ವಿಜಯಪುರ | ಬಿಳೇನಿಸಿದ್ದ ಬಿರಾದಾರ ಅವರಿಗೆ ಪಿಎಚ್‌ಡಿ ಪದವಿ

Date:

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಬಿಳೇನಿಸಿದ್ದ ಬಿರಾದಾರ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಬಿಳೇನಿಸಿದ್ದ ಅವರು ʼವಿಜಯಪುರ ಜಿಲ್ಲೆ ಕುರುಬ ಸಮುದಾಯದ ಸಾಂಸ್ಕೃತಿಕ ಅಧ್ಯಯನʼ ಮಹಾಪ್ರಬಂಧವನ್ನು ಮಂಡಿಸಿದ್ದಾರೆ. ವಿವಿಯ ಕನ್ನಡ ವಿಭಾಗದ ಡಾ. ಅರುಣಾ. ಎಸ್. ಅವರ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಿದ್ದಾರೆ.

ಸಂಶೋಧನೆ ಕುರಿತು ಮಾತನಾಡಿರುವ ಬಿಳೇನಿಸಿದ್ದ ಅವರು, ಕುರುಬರನ್ನು ಒಂದು ಜಾತಿಗೆ ಸೀಮಿತಗೊಳಿಸಿದರೆ ಅದನ್ನು ಸಾಮಾಜಿಕವಾಗಿ ಹಾಲುಮತ ಸಮುದಾಯ ಎಂದು ಕರೆಯುವರು. ಜಾತಿಯಲ್ಲಿ ಅದೊಂದು ಸಮುದಾಯ ಪ್ರಜ್ಞೆ ಕೂಡಿಕೊಂಡು ಬೃಹತ್ ಸಮುದಾಯವಾಗಿದೆ. ಇಂತಹ ಸಮುದಾಯದಲ್ಲಿ ಅನೇಕ ಪಂಗಡಗಳನ್ನು ಕಾಣುತ್ತೇವೆ. ಆ ಎಲ್ಲ ಪಂಗಡಗಳು ವಿಜಯಪುರ ಜಿಲ್ಲೆಯಲ್ಲಿ ಹೇರಳವಾಗಿವೆ. ಇಲ್ಲಿನ ಹಾಲುಮತ ಸಮುದಾಯದ ಸಂಸ್ಕೃತಿ ಜನಜೀವನ, ಸಾಮಾಜಿಕ ಪರಿಸ್ಥಿತಿ, ಆರ್ಥಿಕತೆ, ಪೌರಾಣಿಕತೆ ಈ ಎಲ್ಲ ದೃಷ್ಟಿಯಲ್ಲಿ ನನ್ನ ಅಧ್ಯಯನ ಮಹತ್ವದ್ದಾಗಿದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...