ವಿಜಯಪುರ | ಮನರೇಗಾ ಕಾಯ್ದೆ ಮರು ಜಾರಿಗೆ ಫೆ.12ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ: ವರಲಕ್ಷ್ಮಿ

Date:

ಮನರೇಗಾ ಕಾಯ್ದೆಯನ್ನು ಮರು ಜಾರಿ ಮಾಡುವುದು ಸೇರಿದಂತೆ ಸಂಘಟಿತ, ಅಸಂಘಟಿತ ಮತ್ತು ಸ್ಕೀಮ್ ಕಾರ್ಮಿಕರನ್ನು ಒಳಗೊಳ್ಳುವ ಕಾಯ್ದೆಗಳನ್ನು ಜಾರಿಗಾಗಿ ಒತ್ತಾಯಿಸಿ ಫೆಬ್ರುವರಿ 12ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ವರಲಕ್ಷ್ಮಿ ತಿಳಿಸಿದರು.

ವಿಜಯಪುರ ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ದೇಶದ ದುಡಿಯುವ ಸಮಸ್ತ ಜನಗಳು ಸ್ವಯಂ ಪ್ರೇರಿತವಾಗಿ ಈ ಮುಷ್ಕರವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.

“ನವ ಉದಾರವಾದಿ, ಬಂಡವಾಳ ಶಾಹಿ ಮತ್ತು ಕಾರ್ಪೋರೆಟ್‌ ಆಡಳಿತದಲ್ಲಿ ಕೋಮು ಸಂಬಂಧದ ದಾಳಿಯ ಸಂದರ್ಭದಲ್ಲಿ ಜನರ ಜೀವನ, ಜೀವನೋಪಾಯ ಮತ್ತು ಹಕ್ಕುಗಳ ಮೇಲಿನ ದಾಳಿ ನಿಲ್ಲಬೇಕು. ಕಾರ್ಮಿಕ ವಿರೋಧಿಯಾದ ನಾಲ್ಕು ಸಂಹಿತೆಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಸ್ವಾಧೀನ ಕಾಯ್ದೆ ರದ್ದುಪಡಿಸಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಸಾರ್ವಜನಿಕ ಕೈಗಾರಿಕೆಗಳು, ವಿದ್ಯುತ್, ಅಣು ವಿದ್ಯುತ್ ಒಳಗೊಂಡು ಮೂಲ ಸೌಕರ್ಯಗಳು, ಹಣಕಾಸು ವಲಯಗಳ ಖಾಸಗೀಕರಣ ನಿಲ್ಲಿಸಬೇಕು, ಉಚಿತ ಸಾರ್ವಜನಿಕ ಆರೋಗ್ಯ, ಶಿಕ್ಷಣ, ಎಲ್ಲರಿಗೂ ಪಿಂಚಣಿ ನೀಡಬೇಕು. 6 ತಾಸಿಗೆ ಕೆಲಸ ಸೀಮಿತಗೊಳಿಸಬೇಕು. ಕೆಲಸದ ಸ್ಥಳದಲ್ಲಿ ಸುರಕ್ಷತೆ, ಉದ್ಯೋಗ ಭದ್ರತೆ ನೀಡಬೇಕು, ಭೂಮಿಯ ಹಕ್ಕನ್ನು ಖಚಿತಪಡಿಸಬೇಕು. ಇದಕ್ಕಾಗಿ ಅತಿ ಶ್ರೀಮಂತರ ಮೇಲೆ ಶೇಕಡ ಎರಡರಷ್ಟು ಸಂಪತ್ತಿನ ತೆರಿಗೆ ಮತ್ತು ಪಿತ್ರಾರ್ಜಿತ ತೆರಿಗೆಗಳನ್ನು ಹಾಕಬೇಕು. ಜನರ ಬದುಕಿನ ಹಕ್ಕುಗಳನ್ನು ಉಳಿಸಬೇಕು” ಎಂದು ಒತ್ತಾಯಿಸಿದರು.

“ಕೈಗಾರಿಕಾ ಅಪಘಾತಗಳಲ್ಲಿ ಸಾವಿರಾರು ಕಾರ್ಮಿಕರು ಸಾಯುತ್ತಿದ್ದಾರೆ. ಶ್ವಾಸಕೋಶದ ಕಾಯಿಲೆ, ಖಿನ್ನತೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುವ ದುಡಿಮೆಗಾರರನ್ನು ರಕ್ಷಿಸುವ ಬದಲು ಮತ್ತಷ್ಟು ಅವರ ರಕ್ತವನ್ನು ಹೀರಲು ಸರ್ಕಾರ ಅನುಮತಿ ನೀಡಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವಿಬಿ-ಜಿ ರಾಮ್‌ಜಿ ವಿರೋಧಿಸಿ ಗ್ರಾಮೀಣ ಕಾರ್ಮಿಕರ ಮೌನ ಪ್ರತಿಭಟನೆ

ಸಿಐಟಿಯು ರಾಜ್ಯ ಉಪಾಧ್ಯಕ್ಷ ಕಾಂತ ಘಂಟಿ, ಜಿಲ್ಲಾ ಸಂಚಾಲಕ ಲಕ್ಷ್ಮಣ್ ಹಂದರಾಳ, ಅಣ್ಣಾರ ಈಳಿಗೇರಾ, ಮಹಿಳಾ ಸಂಘಟನೆಯ ಸುರೇಖಾ ರಜಪೂತ, ಅಂಗನವಾಡಿ ನೌಕರರ ಸಂಘದ ಎಲ್ಲ ಅಧ್ಯಕ್ಷರಾದ ಸುನಂದ ನಾಯಕ, ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ, ಗೌರವ ಅಧ್ಯಕ್ಷೆ ಭಾರತಿ ವಾಲಿ, ಸರಸ್ವತಿ ಮಠ, ಬಿಸಿ ಊಟ ಸಂಘಟನೆಯ ಸುಮಂಗಲ ಆನಂದ ಶೆಟ್ಟಿ, ಗ್ರಾಮ ಪಂಚಾಯತಿ ನೌಕರರ ಸಂಘದ ಲಾಲ್ ಅಹಮ್ಮದ್ ಶೇಕ್, ನಿವೃತ್ತ ನೌಕರರ ಸಂಘ ಜಿಬಿ ಸುರೇಶ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಭೀಮರಾಯ ಪೂಜಾರಿ, ಕಟ್ಟಡ ಕಾರ್ಮಿಕ ಸಂಘ ವೀರಣ್ಣ ಬಾಳುಂಡಗಿ, ಕರ್ನಾಟಕ ಪದ್ಮ ರೈತ ಸಂಘ ಕಾಜಾ ಸಾಬ್ ಕೋಲಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...