ವಿಜಯಪುರ | ದಿ. ಬಲರಾಮ ಬಾಗಲಕೋಟ ಅವರ ಅಂಗಾಂಗ ದಾನ: ಕುಟುಂಬಸ್ಥರಿಗೆ ಉದ್ಯೋಗದ ಭರವಸೆ

Date:

ಅಂಗಾಂಗ ದಾನ ಮಾಡಿದ ದಿ. ಬಲರಾಮ ಬಾಗಲಕೋಟ ಅವರ ಕುಟುಂಬದ ಒಬ್ಬರಿಗೆ ಶಿಕ್ಷಣ ಅಥವಾ ಉದ್ಯೋಗ ನೀಡಲು ಬಿಎಲ್‌ಡಿಈ ಸಂಸ್ಥೆ ನಿರ್ಧರಿಸಿದೆ. ಅಲ್ಲದೆ, ಅವರ ಕುಟುಂಬಕ್ಕೆ ನಮ್ಮ ಆಸ್ಪತ್ರೆಯಿಂದ ಎಲ್ ಕಾರ್ಡ್(ಜೀವನಪರ್ಯಂತ ಉಚಿತ/ರಿಯಾಯಿತಿ ಚಿಕಿತ್ಸಾ ಸೌಲಭ್ಯದ ಕಾರ್ಡ್) ಒದಗಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಎಲ್‌ಡಿಇ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು.

ವಿಜಯಪುರ ನಗರದ ಬಿಎಲ್‌ಡಿಇ ಟೀಮ್ಡ್ ವಿವಿಯಲ್ಲಿ ಅಂಗಾಂಗ ದಾನಿ ಬಲರಾಮ ಕೃಷ್ಣ ಬಾಗಲಕೋಟೆ ಅವರ ಕುಟುಂಬಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿದರು.

“ಯುವಕ ದಿ. ಬಲರಾಮ ಮತ್ತು ಅವರ ಕುಟುಂಬದವರ ತ್ಯಾಗ ಸ್ಮರಣೀಯ. ಬಲರಾಮ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ಆಸರೆಯಾಗಿದ್ದಾರೆ. ಅವರಿಂದಲೇ ಬಸವ ನಾಡಿನಲ್ಲಿ ಅಂಗಾಂಗ ದಾನದ ಅಭಿಯಾನ ಆರಂಭವಾಗಿದೆ. ‘ಮಿಷನ್ ಬಲರಾಮ ಎನ್ನುವ ಈ ಅಭಿಯಾನದ ನೇತೃತ್ವವನ್ನು ಬಿಎಲ್‌ಡಿಇ ಸಂಸ್ಥೆ ವಹಿಸಲಿದೆ. ನಾನೇ ಪ್ರಥಮವಾಗಿ ಅಂಗಾಂಗ ದಾನದ ವಾಗ್ದಾನ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಲರಾಮನ ಕುಟುಂಬ ಅತ್ಯಂತ ನೋವಿನಲ್ಲೂ ಸಂಯಮ ಕಳೆದುಕೊಳ್ಳದೆ ಆತನ ಅಂಗಾಂಗ ದಾನ ಮಾಡಲು ಸಹಮತಿ ನೀಡಿದ್ದು ಸಮಾಜಕ್ಕೆ ಪ್ರೇರಣೆಯಾಗಿದೆ. ಸಾವಿನ ನಂತರವೂ ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾಗಬಹುದು ಎಂಬ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಇದೊಂದು ಮಾನವೀಯತೆಗೆ ದೊಡ್ಡ ಸಂದೇಶವಾಗಿದೆ. ಹೀಗಾಗಿ ಬಲರಾಮ ಅಮರರಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಡಾ.ಅರುಣ ಮಾತನಾಡಿ, “ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ದೇಹದಿಂದ ಹೃದಯ, ಶ್ವಾಶಕೋಶ, ಲಿವರ್, ಕಿಡ್ನಿ, ಪ್ಯಾಂಕ್ರಿಯಾಸಿಸ್, ಕಣ್ಣು ಗುಡ್ಡೆಗಳು, ಚರ್ಮ, ಎಲುಬು, ಹೃದಯದ ವಾಲ್ವಾ, ರಕ್ತನಾಳಗಳು, ಕೋಶಗಳ(ಟಿಶ್ಯೂ)ಗಳನ್ನು ದಾನ ಮಾಡಬಹುದು. ಅಂಗಾಂಗ ದಾನ ಜನಂದೋಲನದ ರೂಪ ಪಡೆಯಬೇಕಿದೆ. ಇದರಿಂದ ಅಂಗಾಗಗಳನ್ನು ನೀಡಿದ ನಂತರ ಇತರರಿಗೆ ನೆರವಾಗಬಹುದು” ಎಂದರು.

ಬಿಎಲ್‌ಡಿಇ ವಿವಿ ಕುಲಪತಿ ಡಾ. ಜಯರಾಜ, ಡಾ. ವಿಜಯಕುಮಾರ ಕಲ್ಯಾಣಪ್ಪ ಗೋಳ, ಡಾ.ಎಸ್ ಬಿ ಪಾಟೀಲ, ಡಾ.ತೇಜಸ್ವಿನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...