ವಿಜಯಪುರ | ರೈತರಿಗೆ ತಾಂತ್ರಿಕ ಸಲಹೆ ನೀಡಿದರೆ ಕೃಷಿ ಉದ್ದಿಮೆದಾರರಾಗುತ್ತಾರೆ: ಡಾ. ಪಿ.ಎಲ್ ಪಾಟೀಲ್

Date:

ರೈತರಿಗೆ ಸಕಾಲದಲ್ಲಿ ಅಗತ್ಯ ನೆರವು, ಬೆಳೆ ಬೆಳೆಯಲು ತಾಂತ್ರಿಕ ಸಲಹೆ ನೀಡಿದರೆ ಅವರು ಕೂಡ ಉತ್ತಮ ಇಳುವರಿ ಪಡೆದು ಲಾಭಗಳಿಸಿ, ಟಾಟಾ ಬಿರ್ಲಾರ್ ಅಂತೆ ಕೃಷಿ ಉದ್ಯಮದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು ಧಾರವಾಡ ಕೃಷಿ ವಿವಿ ಕುಲಪತಿ ಪಿ.ಎಲ್.ಪಾಟೀಲ್ ಹೇಳಿದರು.

ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಜಯಪುರ ಮತ್ತು ಇಂಡಿ ಕೃಷಿ ವಿಜ್ಞಾನ ಕೇಂದ್ರಗಳ ಕ್ರಮವಾಗಿ 25 ಮತ್ತು 5ನೇಯ ವೈಜ್ಞಾನಿಕ ಸಲಹಾ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಮಳೆ ಕಡಿಮೆಯಾಗಿ  ಬರ ಪರಿಸ್ಥಿತಿ ತಲೆದೂರಿದೆ, ಕೃಷಿ ಅಥವಾ ತೋಟಗಾರಿಕೆ ಬೆಳೆಗಳಲ್ಲಿ ಅಧಿಕ ಕೀಟ ರೋಗ ಬಾದೆ, ಮಣ್ಣಿನಲ್ಲಿ ಅಗತ್ಯ ಪೋಷಕಾಂಶಗಳ ಕೊರತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅಧಿಕ ಇಳುವರಿ ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ವಿಜ್ಞಾನಿಗಳು ಹಾಗೂ ಕೃಷಿ, ಕೃಷಿ ಸಂಬಂಧಿ ಇಲಾಖೆ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎರಡೂ ಕೃಷಿ ವಿಜ್ಞಾನ ಕೇಂದ್ರಗಳು ರೈತರ ಗಾಗಿಯೇ ಸೇವೆ ಸಲ್ಲಿಸುತ್ತಿದ್ದು, ಕಬ್ಬು, ತೊಗರಿ, ಕಡಲೆ, ಜೋಳ, ಗೋಧಿ, ಅವಜಾನ ಇತ್ಯಾದಿ ಕೃಷಿ ಬೆಳೆಗಳು ದ್ರಾಕ್ಷಿ, ನಿಂಬೆ, ಬಾಳೆ, ದಾಳಿಂಬೆ ಹಾಗೂ ತರಕಾರಿ ಬೆಳೆಗಳ ಕುರಿತು ಕ್ಷೇತ್ರ ಪರಿಶೀಲನ ಪ್ರಯೋಗಗಳು, ಮುಂಚೂಣಿ ಪ್ರತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಜಿಲ್ಲೆಯ ರೈತರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ವಿವಿಧ ವಿಷಯಗಳಲ್ಲಿ ಹಾಗೂ ಉಪ ಕಸುಬುಗಳಾದ ಕೋಳಿ, ಕುರಿ ಸಾಕಾಣಿಕೆ, ಹೈನುಗಾರಿಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ. ರೈತರು ಇದರ ಲಾಭ ಪಡೆಯಬೇಕೆಂದು ತಿಳಿಸಿದರು.

