ವಿಜಯಪುರ | ಅತಿಥಿ ಉಪನ್ಯಾಸಕರ ಅರೆಬೆತ್ತಲೆ ಪ್ರತಿಭಟನೆ

Date:

ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗುರುವಾರ(ಡಿ.14) ವಿಜಯಪುರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರು, ನಗರದಲ್ಲಿ ಜಾಥಾ ಮಾಡಿದ್ದಲ್ಲದೇ, ಸರ್ಕಾರದದ ಮೇಲೆ ಒತ್ತಡ ಹೇರಲು ಅರೆ ಬೆತ್ತಲೆ ಪ್ರತಿಭಟನೆ ಕೈಗೊಂಡರು.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕಳೆದ 20ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೇ ಅತ್ಯಂತ ಕಡಿಮೆ ಸಂಬಳಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದರೂ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಿಂದಾಗಿ ನಿತ್ಯದ ಜೀವನ ನಿರ್ವಹಣೆಗೆ ಪರದಾಡುವ ದುಸ್ಥಿತಿಯಲ್ಲಿದ್ದೇವೆ. ಇಷ್ಟಾದರೂ ಸರ್ಕಾರ ಮಾನವೀಯ ನೆಲೆಯಲ್ಲಿ ನಮ್ಮ ಸಮಸ್ಯೆಗಳನ್ನು ಆಲಿಸುವ ಹಾಗೂ ಪರಿಹರಿಸುವಲ್ಲಿ ಆಸಕ್ತಿ ತೋರಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇವೆ ಖಾಯಂ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೂರು ವಾರಗಳಿಂದ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ. ಆದರೂ ಸರ್ಕಾರ ತಮ್ಮ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ಮುಷ್ಕರದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಡಬ್ಬಿ, ಕಾರ್ಯದರ್ಶಿ ಆರ್.ಎಲ್.ಕಡೆಮನಿ, ಡಾ.ಆನಂದ ಕುಲಕರ್ಣಿ, ಡಾ.ರಾಜು ಚವ್ಹಾಣ, ಡಾ.ಎಸ್.ಐ.ಎಂಬತ್ತನಾಳ, ಡಾ. ರಮೇಶ ತೇಲಿ, ಡಾ.ಆರ್.ಸಿ.ದಾಯಗೊಂಡ, ಡಾ.ರೇಣುಕಾ ಹೆಬ್ಬಾಳ, ಡಾ.ಅಶೋಕ ಬಿರಾದಾರ, ಡಾ.ಡಿ.ಬಿ.ಕುಲಕಣಿ, ಡಾ.ಎಸ್.ಎ.ಪಾಟೀಲ, ಡಾ.ಎಸ್.ಡಿ.ಬಿರಾದಾರ, ಡಾ.ಎಸ್.ಬಿ. ಗಂಗಮಾಲಿ, ಡಾ. ಎಸ್.ಎಸ್. ಗಡಿಗೆಪ್ಪಗೌಡರ, ಡಾ.ಎಸ್.ಪಿ.ತಳವಾರ, ಡಾ.ಆರ್.ಬಿ. ನಾಗರಡ್ಡಿ, ಡಾ.ಎಂ.ಎಸ್. ಶಿವಶರಣ, ಡಾ.ರಾಜೇಶ್ವರಿ ಅವಟಿ, ಡಾ.ರೇಣುಕಾ ಹೆಬ್ಬಾಳ, ಡಾ.ಎಚ್.ಕುಮಾರಸ್ವಾಮಿ, ಶಿವಾನಂದ ಸಿಂಹಾಸನಮಠ, ಗಜ್ಜು ರಾಠೋಡ, ಗೀತಾ ರಜಪೂತ, ಡಾ.ವಿಜಯಲಕ್ಷ್ಮೀ ಪಾಟೀಲ, ಡಾ.ವಿಕ್ರಮ ಬಿರಾದಾರ, ಡಾ. ಬೌರಮ್ಮ ಗಂಜಾರ. ಡಾ.ವಿಜಯಲಕ್ಷ್ಮೀ ಪಾಟೀಲ ಸೇರಿದಂತೆ ಇತರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...