದರಿಂದ ಸಿಸಿಟಿವಿ ವ್ಯವಸ್ಥೆಯನ್ನು ಕಲ್ಪಿಸಬೇಕು” ಎಂದು ರೈತ ಸಂಘದ ಸದಸ್ಯರು ಪಟ್ಟಣ ಪಂಚಾಯತ್ ಕಚೇರಿ ಅಧಿಕಾರಿಗಳಿಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಸಂಘದ ತಾಲೂಕು ಅಧ್ಯಕ್ಷ ಡಾ. ಕೆ ಎಂ ಬಿರಾದಾರ (ಗುಡ್ನಾಳ) ಮಾತನಾಡಿ ಮನವಿಯ ವಿವರ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಯಶ್‌ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಪಾಟೀಲ್‌

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಡಾ. ಕೆ ಎಂ ಬಿರಾದಾರ, ರೈತ ಮುಖಂಡ ತಿರುಪತಿ ಬಂಡಿ ವಡ್ಡರ್ ಬಳಬಟ್ಟಿ, ಗ್ರಾಮ ಘಟಕದ ಪ್ರಧಾನ ಕಾರ್ಯದರ್ಶಿ ಎಂ ಆರ್ ಕಂದಗಲ್, ತಾಲೂಕು ಗೌರವಾಧ್ಯಕ್ಷ ಐ ಆರ್ ಪಾಟೀಲ್, ರೈತ ಮುಖಂಡರುಗಳಾದ ನಾಗಪ್ಪ ವಾಲೀಕಾರ್, ಭೀಮಪ್ಪ ಬಿರಾದಾರ್, ಮುದ್ದಾಪೂರ ಗ್ರಾಮ ಘಟಕದ ಅಧ್ಯಕ್ಷ ಆರ್ ಎಸ್ ಉಕ್ಕಲಿ, ಮೋತಿಲಾಲ್ ಉಣ್ಣಿಬಾವಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಸುಭಾನ್ ಮುಲ್ಲಾ, ಸಲ್ಲಿಮಾ ಚಪ್ಪರಬಂದ, ಚಾಂದಬಿ ನದಾಫ್, ನೀಲಮ್ಮ ಗೂಡಿನಮನಿ, ಶಾಂತಾ ಪರಪ್ಪಗೋಳ, ಮಸೂತಿಯ ಚಾಂದಸಾಬ ನದಾಫ್, ಬೊಮ್ಮಣ್ಣ ಕೋಲಕಾರ್, ನರ್ಹಿನ್ ದಳವಾಯಿ, ನಾಜಮೀನ್ ಹಣಗಿ ಮಂಜುಳಾ ಗೂಡಿನಮನಿ, ಕರಿಯಪ್ಪ ಆಲೂರ್, ನಗರ ಘಟಕದ ಅಧ್ಯಕ್ಷ ರಾಜು ನದಾಫ್, ರೆಹಮಾನ್ ಮಾಕಂದಾರ್ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...