ವಿಸ್ತರಣಾ ನಿರ್ದೇಶಕ ಡಾ. ಎಸ್‌.ಎಸ್. ಅಂಗಡಿ ಮಾತನಾಡಿ, ಜಿಲ್ಲೆಯು ಒಣ ಪ್ರದೇಶವಾಗಿದ್ದು, ಈಗ ನೀರಾವರಿ ಸೌಲಭ್ಯಕ್ಕೊಳಪಟ್ಟಿರುವುದರಿಂದ ವಿವಿಧ ಪದ್ಧತಿಗಳಾದ ಮೇಲ್ಮೈ, ಹನಿ, ತುಂತುರು ನೀರಾವರಿಯು ತೊಲನಾತ್ಮಕ ಪ್ರಯೋಗ ಮಾಡಬೇಕು. ಕಬ್ಬಿನಲ್ಲಿ ಉರಿ ಮಲ್ಲಿಗೆ ಸಮಸ್ಯೆ, ಅಜ್ವಾನ ಬೆಳೆಯ ಸಾಗುವಳಿ ಕ್ರಮಗಳು, ದ್ರಾಕ್ಷಿ ಮತ್ತು ಲಿಂಬೆಯಲ್ಲಿ ನಿಖರ ನಿರಾವರಿ, ತೋಟಗಾರಿಕೆ ಬೆಳೆಗಳಲ್ಲಿ ಚಾಟಿನಿ ಮಾಡುವ ಸಮಯ ಕುರಿತಂತೆ ಮಾಹಿತಿ ಒದಗಿಸಲು ಸಲಹೆ ನೀಡಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ. ವಿಲಿಯಂ ರಾಜಶೇಖರ್, ತೋಟಗಾರಿಕೆ ಉಪ ನಿರ್ದೇಶಕ ಡಾ. ರಾಹುಲ್ ಬಾವಿದೊಡ್ಡಿ ಅವರು ಇಲಾಖೆಯಿಂದ ಸಿಗುವ ಅಗತ್ಯ ಸಲಕರಣೆ, ಸೌಲಭ್ಯ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಇಂಡಿ ಹಾಗೂ ವಿಜಯಪುರ ಕೃಷಿ ವಿಜ್ಞಾನ ಕೇಂದ್ರದಿಂದ ವಿವಿಧ ವಿಷಯಗಳ 12 ವಿಸ್ತರಣಾ ಅಸ್ತ ಪ್ರತಿಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಕೃಷಿ ವಿದ್ಯಾಧಿಕಾರಿ ಡಾ. ಎ.ಭೀಮಪ್ಪ ಅಟಾರಿ ಬೆಂಗಳೂರು ಪ್ರತಿನಿಧಿ, ಡಾ. ಕೊಳೆಕರ, ಕೆವಿಕೆ ನೋಡಲ್ ಅಧಿಕಾರಿ ಡಾ. ಪಿ. ನಾಗರಾಜು, ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಸಹ ಸಂಶೋಧನಾ ನಿರ್ದೇಶಕ ಡಾ. ಅಶೋಕ್ ಸಜ್ಜನ್, ನವಾಡ್ ಜಿಲ್ಲಾ ವ್ಯವಸ್ಥಾಪಕ ವಿಕಾಸ ರಾಥೋಡ್, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಿದ್ದು ಪೂಜಾರಿ, ಪ್ರಗತಿಪರ ರೈತರದ ಸಿದ್ದಪ್ಪ ಬೂಸುಗೊಂಡ, ರಾಘವೇಂದ್ರ , ಇಂಡಿ ಹಾಗೂ ವಿಜಯಪುರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಸೇರಿದಂತೆ ಜಿಲ್ಲೆಯ ಸಲಹಾ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

ವಿಜಯಪುರ ಹಿರಿಯ ವಿಜ್ಞಾನಿ ಡಾ. ಎಸ್.ಎಂ. ವಸ್ತ್ರ ಸ್ವಾಗತಿಸಿದರು, ಇಂಡಿ ಹಿರಿಯ ವಿಜ್ಞಾನಿ ಡಾ. ಶಿವಶಂಕರ್ ಮೂರ್ತಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...